<p><strong>ಹಾಸನ:</strong> ಪರ್ಯಾಯ ಭೂಮಿ ಮತ್ತು ನ್ಯಾಯಯುತ ಪರಿಹಾರಕ್ಕೆ ಆಗ್ರಹಿಸಿ ಹಾಸನ -ಹಿರಿಯೂರು ಹೆದ್ದಾರಿ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ದುದ್ದ, ಶಾಂತಿಗ್ರಾಮ, ಗಂಡಸಿ ಹೋಬಳಿಗಳ ಸಂತ್ರಸ್ತ ರೈತರು ಮಂಗಳವಾರ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಪ್ರತಿಭಟಿಸಿದರು.</p>.<p>ಸಂತ್ರಸ್ತ ರೈತರು ಮಾತನಾಡಿ, ಹೆದ್ದಾರಿ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭ ಮಾಡಲಾಗಿದೆ. ಹಾಸನ, ಅರಸೀಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ಹಿರಿಯೂರು ತಾಲ್ಲೂಕಿನ ನೂರಾರು ಹಳ್ಳಿಗಳ ಸಾವಿರಾರು ಎಕರೆ ಭೂಮಿ ಯೋಜನೆಗೆ ಸ್ವಾಧೀನಗೊಳ್ಳಲಿದೆ ಎಂದರು.</p>.<p>ಯೋಜನೆ ಸರ್ಕಾರಿ ಮತ್ತು ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, 2013ರ ಭೂಸ್ವಾಧೀನ ಕಾಯ್ದೆಯಂತೆ ಶೇ 70 ರಷ್ಟು ಸಂತ್ರಸ್ತ ರೈತರು ಮತ್ತು ನಾಗರಿಕರ ಒಪ್ಪಿಗೆಯನ್ನು ಪಡೆಯಬೇಕು. ಇಲ್ಲವಾದರೆ ಯೋಜನೆ ಹಿಂಪಡೆಯಬೇಕು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.</p>.<p>ನಮ್ಮ ಜೀವನಾಧಾರವಾಗಿ ಇರುವ ಕೃಷಿ ಭೂಮಿ, ಮನೆಗಳನ್ನು ರೈತರು ಮತ್ತು ನಾಗರಿಕರು ಹೆದ್ದಾರಿ ನಿರ್ಮಾಣಕ್ಕೆ ಬಿಟ್ಟು ಕೊಡಬೇಕಾಗಿದೆ. ಈ ರಸ್ತೆಗೆ ಸ್ವಾಧೀನವಾಗುತ್ತಿರುವ ಬಹುತೇಕ ಭೂಮಿಯು ನೀರಾವರಿ ಪ್ರದೇಶವಾಗಿದ್ದು, ತೋಟಗಾರಿಕೆ ಹಾಗೂ ಉತ್ತಮ ಕೃಷಿ ಭೂಮಿ ಒಳಗೊಂಡಿದೆ. ಸಮರ್ಪಕವಾಗಿ ಸರ್ವೆ ನಡೆಸಿ, ಸಾರ್ವಜನಿಕರ, ರೈತರ ಕುಂದುಕೊರತೆಗಳನ್ನು ಆಲಿಸಿ, ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಕುಂದುಕೊರತೆಯನ್ನು ಪರಿಹರಿಸಲು ಕೂಡಲೇ ಅಧಿಕಾರಿಗಳನ್ನು ನೇಮಿಸಬೇಕು, ಸರ್ವೆ ಕಾರ್ಯಕ್ಕೂ ಮುನ್ನ ಪ್ರತಿ ಗ್ರಾಮದಲ್ಲೂ ರೈತರ ಸಭೆ ಕರೆದು ಗೊಂದಲ ನಿವಾರಿಸಬೇಕು, ಪರಿಹಾರದ ಮೊತ್ತದ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು. ಅಲ್ಲಿಯವರೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.</p>.