<p><strong>ಬೇಲೂರು</strong>: ತಾಲ್ಲೂಕಿನ ಕೊಗೋಡು ಗ್ರಾಮದ ಜಾಕನಹಳ್ಳಿ ಬಳಿ ಮೂರು ತಿಂಗಳ ಹಿಂದೆ ನಿರ್ಮಿಸಿದ್ದ ಸೇತುವೆ ಮಳೆಯಿಂದ ಕೊಚ್ಚಿಹೋಗಿದೆ.</p>.<p>ಚೀಕನಹಳ್ಳಿ, ಶಿರಗುರ, ಅರೇಹಳ್ಳಿ ಸೇರಿದಂತೆ ಇತರೆ ಭಾಗಗಳಿಗೆ ತೆರಳಲು ಸಂಪರ್ಕ ಕಲ್ಪಿಸುವ ರಸ್ತೆ ಇದ್ದಾಗಿದ್ದು, ಸೇತುವೆ ಕೊಚ್ಚಿ ಹೋಗಿರುವುದರಿಂದ 12 ಕುಟುಂಬಗಳು ಹೊರಬರಲು ಸಾಧ್ಯವಾಗದೆ ಪರಿತಪಿಸುತ್ತಿವೆ.</p>.<p>ಗ್ರಾಮಸ್ಥ ಮಂಜುನಾಥ್ ಹಾಗೂ ಸುನೀಲ್ ಮಾತನಾಡಿ, ‘ಕಾರ್ಮಿಕರು, ರೈತರಿಗೆ ಓಡಾಡಲು ಇದ್ದ ಸೇತುವೆಯೂ ಕೊಚ್ಚಿ ಹೋಗಿರುವುದರಿಂದ ತೀವ್ರ ತೊಂದರೆಯಾಗಿದೆ. ತಾಲ್ಲೂಕು ಆಡಳಿತ ಬದಲಿ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ತಹಶೀಲ್ದಾರ್ ಎಂ.ಮಮತಾ ಭೇಟಿ ನೀಡಿ ಮಾತನಾಡಿ, ‘ಸಾರ್ವಜನಿಕರಿಗೆ ತೊಂದರೆಯಾಗದಂತೆ ಬದಲಿ ರಸ್ತೆಯನ್ನು ಮಾಡಿಸಲಾಗುವುದು’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ರಾಜಸ್ವ ನಿರೀಕ್ಷಕ ಚಂದ್ರೇಗೌಡ, ಗ್ರಾಮ ಲೆಕ್ಕಾಧಿಕಾರಿ ಭಾನುಪ್ರಕಾಶ್, ಜಗದೀಶ್, ಪಿಡಿಒ ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ತಾಲ್ಲೂಕಿನ ಕೊಗೋಡು ಗ್ರಾಮದ ಜಾಕನಹಳ್ಳಿ ಬಳಿ ಮೂರು ತಿಂಗಳ ಹಿಂದೆ ನಿರ್ಮಿಸಿದ್ದ ಸೇತುವೆ ಮಳೆಯಿಂದ ಕೊಚ್ಚಿಹೋಗಿದೆ.</p>.<p>ಚೀಕನಹಳ್ಳಿ, ಶಿರಗುರ, ಅರೇಹಳ್ಳಿ ಸೇರಿದಂತೆ ಇತರೆ ಭಾಗಗಳಿಗೆ ತೆರಳಲು ಸಂಪರ್ಕ ಕಲ್ಪಿಸುವ ರಸ್ತೆ ಇದ್ದಾಗಿದ್ದು, ಸೇತುವೆ ಕೊಚ್ಚಿ ಹೋಗಿರುವುದರಿಂದ 12 ಕುಟುಂಬಗಳು ಹೊರಬರಲು ಸಾಧ್ಯವಾಗದೆ ಪರಿತಪಿಸುತ್ತಿವೆ.</p>.<p>ಗ್ರಾಮಸ್ಥ ಮಂಜುನಾಥ್ ಹಾಗೂ ಸುನೀಲ್ ಮಾತನಾಡಿ, ‘ಕಾರ್ಮಿಕರು, ರೈತರಿಗೆ ಓಡಾಡಲು ಇದ್ದ ಸೇತುವೆಯೂ ಕೊಚ್ಚಿ ಹೋಗಿರುವುದರಿಂದ ತೀವ್ರ ತೊಂದರೆಯಾಗಿದೆ. ತಾಲ್ಲೂಕು ಆಡಳಿತ ಬದಲಿ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ತಹಶೀಲ್ದಾರ್ ಎಂ.ಮಮತಾ ಭೇಟಿ ನೀಡಿ ಮಾತನಾಡಿ, ‘ಸಾರ್ವಜನಿಕರಿಗೆ ತೊಂದರೆಯಾಗದಂತೆ ಬದಲಿ ರಸ್ತೆಯನ್ನು ಮಾಡಿಸಲಾಗುವುದು’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ರಾಜಸ್ವ ನಿರೀಕ್ಷಕ ಚಂದ್ರೇಗೌಡ, ಗ್ರಾಮ ಲೆಕ್ಕಾಧಿಕಾರಿ ಭಾನುಪ್ರಕಾಶ್, ಜಗದೀಶ್, ಪಿಡಿಒ ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>