<p><strong>ಅರಕಲಗೂಡು: </strong>ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಹಾಗೂ ಹಳ್ಳಿ ಮೈಸೂರು ಮತ್ತು ಕೇರಳಾಪುರ ಬಸ್ ನಿಲ್ದಾಣ ಆಧುನೀಕರಣಗೊಳಿಸಲು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ ಎಂದು ಶಾಸಕ ಎ. ಮಂಜು ತಿಳಿಸಿದರು. </p>.<p>ಶುಕ್ರವಾರ ಆರಾಧನಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ‘ಪಟ್ಟಣದ ಹಳೆಯ ಬಸ್ ನಿಲ್ದಾಣ ತ್ಯಾಜ್ಯದಿಂದ ತುಂಬಿ ಸೊಳ್ಳೆ ಉತ್ಪಾದನಾ ಕೇಂದ್ರವಾಗಿದೆ. ಈ ಹಿಂದೆ ತಾವು ಸಚಿವರಾಗಿದ್ದ ವೇಳೆ ತಮ್ಮ ತಾಯಿಯ ಹೆಸರಿನಲ್ಲಿ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತಿದ್ದ ಜಾಗವನ್ನು ಬಸ್ ನಿಲ್ದಾಣದ ಅಭಿವೃದ್ಧಿಗೆ ಕೊಡಿಸಿದ್ದೆ, ಹೀಗಾಗಿ ವಿಶಾಲವಾದ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಲಿದ್ದು ಪಟ್ಟಣದ ಅಂದ ಹೆಚ್ಚಿಸಲಿದೆ’ ಎಂದರು. </p>.<p>ಇದೇ ವೇಳೆ ತಾವು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ದೇವಾಲಯಗಳ ದುರಸ್ತಿ ಕಾರ್ಯಕ್ಕೆ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದನ್ನು 10 ದೇವಾಲಯಗಳ ಅಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದೆ. 2024-25ನೇ ಸಾಲಿಗೆ ಆರಾಧನಾ ಯೋಜನೆಗೆ ₹10.48 ಲಕ್ಷ ಬಿಡುಗಡೆಯಾಗಿದೆ. ಸಾಮಾನ್ಯ ವರ್ಗಕ್ಕೆ ₹2.23 ಲಕ್ಷ, ಪರಿಶಿಷ್ಟ ಜಾತಿಗೆ ₹4.54 ಲಕ್ಷ, ಗಿರಿಜನ ಅಭಿವೃದ್ಧಿ ಯೋಜನೆಯಲ್ಲಿ ₹3.17 ಲಕ್ಷ ಹಣ ನೀಡಲಾಗಿದೆ. ಇದರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. </p>.<p>ಹೊಸದಾಗಿ ನಿರ್ಮಾಣವಾಗುವ ದೇವಾಲಯಗಳಿಗೆ ಈ ಅನುದಾನ ನೀಡದೆ, ಈಗಾಗಲೆ ಪ್ರಾರಂಭವಾಗಿ ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿರುವ ದೇವಾಲಯಗಳನ್ನು ಗುರುತಿಸಿ ಆದ್ಯತೆ ಮೇರೆಗೆ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು. </p>.<p>‘ಈ ಹಿಂದಿನ ಸಾಲಿನ ಅನುದಾನ ಕುರಿತು ಪರಿಶೀಲಿಸಿ ಯಾರಿಗೆ ವಿತರಿಸಲಾಗಿದೆ. ಕಾಮಗಾರಿ ಪೂರ್ಣಗೊಂಡಿದೆಯೇ ಎಂಬುದನ್ನು ಪರಿಶೀಲಿಸಿದ ಬಳಿಕ ಅನುಮೋದನೆ ನೀಡಲಾಗುವುದು’ ಎಂದರು.</p>.<p>ಆರಾಧನಾ ಸಮಿತಿ ಸದಸ್ಯರಾದ ಪ್ರದೀಪ್ ನಾಯಕ್, ನೀಲಮ್ಮ, ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ್, ತಾಪಂ ಇಒ ಪ್ರಕಾಶ್, ಶಿರಸ್ತೆದಾರ್ ಸಿ. ಸ್ವಾಮಿ, ಮುಜರಾಯಿ ಇಲಾಖೆಯ ಪ್ರಮೀಳಾ ಇದ್ದರು.</p>.