<p><strong>ಹಾಸನ</strong>: ನೇರ ಪರೀಕ್ಷೆ ಮೂಲಕ ಪ್ರಾಂಶುಪಾಲರ ಹುದ್ದೆಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿ ಖಂಡನೀಯ ಎಂದು ಜಿಲ್ಲಾ ಸಹ ಸಂಚಾಲಕಿ ಚೈತ್ರಾ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಗಳ ಕುರಿತಾಗಿ ಕಳಕಳಿ ಹೊಂದಿರುವ, ಶಿಕ್ಷಣ ಸಂಸ್ಥೆಯೊಂದರಲ್ಲಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ, ಇನ್ನಿತರೆ ಶಿಕ್ಷಕರ ಮನ ಗೆದ್ದಿರುವವರಿಗೆ ಸಲ್ಲಬೇಕು. ಸರ್ಕಾರ ಬದಲಿಸಿದಂತೆ 5 ವರ್ಷಕ್ಕೊಮ್ಮೆ ಪ್ರಾಂಶುಪಾಲರ ಬದಲಿಕೆ ಶಿಕ್ಷಣ ಸಂಸ್ಥೆಯ ಆರೋಗ್ಯ ಕೆಡಿಸುವುದಲ್ಲದೆ, ಅಸಂಬದ್ಧ, ಅನಾವಶ್ಯಕವಾದ ಹುದ್ದೆಗಾಗಿನ ಪೈಪೋಟಿಗೆ ಶಿಕ್ಷಕರನ್ನು ನೂಕುತ್ತದೆ ಎಂದು ತಿಳಿಸಿದ್ದಾರೆ.</p>.<p>ಇದು ಶಿಕ್ಷಕರು, ವಿದ್ಯಾರ್ಥಿಗಳಿಬ್ಬರಿಗೂ ಮಾರಕವಾಗುತ್ತದೆ. ಈಗಾಗಲೇ ಪದವಿ ಕಾಲೇಜುಗಳು ಕಾಯಂ ಶಿಕ್ಷಕರಿಲ್ಲದೇ ಬಳಲುತ್ತಿವೆ. ಪ್ರಾಂಶುಪಾಲರ ಹುದ್ದೆಯೂ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವುದಾದರೆ, ಪ್ರಜಾತಾಂತ್ರಿಕ ಶಿಕ್ಷಣದ ಆಶಯವನ್ನು ಮೂಲೆಗೆ ಸರಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.</p>.<p>ಎಚ್. ನರಸಿಂಹಯ್ಯ ಅವರಂತಹ ಪ್ರಾಂಶುಪಾಲರನ್ನು ಕಂಡ ರಾಜ್ಯ ನಮ್ಮದು. ಮತ್ತೊಬ್ಬ ವಿದ್ಯಾರ್ಥಿ ಪ್ರೇಮಿ, ಶಿಕ್ಷಣ ಪ್ರೇಮಿ ನರಸಿಂಹಯ್ಯ ಬಾರದಂತೆ ಸರ್ಕಾರ ಮಾಡುತ್ತಿರುವ ಈ ಹುನ್ನಾರವನ್ನು ಎಐಡಿಎಸ್ಒ ಖಂಡಿಸುತ್ತದೆ. ಇದರ ವಿರುದ್ಧ ಧ್ವನಿಯೆತ್ತಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನೇರ ಪರೀಕ್ಷೆ ಮೂಲಕ ಪ್ರಾಂಶುಪಾಲರ ಹುದ್ದೆಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿ ಖಂಡನೀಯ ಎಂದು ಜಿಲ್ಲಾ ಸಹ ಸಂಚಾಲಕಿ ಚೈತ್ರಾ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಗಳ ಕುರಿತಾಗಿ ಕಳಕಳಿ ಹೊಂದಿರುವ, ಶಿಕ್ಷಣ ಸಂಸ್ಥೆಯೊಂದರಲ್ಲಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ, ಇನ್ನಿತರೆ ಶಿಕ್ಷಕರ ಮನ ಗೆದ್ದಿರುವವರಿಗೆ ಸಲ್ಲಬೇಕು. ಸರ್ಕಾರ ಬದಲಿಸಿದಂತೆ 5 ವರ್ಷಕ್ಕೊಮ್ಮೆ ಪ್ರಾಂಶುಪಾಲರ ಬದಲಿಕೆ ಶಿಕ್ಷಣ ಸಂಸ್ಥೆಯ ಆರೋಗ್ಯ ಕೆಡಿಸುವುದಲ್ಲದೆ, ಅಸಂಬದ್ಧ, ಅನಾವಶ್ಯಕವಾದ ಹುದ್ದೆಗಾಗಿನ ಪೈಪೋಟಿಗೆ ಶಿಕ್ಷಕರನ್ನು ನೂಕುತ್ತದೆ ಎಂದು ತಿಳಿಸಿದ್ದಾರೆ.</p>.<p>ಇದು ಶಿಕ್ಷಕರು, ವಿದ್ಯಾರ್ಥಿಗಳಿಬ್ಬರಿಗೂ ಮಾರಕವಾಗುತ್ತದೆ. ಈಗಾಗಲೇ ಪದವಿ ಕಾಲೇಜುಗಳು ಕಾಯಂ ಶಿಕ್ಷಕರಿಲ್ಲದೇ ಬಳಲುತ್ತಿವೆ. ಪ್ರಾಂಶುಪಾಲರ ಹುದ್ದೆಯೂ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವುದಾದರೆ, ಪ್ರಜಾತಾಂತ್ರಿಕ ಶಿಕ್ಷಣದ ಆಶಯವನ್ನು ಮೂಲೆಗೆ ಸರಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.</p>.<p>ಎಚ್. ನರಸಿಂಹಯ್ಯ ಅವರಂತಹ ಪ್ರಾಂಶುಪಾಲರನ್ನು ಕಂಡ ರಾಜ್ಯ ನಮ್ಮದು. ಮತ್ತೊಬ್ಬ ವಿದ್ಯಾರ್ಥಿ ಪ್ರೇಮಿ, ಶಿಕ್ಷಣ ಪ್ರೇಮಿ ನರಸಿಂಹಯ್ಯ ಬಾರದಂತೆ ಸರ್ಕಾರ ಮಾಡುತ್ತಿರುವ ಈ ಹುನ್ನಾರವನ್ನು ಎಐಡಿಎಸ್ಒ ಖಂಡಿಸುತ್ತದೆ. ಇದರ ವಿರುದ್ಧ ಧ್ವನಿಯೆತ್ತಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>