<p><strong>ಹಾಸನ</strong>: ನಗರದಾದ್ಯಂತ ಹೆಚ್ಚುತ್ತಿರುವ ಬೀದಿನಾಯಿ ಉಪಟಳದಿಂದ ಬೇಸತ್ತಿರುವ ನಾಗರಿಕರು ದೂರುಗಳನ್ನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನಗರಸಭೆಯಿಂದ ಬೀದಿ ನಾಯಿ ಸೆರೆ ಕಾರ್ಯಾಚರಣೆ ಸೋಮವಾರ ಆರಂಭಿಸಲಾಗಿದೆ.</p>.<p>ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ನಗರಸಭೆ ಸಾಮಾನ್ಯ ಸಭೆಗಳಲ್ಲಿಯೂ ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ನಗರಾಭಿವೃದ್ಧಿ ಹಾಗೂ ಪಶು ಪಾಲನಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ ಹಿನ್ನೆಲೆಯಲ್ಲಿ ಬೀದಿ ನಾಯಿ ಸೆರೆ ಕಾರ್ಯಾಚರಣೆ ಆರಂಭವಾಗಿದೆ.</p>.<p>ಈ ಕುರಿತು ವಿವರ ನೀಡಿದ ನಗರಸಭೆಯ ಪರಿಸರ ಎಂಜಿನಿಯರ್ ವೆಂಕಟೇಶ್, ‘ನಗರದಲ್ಲಿ 2,300 ಬೀದಿ ನಾಯಿಗಳನ್ನು ಸೆರೆಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮುಂದಿನ ನಾಲ್ಕು ತಿಂಗಳು ಕಾರ್ಯಾಚರಣೆ ನಡೆಯಲಿದೆ ಎಂದರು.</p>.<p>ನಗರದ ಎಲ್ಲ ವಾರ್ಡ್ಗಳಿಗೆ ತೆರಳಿ ನಗರಸಭೆ ವತಿಯಿಂದ ಬೀದಿ ನಾಯಿಗಳನ್ನು ಸೆರೆ ಹಿಡಿಯಲಾಗುವುದು. ನಂತರ ಕೈಗಾರಿಕಾ ಪ್ರದೇಶದಲ್ಲಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲು ಈಗಾಗಲೇ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಚಿಕಿತ್ಸೆ ನಂತರ ಎಲ್ಲ ನಾಯಿಗಳನ್ನು ಸೆರೆ ಹಿಡಿದ ಸ್ಥಳಗಳಿಗೆ ತಂದು ಬಿಡಲಾಗುವುದು. ಸಾರ್ವಜನಿಕರು ಬೀದಿ ನಾಯಿಗಳ ಸೆರೆ ಕಾರ್ಯಾಚರಣೆ ವೇಳೆ, ತಮ್ಮ ಸಾಕು ನಾಯಿಗಳನ್ನು ಮನೆಯಲ್ಲಿಯೇ ಇಟ್ಟುಕೊಳ್ಳಬೇಕು. ಕಾರ್ಯಾಚರಣೆ ವೇಳೆ ಸಾಕು ನಾಯಿಗಳು ಸೆರೆಯಾದರೆ, ನಗರಸಭೆ ಜವಾಬ್ದಾರಿ ಆಗುವುದಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಕಳೆದ ಎರಡು ವರ್ಷದಿಂದ ಬೀದಿನಾಯಿಗಳ ಸೆರೆ ಕಾರ್ಯಾಚರಣೆ ನಡೆಯದೆ ನಾಯಿಗಳ ಸಂತತಿ ಹೆಚ್ಚಾಗಿದ್ದು, ಇನ್ನು ಮುಂದೆ ಪ್ರತಿವರ್ಷ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಡೆಸಲಾಗುವುದು. ಇದಕ್ಕಾಗಿಯೇ ನಗರಸಭೆಗೆ ಅನುದಾನ ಮೀಸಲಿಡಲಾಗಿದೆ ಎಂದು ವಿವರಿಸಿದರು.</p>.<p>ನಗರದಾದ್ಯಂತ ಬೀದಿನಾಯಿಗಳ ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರು ಮಕ್ಕಳನ್ನು ಹೊರಗೆ ಬಿಡಲು ಹಿಂದೇಟು ಹಾಕುವಂತಾಗಿತ್ತು. ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘ನಮ್ಮ ಜನ ನಮ್ಮ ಧ್ವನಿ’ ವಿಶೇಷ ವರದಿ ಪ್ರಕಟಿಸಲಾಗಿತ್ತು.</p>.<p>ನಾಲ್ಕು ತಿಂಗಳು ನಡೆಯಲಿರುವ ಸೆರೆ ಕಾರ್ಯಾಚರಣೆ ಸಾಕು ನಾಯಿಗಳನ್ನು ಮನೆಗಳಲ್ಲಿಯೇ ಕಟ್ಟಲು ಮನವಿ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾರ್ಯಾಚರಣೆ</p>.<p> <strong>2 ವರ್ಷಗಳ ಹಿಂದೆ ಒಂದು ಸಾವಿರ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಲಾಗಿತ್ತು. ಜಿಯೋ ಟ್ಯಾಗ್ ಅಳವಡಿಸಲಾಗಿತ್ತು </strong></p><p><strong>-ವೆಂಕಟೇಶ್ ನಗರಸಭೆ ಪರಿಸರ ಎಂಜಿನಿಯರ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದಾದ್ಯಂತ ಹೆಚ್ಚುತ್ತಿರುವ ಬೀದಿನಾಯಿ ಉಪಟಳದಿಂದ ಬೇಸತ್ತಿರುವ ನಾಗರಿಕರು ದೂರುಗಳನ್ನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನಗರಸಭೆಯಿಂದ ಬೀದಿ ನಾಯಿ ಸೆರೆ ಕಾರ್ಯಾಚರಣೆ ಸೋಮವಾರ ಆರಂಭಿಸಲಾಗಿದೆ.