<p><strong>ಧಾರವಾಡ:</strong> ಅಂಗನವಾಡಿ ನೌಕರರ ಗೌರವಧನವನ್ನು ₹ 15 ಸಾವಿರಕ್ಕೆ ಹೆಚ್ಚಳ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಾಕಾರರು, ಹಿಂದಿನ ಬಜೆಟ್ನಲ್ಲಿ ಘೋಷಿಸಿದ ಅಂಶಗಳನ್ನು ಜಾರಿಗೊಳಿಸಬೇಕು. ಗುಣಮಟ್ಟದ ಮೊಬೈಲ್ ಫೋನ್ ಒದಗಿಸಬೇಕು. ಇಂಟರ್ನೆಟ್ ಸೌಲಭ್ಯ ನೀಡಬೇಕು. ಹೆಚ್ಚುವರಿ ಕೆಲಸ ನೀಡಬಾರದು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಸಂಚಾಲಕಿ ಭುವನಾ ಬಳ್ಳಾರಿ ಮಾನತಾಡಿ, ‘ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದರೆ ಅಂಗನವಾಡಿ ನೌಕರರ ಗೌರವಧನವನ್ನು ₹ 15 ಸಾವಿರಕ್ಕೆ ಹೆಚ್ಚಿಸುವುದಾಗಿ ಮತ್ತು ನಿವೃತ್ತಿ ಪರಿಹಾರ ₹ 2 ಲಕ್ಷ ನೀಡುವುದಾಗಿ ಚುನಾವಣೆ ಸಂದರ್ಭದಲ್ಲಿ ಘೋಷಿಸಿತ್ತು. ಈ ಭರವಸೆ ಕಾರ್ಯಗತಗೊಳಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<p>ಕಸ್ತೂರಿ ಅಗಸಿಮನಿ, ಸರೋಜಾ ಹುಲಸೇರ,ಕವಿತಾ ಮಸೂತಿ, ರತ್ನಾ ಗಾಣಿಗೇರ, ಶ್ರೀದೇವಿ ತೇಗೂರ, ಚನ್ನಮ್ಮ ತಡಕೋಡ, ಮಂಜುಳಾ ಕಂಬಳಿ, ಶ್ರೀದೇವಿ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಅಂಗನವಾಡಿ ನೌಕರರ ಗೌರವಧನವನ್ನು ₹ 15 ಸಾವಿರಕ್ಕೆ ಹೆಚ್ಚಳ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಾಕಾರರು, ಹಿಂದಿನ ಬಜೆಟ್ನಲ್ಲಿ ಘೋಷಿಸಿದ ಅಂಶಗಳನ್ನು ಜಾರಿಗೊಳಿಸಬೇಕು. ಗುಣಮಟ್ಟದ ಮೊಬೈಲ್ ಫೋನ್ ಒದಗಿಸಬೇಕು. ಇಂಟರ್ನೆಟ್ ಸೌಲಭ್ಯ ನೀಡಬೇಕು. ಹೆಚ್ಚುವರಿ ಕೆಲಸ ನೀಡಬಾರದು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಸಂಚಾಲಕಿ ಭುವನಾ ಬಳ್ಳಾರಿ ಮಾನತಾಡಿ, ‘ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದರೆ ಅಂಗನವಾಡಿ ನೌಕರರ ಗೌರವಧನವನ್ನು ₹ 15 ಸಾವಿರಕ್ಕೆ ಹೆಚ್ಚಿಸುವುದಾಗಿ ಮತ್ತು ನಿವೃತ್ತಿ ಪರಿಹಾರ ₹ 2 ಲಕ್ಷ ನೀಡುವುದಾಗಿ ಚುನಾವಣೆ ಸಂದರ್ಭದಲ್ಲಿ ಘೋಷಿಸಿತ್ತು. ಈ ಭರವಸೆ ಕಾರ್ಯಗತಗೊಳಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<p>ಕಸ್ತೂರಿ ಅಗಸಿಮನಿ, ಸರೋಜಾ ಹುಲಸೇರ,ಕವಿತಾ ಮಸೂತಿ, ರತ್ನಾ ಗಾಣಿಗೇರ, ಶ್ರೀದೇವಿ ತೇಗೂರ, ಚನ್ನಮ್ಮ ತಡಕೋಡ, ಮಂಜುಳಾ ಕಂಬಳಿ, ಶ್ರೀದೇವಿ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>