<p><strong>ಹಾಸನ:</strong> ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ ಎಂಬವರನ್ನು ಅಪಹರಿಸಿದ್ದ ಆಕೆಯ ಸಂಬಂಧಿ ರಾಮು ಹಾಗೂ ತಂಡವನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಸೋಮವಾರಪೇಟೆ ಕಡೆಗೆ ತೆರಳುತ್ತಿದ್ದ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ಅರ್ಪಿತಾ ಶಾಲೆಗೆ ಹೋಗುತ್ತಿದ್ದ ಸಮಯದಲ್ಲಿ, ಒಬ್ಬ ರಸ್ತೆಯಲ್ಲಿ ನಿಂತಿದ್ದ. ಅರ್ಪಿತಾ ಬರುತ್ತಿದ್ದಂತೆಯೇ ಕಾರಿನ ಚಾಲಕನಿಗೆ ಬರುವಂತೆ ಸೂಚನೆ ನೀಡಿದ್ದ. ನಂತರ ಹಿಂದಿನಿಂದ ಮತ್ತೊಬ್ಬ ಬಂದಿದ್ದು, ಇಬ್ಬರೂ ಸೇರಿ, ಅರ್ಪಿತಾ ಅವರನ್ನು ಕಾರಿನಲ್ಲಿ ಎತ್ತಿ ಹಾಕಿದ್ದರು. ಈ ದೃಶ್ಯಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು.</p>.<p>15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆಗೆ ಶಿಕ್ಷಕಿ ಅರ್ಪಿತಾ ಹಾಗೂ ಕುಟುಂಬದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಅಪಹರಣ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಪರಿಶೀಲನೆ ನಡೆಸಿದರು. ಅಪಹರಣಕಾರರ ಪತ್ತೆಗೆ 3 ತಂಡಗಳನ್ನು ರಚಿಸಲಾಗಿತ್ತು. ಮೊಬೈಲ್ ಲೊಕೇಶನ್ ಆಧಾರದಲ್ಲಿ ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ ಎಂಬವರನ್ನು ಅಪಹರಿಸಿದ್ದ ಆಕೆಯ ಸಂಬಂಧಿ ರಾಮು ಹಾಗೂ ತಂಡವನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಸೋಮವಾರಪೇಟೆ ಕಡೆಗೆ ತೆರಳುತ್ತಿದ್ದ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ಅರ್ಪಿತಾ ಶಾಲೆಗೆ ಹೋಗುತ್ತಿದ್ದ ಸಮಯದಲ್ಲಿ, ಒಬ್ಬ ರಸ್ತೆಯಲ್ಲಿ ನಿಂತಿದ್ದ. ಅರ್ಪಿತಾ ಬರುತ್ತಿದ್ದಂತೆಯೇ ಕಾರಿನ ಚಾಲಕನಿಗೆ ಬರುವಂತೆ ಸೂಚನೆ ನೀಡಿದ್ದ. ನಂತರ ಹಿಂದಿನಿಂದ ಮತ್ತೊಬ್ಬ ಬಂದಿದ್ದು, ಇಬ್ಬರೂ ಸೇರಿ, ಅರ್ಪಿತಾ ಅವರನ್ನು ಕಾರಿನಲ್ಲಿ ಎತ್ತಿ ಹಾಕಿದ್ದರು. ಈ ದೃಶ್ಯಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು.</p>.<p>15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆಗೆ ಶಿಕ್ಷಕಿ ಅರ್ಪಿತಾ ಹಾಗೂ ಕುಟುಂಬದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಅಪಹರಣ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಪರಿಶೀಲನೆ ನಡೆಸಿದರು. ಅಪಹರಣಕಾರರ ಪತ್ತೆಗೆ 3 ತಂಡಗಳನ್ನು ರಚಿಸಲಾಗಿತ್ತು. ಮೊಬೈಲ್ ಲೊಕೇಶನ್ ಆಧಾರದಲ್ಲಿ ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>