<p><strong>ಲಕ್ಷ್ಮೇಶ್ವರ:</strong> ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಶುಕ್ರವಾರ ನಸುಕಿನ ಜಾವದಿಂದಲೇ ತುಂತುರು ಮಳೆ ಆರಂಭಗೊಂಡಿದೆ. ಹೀಗಾಗಿ ಶಾಲೆ, ಕಾಲೇಜಿಗಳಿಗೆ ಹೋಗುವ ಮಕ್ಕಳು ಮಳೆಯಲ್ಲಿಯೇ ಹೋಗಬೇಕಾದ ಪರಿಸ್ಥಿತಿ ಇತ್ತು. ಅದರಂತೆ ಕೆಲಸ, ಕಾರ್ಯಗಳಿಗೆ ಹೋಗುವವರಿಗೆ ಮಳೆ ಅಡ್ಡಿಪಡಿಸಿತು.</p>.<p>ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಡಾ.ಮಲ್ಲಾಡದವರ ಕಾಲೊನಿ, ಮೂಕಬಸವೇಶ್ವರ ನಗರ, ಲಕ್ಷ್ಮಿನಗರ, ಈಶ್ವರ ನಗರ, ಹಮಾಲರ ಕಾಲೊನಿ ಒಳಗೊಂಡಂತೆ ಮತ್ತಿತರ ಭಾಗಗಲ್ಲಿನ ರಸ್ತೆಗಳೆಲ್ಲ ಕೆಸರುಮಯವಾಗಿವೆ. ಇದರಿಂದ ನಿವಾಸಿಗಳು, ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಗಿದೆ.</p>.<p>‘ರಸ್ತೆಗಳು ದುರಸ್ತಿ ಆಗದ ಕಾರಣಕ್ಕೆ ಗುಂಡಿಗಳಲ್ಲಿ ನೀರು, ಕೆಸರು ತುಂಬಿಕೊಂಡು ಬೈಕ್ಗಳು ಸ್ಕಿಡ್ ಆಗಿ ಸವಾರರು ಗಾಯಗೊಂಡ ಘಟನೆಗಳು ನಡೆದಿದೆ. ಆದಷ್ಟು ಬೇಗ ರಸ್ತೆಗಳನ್ನು ದುರಸ್ತಿ ಮಾಡಬೇಕು’ ಎಂದು ಬಡಾವಣೆಗಳ ನಿವಾಸಿಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಶುಕ್ರವಾರ ನಸುಕಿನ ಜಾವದಿಂದಲೇ ತುಂತುರು ಮಳೆ ಆರಂಭಗೊಂಡಿದೆ. ಹೀಗಾಗಿ ಶಾಲೆ, ಕಾಲೇಜಿಗಳಿಗೆ ಹೋಗುವ ಮಕ್ಕಳು ಮಳೆಯಲ್ಲಿಯೇ ಹೋಗಬೇಕಾದ ಪರಿಸ್ಥಿತಿ ಇತ್ತು. ಅದರಂತೆ ಕೆಲಸ, ಕಾರ್ಯಗಳಿಗೆ ಹೋಗುವವರಿಗೆ ಮಳೆ ಅಡ್ಡಿಪಡಿಸಿತು.</p>.<p>ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಡಾ.ಮಲ್ಲಾಡದವರ ಕಾಲೊನಿ, ಮೂಕಬಸವೇಶ್ವರ ನಗರ, ಲಕ್ಷ್ಮಿನಗರ, ಈಶ್ವರ ನಗರ, ಹಮಾಲರ ಕಾಲೊನಿ ಒಳಗೊಂಡಂತೆ ಮತ್ತಿತರ ಭಾಗಗಲ್ಲಿನ ರಸ್ತೆಗಳೆಲ್ಲ ಕೆಸರುಮಯವಾಗಿವೆ. ಇದರಿಂದ ನಿವಾಸಿಗಳು, ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಗಿದೆ.</p>.<p>‘ರಸ್ತೆಗಳು ದುರಸ್ತಿ ಆಗದ ಕಾರಣಕ್ಕೆ ಗುಂಡಿಗಳಲ್ಲಿ ನೀರು, ಕೆಸರು ತುಂಬಿಕೊಂಡು ಬೈಕ್ಗಳು ಸ್ಕಿಡ್ ಆಗಿ ಸವಾರರು ಗಾಯಗೊಂಡ ಘಟನೆಗಳು ನಡೆದಿದೆ. ಆದಷ್ಟು ಬೇಗ ರಸ್ತೆಗಳನ್ನು ದುರಸ್ತಿ ಮಾಡಬೇಕು’ ಎಂದು ಬಡಾವಣೆಗಳ ನಿವಾಸಿಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>