<p><strong>ಗದಗ:</strong> ‘ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಕಷ್ಟು ಅವಕಾಶಗಳಿದ್ದು, ಗದಗ ನಗರಾಭಿವೃದ್ಧಿ ಪ್ರಾಧಿಕಾರ ನಿಯಮಾನುಸಾರ ಕೆಲಸ ನಿರ್ವಹಿಸುವ ಮೂಲಕ ಯೋಜಿತ ನಗರ ನಿರ್ಮಾಣಕ್ಕೆ ಕ್ರಮವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸೂಚಿಸಿದರು.</p>.<p>ನಗರದ ಗಾಂಧಿ ವೃತ್ತದ ಸಮೀಪ ಇರುವ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ನಗರದಲ್ಲಿ ಉದ್ಯಾನಗಳ ನಿರ್ಮಾಣವಾಗಬೇಕಿದ್ದು, ಸಾರ್ವಜನಿಕರಿಗೆ ಉಪಯೋಗವಾಗುವಂಥ ಸ್ಥಳಗಳನ್ನು ಗುರುತಿಸಬೇಕು. ಅಲ್ಲಿ ಉದ್ಯಾನಗಳ ನಿರ್ಮಾಣಕ್ಕೆ ಕ್ರಮವಹಿಸಬೇಕು’ ಎಂದು ಸೂಚಿಸಿದರು.</p>.<p>‘ಕಾನೂನು ಬಾಹಿರವಾಗಿ ಮತ್ತು ಅವೈಜ್ಞಾನಿಕವಾಗಿ ನಿರ್ಮಾಣಗೊಳ್ಳುವ ಕಟ್ಟಡಗಳನ್ನು ಮೊದಲ ಹಂತದಲ್ಲಿಯೇ ಗುರುತಿಸಿ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಆಗ ಮಾತ್ರ ಗದಗ ನಗರ ವೈಜ್ಞಾನಿಕ ರೀತಿಯಲ್ಲಿ ಅಭಿವೃದ್ಧಿಗೊಳ್ಳುತ್ತದೆ’ ಎಂದು ತಿಳಿಸಿದರು</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಸ್.ಸಿ.ಬೇವೂರು ಸಭೆಯ ನಡಾವಳಿಗಳನ್ನು ಸಲ್ಲಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ ಮಾತನಾಡಿದರು.</p>.<p>ಪ್ರಾಧಿಕಾರದ ಸದಸ್ಯರಾದ ಬಸವರಾಜ ಕಡೇಮನಿ ಸ್ವಾಗತಿಸಿದರು. ಜಾನಕಿ ಮಲ್ಲಾಪೂರ, ಚಂದ್ರಶೇಖರ ತಡಪದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಕಷ್ಟು ಅವಕಾಶಗಳಿದ್ದು, ಗದಗ ನಗರಾಭಿವೃದ್ಧಿ ಪ್ರಾಧಿಕಾರ ನಿಯಮಾನುಸಾರ ಕೆಲಸ ನಿರ್ವಹಿಸುವ ಮೂಲಕ ಯೋಜಿತ ನಗರ ನಿರ್ಮಾಣಕ್ಕೆ ಕ್ರಮವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸೂಚಿಸಿದರು.</p>.<p>ನಗರದ ಗಾಂಧಿ ವೃತ್ತದ ಸಮೀಪ ಇರುವ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ನಗರದಲ್ಲಿ ಉದ್ಯಾನಗಳ ನಿರ್ಮಾಣವಾಗಬೇಕಿದ್ದು, ಸಾರ್ವಜನಿಕರಿಗೆ ಉಪಯೋಗವಾಗುವಂಥ ಸ್ಥಳಗಳನ್ನು ಗುರುತಿಸಬೇಕು. ಅಲ್ಲಿ ಉದ್ಯಾನಗಳ ನಿರ್ಮಾಣಕ್ಕೆ ಕ್ರಮವಹಿಸಬೇಕು’ ಎಂದು ಸೂಚಿಸಿದರು.</p>.<p>‘ಕಾನೂನು ಬಾಹಿರವಾಗಿ ಮತ್ತು ಅವೈಜ್ಞಾನಿಕವಾಗಿ ನಿರ್ಮಾಣಗೊಳ್ಳುವ ಕಟ್ಟಡಗಳನ್ನು ಮೊದಲ ಹಂತದಲ್ಲಿಯೇ ಗುರುತಿಸಿ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಆಗ ಮಾತ್ರ ಗದಗ ನಗರ ವೈಜ್ಞಾನಿಕ ರೀತಿಯಲ್ಲಿ ಅಭಿವೃದ್ಧಿಗೊಳ್ಳುತ್ತದೆ’ ಎಂದು ತಿಳಿಸಿದರು</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಸ್.ಸಿ.ಬೇವೂರು ಸಭೆಯ ನಡಾವಳಿಗಳನ್ನು ಸಲ್ಲಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ ಮಾತನಾಡಿದರು.</p>.<p>ಪ್ರಾಧಿಕಾರದ ಸದಸ್ಯರಾದ ಬಸವರಾಜ ಕಡೇಮನಿ ಸ್ವಾಗತಿಸಿದರು. ಜಾನಕಿ ಮಲ್ಲಾಪೂರ, ಚಂದ್ರಶೇಖರ ತಡಪದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>