<p><strong>ಗದಗ</strong>: ಅವಳಿ ನಗರ ಗದಗ ಬೆಟಗೇರಿಯಲ್ಲಿ ಶನಿವಾರ ಇಡೀ ದಿನ ಜಿಟಿ ಜಿಟಿ ಮಳೆ ಸುರಿದ ಪರಿಣಾಮ ಜನರ ದಿನನಿತ್ಯದ ಚಟುವಟಿಕೆಗಳಿಗೆ ಅಡ್ಡಿಯಾಗಿ, ಮಂದಗತಿ ಪಡೆದುಕೊಂಡವು.</p>.<p>ಶನಿವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಆರಂಭದಿಂದಲೂ ಜಿಟಿಜಿಟಿ ಮಳೆ ಜತೆಗೆ ಬಿರುಗಾಳಿ ಕೂಡ ಇತ್ತು. ಐದು ನಿಮಿಷ ಮಳೆ ಸುರಿದರೆ; ನಂತರ ತಣ್ಣನೆಯ ಗಾಳಿ ಜೋರಾಗಿ ಬೀಸುತ್ತಿತ್ತು. ಈ ಕಣ್ಣಾಮುಚ್ಚಾಲೆ ಆಟ ಇಡೀ ದಿನ ಮುಂದುವರಿಯಿತು.</p>.<p>ಜಿಟಿ ಮಳೆಯ ಕಾರಣದಿಂದಾಗಿ ಶಾಲೆಗೆ ಹೋಗುವ ಮಕ್ಕಳು ತೊಂದರೆ ಅನುಭವಿಸಿದರು. ಬೈಕ್ ಸವಾರರು ಮಳೆ ಬಂದಾಗ ರಸ್ತೆ ಬದಿಗೆ ಬೈಕ್ ನಿಲ್ಲಿಸಿ, ಮರ ಹಾಗೂ ಕಟ್ಟಡಗಳನ್ನು ಆಶ್ರಯಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿ ಕಂಡುಬಂದವು.</p>.<p>ಜನನಿಬಿಡ ಪ್ರದೇಶವಾದ ತರಕಾರಿ ಮಾರುಕಟ್ಟೆ, ನಾಮಜೋಶಿ ರಸ್ತೆ, ಸ್ಟೇಷನ್ ರಸ್ತೆಯಲ್ಲಿ ಜನ ಸಂಚಾರ ವಿರಳವಾಗಿತ್ತು. ಜಡಿ ಮಳೆಯ ಕಾರಣ ಹೆಚ್ಚಿನ ಜನರು ಮನೆಯಲ್ಲೇ ಉಳಿದುಕೊಂಡಿದ್ದರು.</p>.<p>ಜಿಲ್ಲಾಡಳಿತದ ಸೂಚನೆಯಂತೆ ನಗರಸಭೆಯು ಡೆಂಗಿ ನಿಯಂತ್ರಣಕ್ಕಾಗಿ ಚರಂಡಿ ಸ್ವಚ್ಛತೆಗೆ ಕ್ರಮವಹಿಸಿದೆ. ಆದರೆ, ಚರಂಡಿಯಿಂದ ಹೊರತೆಗೆದ ತ್ಯಾಜ್ಯವನ್ನು ರಸ್ತೆ ಪಕ್ಕದಲ್ಲೇ ಬಿಟ್ಟಿದ್ದಾರೆ. ತ್ಯಾಜ್ಯವನ್ನು ಹೊರತೆಗೆದು ಅದನ್ನು ವಿಲೇವಾರಿ ಮಾಡಿಲ್ಲ. ಶನಿವಾರ ಸುರಿದ ಜಿಟಿಜಿಟಿ ಮಳೆಗೆ ಚರಂಡಿ ತ್ಯಾಜ್ಯವೆಲ್ಲವೂ ರಸ್ತೆಯ ಮೇಲೆ ಹರಡಿ ಬಿದ್ದಿತ್ತು. ಇದು ಸಾಂಕ್ರಾಮಿಕ ರೋಗಭೀತಿ ಮತ್ತಷ್ಟು ಹೆಚ್ಚಿಸಿತ್ತು. ಚರಂಡಿ ತ್ಯಾಜ್ಯ ವಿಲೇವಾರಿಗೆ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಅವಳಿ ನಗರ ಗದಗ ಬೆಟಗೇರಿಯಲ್ಲಿ ಶನಿವಾರ ಇಡೀ ದಿನ ಜಿಟಿ ಜಿಟಿ ಮಳೆ ಸುರಿದ ಪರಿಣಾಮ ಜನರ ದಿನನಿತ್ಯದ ಚಟುವಟಿಕೆಗಳಿಗೆ ಅಡ್ಡಿಯಾಗಿ, ಮಂದಗತಿ ಪಡೆದುಕೊಂಡವು.