<p><strong>ಕೊಣನೂರು</strong>: ‘ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಎಫ್ಸಿವಿ ತಂಬಾಕು ಬೆಳೆ ಸಮೀಕ್ಷೆ ನಡೆಸಿ, ಬೆಳೆಗಾರರ ವಿವರವನ್ನು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು’ ಎಂದು ತಂಬಾಕು ಮಂಡಳಿಯ ಪ್ರಾದೇಶಿಕ ವ್ಯವಸ್ಥಾಪಕ ಜಿ. ಬುಲ್ಲಿ ಸುಬ್ಬರಾವ್ ಸೂಚಿಸಿದ್ದಾರೆ.</p>.<p>‘ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಎಫ್ಸಿವಿ ತಂಬಾಕು ಬೆಳೆಯುತ್ತಿದ್ದು, ಈ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಬಿದ್ದಿದ್ದು, ಬೆಳೆಗೆ ಹಾನಿಯಾಗಿದೆ. ಬೆಳೆಗಾರರಿಗೆ ಪರಿಹಾರ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದಾರೆ.</p>.<p>‘ಹೆಚ್ಚಿನ ತೇವಾಂಶ ಅಥವಾ ಮಳೆಯ ಸಂದರ್ಭದಲ್ಲಿ ತಂಬಾಕು ಕೃಷಿಯಲ್ಲಿ ಅನುಸರಿಸಬೇಕಾದ ಸುಧಾರಣಾ ಕೃಷಿ ಪದ್ಧತಿಗಳನ್ನು ಕುರಿತು ತಂಬಾಕು ಮಂಡಳಿಯ ಕ್ಷೇತ್ರ ಸಿಬ್ಬಂದಿಯು ರೈತರಿಗೆ ಅರಿವು ಮೂಡಿಸಬೇಕು’ ಎಂದು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ‘ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಎಫ್ಸಿವಿ ತಂಬಾಕು ಬೆಳೆ ಸಮೀಕ್ಷೆ ನಡೆಸಿ, ಬೆಳೆಗಾರರ ವಿವರವನ್ನು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು’ ಎಂದು ತಂಬಾಕು ಮಂಡಳಿಯ ಪ್ರಾದೇಶಿಕ ವ್ಯವಸ್ಥಾಪಕ ಜಿ. ಬುಲ್ಲಿ ಸುಬ್ಬರಾವ್ ಸೂಚಿಸಿದ್ದಾರೆ.</p>.<p>‘ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಎಫ್ಸಿವಿ ತಂಬಾಕು ಬೆಳೆಯುತ್ತಿದ್ದು, ಈ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಬಿದ್ದಿದ್ದು, ಬೆಳೆಗೆ ಹಾನಿಯಾಗಿದೆ. ಬೆಳೆಗಾರರಿಗೆ ಪರಿಹಾರ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದಾರೆ.</p>.<p>‘ಹೆಚ್ಚಿನ ತೇವಾಂಶ ಅಥವಾ ಮಳೆಯ ಸಂದರ್ಭದಲ್ಲಿ ತಂಬಾಕು ಕೃಷಿಯಲ್ಲಿ ಅನುಸರಿಸಬೇಕಾದ ಸುಧಾರಣಾ ಕೃಷಿ ಪದ್ಧತಿಗಳನ್ನು ಕುರಿತು ತಂಬಾಕು ಮಂಡಳಿಯ ಕ್ಷೇತ್ರ ಸಿಬ್ಬಂದಿಯು ರೈತರಿಗೆ ಅರಿವು ಮೂಡಿಸಬೇಕು’ ಎಂದು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>