<blockquote>ದೇಗುಲಗಳ ಅಭಿವೃದ್ಧಿಗೆ ಸರ್ಕಾರದಿಂದ ₹25 ಲಕ್ಷ ಬಿಡುಗಡೆ ಅರ್ಧದಲ್ಲಿ ನಿಂತಿರುವ ದೇಗುಲಗಳ ನಿರ್ಮಾಣಕ್ಕೆ ಈ ಹಣ ಬಳಕೆ ಮುಜರಾಯಿ ಇಲಾಖೆಯ ಅಧಿಕಾರಿಗಳು ಭಾಗಿ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು: </strong>ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಹಾಗೂ ಹಳ್ಳಿ ಮೈಸೂರು ಮತ್ತು ಕೇರಳಾಪುರ ಬಸ್ ನಿಲ್ದಾಣ ಆಧುನೀಕರಣಗೊಳಿಸಲು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ ಎಂದು ಶಾಸಕ ಎ. ಮಂಜು ತಿಳಿಸಿದರು. </p>.<p>ಶುಕ್ರವಾರ ಆರಾಧನಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ‘ಪಟ್ಟಣದ ಹಳೆಯ ಬಸ್ ನಿಲ್ದಾಣ ತ್ಯಾಜ್ಯದಿಂದ ತುಂಬಿ ಸೊಳ್ಳೆ ಉತ್ಪಾದನಾ ಕೇಂದ್ರವಾಗಿದೆ. ಈ ಹಿಂದೆ ತಾವು ಸಚಿವರಾಗಿದ್ದ ವೇಳೆ ತಮ್ಮ ತಾಯಿಯ ಹೆಸರಿನಲ್ಲಿ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತಿದ್ದ ಜಾಗವನ್ನು ಬಸ್ ನಿಲ್ದಾಣದ ಅಭಿವೃದ್ಧಿಗೆ ಕೊಡಿಸಿದ್ದೆ, ಹೀಗಾಗಿ ವಿಶಾಲವಾದ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಲಿದ್ದು ಪಟ್ಟಣದ ಅಂದ ಹೆಚ್ಚಿಸಲಿದೆ’ ಎಂದರು. </p>.<p>ಇದೇ ವೇಳೆ ತಾವು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ದೇವಾಲಯಗಳ ದುರಸ್ತಿ ಕಾರ್ಯಕ್ಕೆ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದನ್ನು 10 ದೇವಾಲಯಗಳ ಅಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದೆ. 2024-25ನೇ ಸಾಲಿಗೆ ಆರಾಧನಾ ಯೋಜನೆಗೆ ₹10.48 ಲಕ್ಷ ಬಿಡುಗಡೆಯಾಗಿದೆ. ಸಾಮಾನ್ಯ ವರ್ಗಕ್ಕೆ ₹2.23 ಲಕ್ಷ, ಪರಿಶಿಷ್ಟ ಜಾತಿಗೆ ₹4.54 ಲಕ್ಷ, ಗಿರಿಜನ ಅಭಿವೃದ್ಧಿ ಯೋಜನೆಯಲ್ಲಿ ₹3.17 ಲಕ್ಷ ಹಣ ನೀಡಲಾಗಿದೆ. ಇದರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. </p>.<p>ಹೊಸದಾಗಿ ನಿರ್ಮಾಣವಾಗುವ ದೇವಾಲಯಗಳಿಗೆ ಈ ಅನುದಾನ ನೀಡದೆ, ಈಗಾಗಲೆ ಪ್ರಾರಂಭವಾಗಿ ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿರುವ ದೇವಾಲಯಗಳನ್ನು ಗುರುತಿಸಿ ಆದ್ಯತೆ ಮೇರೆಗೆ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು. </p>.<p>‘ಈ ಹಿಂದಿನ ಸಾಲಿನ ಅನುದಾನ ಕುರಿತು ಪರಿಶೀಲಿಸಿ ಯಾರಿಗೆ ವಿತರಿಸಲಾಗಿದೆ. ಕಾಮಗಾರಿ ಪೂರ್ಣಗೊಂಡಿದೆಯೇ ಎಂಬುದನ್ನು ಪರಿಶೀಲಿಸಿದ ಬಳಿಕ ಅನುಮೋದನೆ ನೀಡಲಾಗುವುದು’ ಎಂದರು.</p>.<p>ಆರಾಧನಾ ಸಮಿತಿ ಸದಸ್ಯರಾದ ಪ್ರದೀಪ್ ನಾಯಕ್, ನೀಲಮ್ಮ, ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ್, ತಾಪಂ ಇಒ ಪ್ರಕಾಶ್, ಶಿರಸ್ತೆದಾರ್ ಸಿ. ಸ್ವಾಮಿ, ಮುಜರಾಯಿ ಇಲಾಖೆಯ ಪ್ರಮೀಳಾ ಇದ್ದರು.</p>.<blockquote>ದೇಗುಲಗಳ ಅಭಿವೃದ್ಧಿಗೆ ಸರ್ಕಾರದಿಂದ ₹25 ಲಕ್ಷ ಬಿಡುಗಡೆ ಅರ್ಧದಲ್ಲಿ ನಿಂತಿರುವ ದೇಗುಲಗಳ ನಿರ್ಮಾಣಕ್ಕೆ ಈ ಹಣ ಬಳಕೆ ಮುಜರಾಯಿ ಇಲಾಖೆಯ ಅಧಿಕಾರಿಗಳು ಭಾಗಿ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>