</p>.<p>ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ನಗರಸಭೆ ಸಾಮಾನ್ಯ ಸಭೆಗಳಲ್ಲಿಯೂ ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ನಗರಾಭಿವೃದ್ಧಿ ಹಾಗೂ ಪಶು ಪಾಲನಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ ಹಿನ್ನೆಲೆಯಲ್ಲಿ ಬೀದಿ ನಾಯಿ ಸೆರೆ ಕಾರ್ಯಾಚರಣೆ ಆರಂಭವಾಗಿದೆ.</p>.<p>ಈ ಕುರಿತು ವಿವರ ನೀಡಿದ ನಗರಸಭೆಯ ಪರಿಸರ ಎಂಜಿನಿಯರ್ ವೆಂಕಟೇಶ್, ‘ನಗರದಲ್ಲಿ 2,300 ಬೀದಿ ನಾಯಿಗಳನ್ನು ಸೆರೆಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮುಂದಿನ ನಾಲ್ಕು ತಿಂಗಳು ಕಾರ್ಯಾಚರಣೆ ನಡೆಯಲಿದೆ ಎಂದರು.</p>.<p>ನಗರದ ಎಲ್ಲ ವಾರ್ಡ್ಗಳಿಗೆ ತೆರಳಿ ನಗರಸಭೆ ವತಿಯಿಂದ ಬೀದಿ ನಾಯಿಗಳನ್ನು ಸೆರೆ ಹಿಡಿಯಲಾಗುವುದು. ನಂತರ ಕೈಗಾರಿಕಾ ಪ್ರದೇಶದಲ್ಲಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲು ಈಗಾಗಲೇ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಚಿಕಿತ್ಸೆ ನಂತರ ಎಲ್ಲ ನಾಯಿಗಳನ್ನು ಸೆರೆ ಹಿಡಿದ ಸ್ಥಳಗಳಿಗೆ ತಂದು ಬಿಡಲಾಗುವುದು. ಸಾರ್ವಜನಿಕರು ಬೀದಿ ನಾಯಿಗಳ ಸೆರೆ ಕಾರ್ಯಾಚರಣೆ ವೇಳೆ, ತಮ್ಮ ಸಾಕು ನಾಯಿಗಳನ್ನು ಮನೆಯಲ್ಲಿಯೇ ಇಟ್ಟುಕೊಳ್ಳಬೇಕು. ಕಾರ್ಯಾಚರಣೆ ವೇಳೆ ಸಾಕು ನಾಯಿಗಳು ಸೆರೆಯಾದರೆ, ನಗರಸಭೆ ಜವಾಬ್ದಾರಿ ಆಗುವುದಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಕಳೆದ ಎರಡು ವರ್ಷದಿಂದ ಬೀದಿನಾಯಿಗಳ ಸೆರೆ ಕಾರ್ಯಾಚರಣೆ ನಡೆಯದೆ ನಾಯಿಗಳ ಸಂತತಿ ಹೆಚ್ಚಾಗಿದ್ದು, ಇನ್ನು ಮುಂದೆ ಪ್ರತಿವರ್ಷ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಡೆಸಲಾಗುವುದು. ಇದಕ್ಕಾಗಿಯೇ ನಗರಸಭೆಗೆ ಅನುದಾನ ಮೀಸಲಿಡಲಾಗಿದೆ ಎಂದು ವಿವರಿಸಿದರು.</p>.<p>ನಗರದಾದ್ಯಂತ ಬೀದಿನಾಯಿಗಳ ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರು ಮಕ್ಕಳನ್ನು ಹೊರಗೆ ಬಿಡಲು ಹಿಂದೇಟು ಹಾಕುವಂತಾಗಿತ್ತು. ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘ನಮ್ಮ ಜನ ನಮ್ಮ ಧ್ವನಿ’ ವಿಶೇಷ ವರದಿ ಪ್ರಕಟಿಸಲಾಗಿತ್ತು.</p>.<p>ನಾಲ್ಕು ತಿಂಗಳು ನಡೆಯಲಿರುವ ಸೆರೆ ಕಾರ್ಯಾಚರಣೆ ಸಾಕು ನಾಯಿಗಳನ್ನು ಮನೆಗಳಲ್ಲಿಯೇ ಕಟ್ಟಲು ಮನವಿ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾರ್ಯಾಚರಣೆ</p>.<p> <strong>2 ವರ್ಷಗಳ ಹಿಂದೆ ಒಂದು ಸಾವಿರ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಲಾಗಿತ್ತು. ಜಿಯೋ ಟ್ಯಾಗ್ ಅಳವಡಿಸಲಾಗಿತ್ತು </strong></p><p><strong>-ವೆಂಕಟೇಶ್ ನಗರಸಭೆ ಪರಿಸರ ಎಂಜಿನಿಯರ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>