ಗದಗ: ‘ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅ.15ರಂದು ಸಮಾಜದ ಪ್ರಮುಖ ವಕೀಲರ ಸಭೆ ಕರೆದಿದ್ದಾರೆ. ಆದರೆ, ಸಭೆ ನಡೆಸುವ ಸ್ಥಳ, ಸಮಯವನ್ನು ಇನ್ನೂ ನಿಗದಿಗೊಳಿಸಿಲ್ಲ. ಕೂಡಲೇ ಇದನ್ನು ಪ್ರಕಟಿಸಬೇಕು’ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಶನಿವಾರ ಆಗ್ರಹಿಸಿದರು.