<p><strong>ಹಾಸನ</strong>: ‘ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶ್ರೀಲಂಕಾ ಮಾದರಿ ಆನೆ ಕಾರಿಡಾರ್ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಸಾಧಕ– ಬಾಧಕಗಳನ್ನು ಪರಾಮರ್ಶಿಸಿ ಅನುಷ್ಠಾನಕ್ಕೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರು, ನೆರೆಯ ಚಿಕ್ಕಮಗಳೂರು, ಮೂಡಿಗೆರೆಯಲ್ಲಿಯೂ ಕಾಡಾನೆ ಸಮಸ್ಯೆ ಇರುವುದರಿಂದ ಹಾವಳಿ ನಿಯಂತ್ರಣಕ್ಕೆ ಚರ್ಚೆಗಳು ನಡೆಯುತ್ತಿವೆ’ ಎಂದರು.</p>.<p>‘ಶ್ರೀಲಂಕಾ ಮಾದರಿ ಆನೆ ಧಾಮ ನಿರ್ಮಿಸಿದರೆ, ಕಾಡಾನೆ ಹಾವಳಿ ತಡೆಯಬಹುದೆಂಬ ಮಾತು ಕೇಳಿ ಬಂದಿದೆ. ಅರ್ಜುನನ ಸಾವಿನ ನಂತರ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಪ್ರಮುಖವಾಗಿ ಪ್ರಸ್ತಾಪವಾಗಿದೆ’ ಎಂದರು.</p>.<p>‘ಆನೆ ಹಾವಳಿ ಇರುವ ಜಿಲ್ಲೆಗಳಲ್ಲಿ ನಿರ್ದಿಷ್ಟ ಪ್ರದೇಶವನ್ನು ಗುರುತಿಸಿ ಧಾಮ ನಿರ್ಮಿಸಿದರೆ ಹೆಚ್ಚು ಅನುಕೂಲವಾಗಲಿದೆ. ಈ ಕುರಿತು ಸಲಹೆ, ಸೂಚನೆ ಪಡೆಯಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶ್ರೀಲಂಕಾ ಮಾದರಿ ಆನೆ ಕಾರಿಡಾರ್ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಸಾಧಕ– ಬಾಧಕಗಳನ್ನು ಪರಾಮರ್ಶಿಸಿ ಅನುಷ್ಠಾನಕ್ಕೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರು, ನೆರೆಯ ಚಿಕ್ಕಮಗಳೂರು, ಮೂಡಿಗೆರೆಯಲ್ಲಿಯೂ ಕಾಡಾನೆ ಸಮಸ್ಯೆ ಇರುವುದರಿಂದ ಹಾವಳಿ ನಿಯಂತ್ರಣಕ್ಕೆ ಚರ್ಚೆಗಳು ನಡೆಯುತ್ತಿವೆ’ ಎಂದರು.</p>.<p>‘ಶ್ರೀಲಂಕಾ ಮಾದರಿ ಆನೆ ಧಾಮ ನಿರ್ಮಿಸಿದರೆ, ಕಾಡಾನೆ ಹಾವಳಿ ತಡೆಯಬಹುದೆಂಬ ಮಾತು ಕೇಳಿ ಬಂದಿದೆ. ಅರ್ಜುನನ ಸಾವಿನ ನಂತರ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಪ್ರಮುಖವಾಗಿ ಪ್ರಸ್ತಾಪವಾಗಿದೆ’ ಎಂದರು.</p>.<p>‘ಆನೆ ಹಾವಳಿ ಇರುವ ಜಿಲ್ಲೆಗಳಲ್ಲಿ ನಿರ್ದಿಷ್ಟ ಪ್ರದೇಶವನ್ನು ಗುರುತಿಸಿ ಧಾಮ ನಿರ್ಮಿಸಿದರೆ ಹೆಚ್ಚು ಅನುಕೂಲವಾಗಲಿದೆ. ಈ ಕುರಿತು ಸಲಹೆ, ಸೂಚನೆ ಪಡೆಯಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>