</p>.<p>ಶನಿವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಆರಂಭದಿಂದಲೂ ಜಿಟಿಜಿಟಿ ಮಳೆ ಜತೆಗೆ ಬಿರುಗಾಳಿ ಕೂಡ ಇತ್ತು. ಐದು ನಿಮಿಷ ಮಳೆ ಸುರಿದರೆ; ನಂತರ ತಣ್ಣನೆಯ ಗಾಳಿ ಜೋರಾಗಿ ಬೀಸುತ್ತಿತ್ತು. ಈ ಕಣ್ಣಾಮುಚ್ಚಾಲೆ ಆಟ ಇಡೀ ದಿನ ಮುಂದುವರಿಯಿತು.</p>.<p>ಜಿಟಿ ಮಳೆಯ ಕಾರಣದಿಂದಾಗಿ ಶಾಲೆಗೆ ಹೋಗುವ ಮಕ್ಕಳು ತೊಂದರೆ ಅನುಭವಿಸಿದರು. ಬೈಕ್ ಸವಾರರು ಮಳೆ ಬಂದಾಗ ರಸ್ತೆ ಬದಿಗೆ ಬೈಕ್ ನಿಲ್ಲಿಸಿ, ಮರ ಹಾಗೂ ಕಟ್ಟಡಗಳನ್ನು ಆಶ್ರಯಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿ ಕಂಡುಬಂದವು.</p>.<p>ಜನನಿಬಿಡ ಪ್ರದೇಶವಾದ ತರಕಾರಿ ಮಾರುಕಟ್ಟೆ, ನಾಮಜೋಶಿ ರಸ್ತೆ, ಸ್ಟೇಷನ್ ರಸ್ತೆಯಲ್ಲಿ ಜನ ಸಂಚಾರ ವಿರಳವಾಗಿತ್ತು. ಜಡಿ ಮಳೆಯ ಕಾರಣ ಹೆಚ್ಚಿನ ಜನರು ಮನೆಯಲ್ಲೇ ಉಳಿದುಕೊಂಡಿದ್ದರು.</p>.<p>ಜಿಲ್ಲಾಡಳಿತದ ಸೂಚನೆಯಂತೆ ನಗರಸಭೆಯು ಡೆಂಗಿ ನಿಯಂತ್ರಣಕ್ಕಾಗಿ ಚರಂಡಿ ಸ್ವಚ್ಛತೆಗೆ ಕ್ರಮವಹಿಸಿದೆ. ಆದರೆ, ಚರಂಡಿಯಿಂದ ಹೊರತೆಗೆದ ತ್ಯಾಜ್ಯವನ್ನು ರಸ್ತೆ ಪಕ್ಕದಲ್ಲೇ ಬಿಟ್ಟಿದ್ದಾರೆ. ತ್ಯಾಜ್ಯವನ್ನು ಹೊರತೆಗೆದು ಅದನ್ನು ವಿಲೇವಾರಿ ಮಾಡಿಲ್ಲ. ಶನಿವಾರ ಸುರಿದ ಜಿಟಿಜಿಟಿ ಮಳೆಗೆ ಚರಂಡಿ ತ್ಯಾಜ್ಯವೆಲ್ಲವೂ ರಸ್ತೆಯ ಮೇಲೆ ಹರಡಿ ಬಿದ್ದಿತ್ತು. ಇದು ಸಾಂಕ್ರಾಮಿಕ ರೋಗಭೀತಿ ಮತ್ತಷ್ಟು ಹೆಚ್ಚಿಸಿತ್ತು. ಚರಂಡಿ ತ್ಯಾಜ್ಯ ವಿಲೇವಾರಿಗೆ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>