<p>ಬರದಿಂದಾಗಿ ತತ್ತರಿಸಿರುವ ರೈತರಿಗೆ ಈ ಹೆದ್ದಾರಿ ಯೋಜನೆ ಮತ್ತಷ್ಟು ಸಂಕಷ್ಟ ಉಂಟುಮಾಡಿದೆ. ರೈತರ ಸಮಸ್ಯೆಗಳನ್ನು ಪರಿಹರಿಸದೇ ಹೆದ್ದಾರಿ ಕಾಮಗಾರಿ ಕೈಗೊಳ್ಳುತ್ತಿರುವುದು ಸರಿಯಲ್. ಸಮಸ್ಯೆ ಆಲಿಸಿ, ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮಸ್ಥರಾದ ಹೇಮಂತ್ ಕುಮಾರ್, ಲಕ್ಷ್ಮೀಗೌಡ, ರಾಧಮ್ಮ, ರಂಗಯ್ಯ, ಸಾವಿತ್ರಮ್ಮ, ಕೃಷ್ಣೆಗೌಡ, ಪ್ರಕಾಶ್, ವೆಂಕಟೇಶ್, ರಂಗಸ್ವಾಮಿ, ನೂರಾರು ಮಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಪರ್ಯಾಯ ಭೂಮಿ ಮತ್ತು ನ್ಯಾಯಯುತ ಪರಿಹಾರಕ್ಕೆ ಆಗ್ರಹಿಸಿ ಹಾಸನ -ಹಿರಿಯೂರು ಹೆದ್ದಾರಿ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ದುದ್ದ, ಶಾಂತಿಗ್ರಾಮ, ಗಂಡಸಿ ಹೋಬಳಿಗಳ ಸಂತ್ರಸ್ತ ರೈತರು ಮಂಗಳವಾರ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಪ್ರತಿಭಟಿಸಿದರು.</p>.<p>ಸಂತ್ರಸ್ತ ರೈತರು ಮಾತನಾಡಿ, ಹೆದ್ದಾರಿ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭ ಮಾಡಲಾಗಿದೆ. ಹಾಸನ, ಅರಸೀಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ಹಿರಿಯೂರು ತಾಲ್ಲೂಕಿನ ನೂರಾರು ಹಳ್ಳಿಗಳ ಸಾವಿರಾರು ಎಕರೆ ಭೂಮಿ ಯೋಜನೆಗೆ ಸ್ವಾಧೀನಗೊಳ್ಳಲಿದೆ ಎಂದರು.</p>.<p>ಯೋಜನೆ ಸರ್ಕಾರಿ ಮತ್ತು ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, 2013ರ ಭೂಸ್ವಾಧೀನ ಕಾಯ್ದೆಯಂತೆ ಶೇ 70 ರಷ್ಟು ಸಂತ್ರಸ್ತ ರೈತರು ಮತ್ತು ನಾಗರಿಕರ ಒಪ್ಪಿಗೆಯನ್ನು ಪಡೆಯಬೇಕು. ಇಲ್ಲವಾದರೆ ಯೋಜನೆ ಹಿಂಪಡೆಯಬೇಕು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.</p>.<p>ನಮ್ಮ ಜೀವನಾಧಾರವಾಗಿ ಇರುವ ಕೃಷಿ ಭೂಮಿ, ಮನೆಗಳನ್ನು ರೈತರು ಮತ್ತು ನಾಗರಿಕರು ಹೆದ್ದಾರಿ ನಿರ್ಮಾಣಕ್ಕೆ ಬಿಟ್ಟು ಕೊಡಬೇಕಾಗಿದೆ. ಈ ರಸ್ತೆಗೆ ಸ್ವಾಧೀನವಾಗುತ್ತಿರುವ ಬಹುತೇಕ ಭೂಮಿಯು ನೀರಾವರಿ ಪ್ರದೇಶವಾಗಿದ್ದು, ತೋಟಗಾರಿಕೆ ಹಾಗೂ ಉತ್ತಮ ಕೃಷಿ ಭೂಮಿ ಒಳಗೊಂಡಿದೆ. ಸಮರ್ಪಕವಾಗಿ ಸರ್ವೆ ನಡೆಸಿ, ಸಾರ್ವಜನಿಕರ, ರೈತರ ಕುಂದುಕೊರತೆಗಳನ್ನು ಆಲಿಸಿ, ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಕುಂದುಕೊರತೆಯನ್ನು ಪರಿಹರಿಸಲು ಕೂಡಲೇ ಅಧಿಕಾರಿಗಳನ್ನು ನೇಮಿಸಬೇಕು, ಸರ್ವೆ ಕಾರ್ಯಕ್ಕೂ ಮುನ್ನ ಪ್ರತಿ ಗ್ರಾಮದಲ್ಲೂ ರೈತರ ಸಭೆ ಕರೆದು ಗೊಂದಲ ನಿವಾರಿಸಬೇಕು, ಪರಿಹಾರದ ಮೊತ್ತದ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು. ಅಲ್ಲಿಯವರೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.</p>.<p>ಬರದಿಂದಾಗಿ ತತ್ತರಿಸಿರುವ ರೈತರಿಗೆ ಈ ಹೆದ್ದಾರಿ ಯೋಜನೆ ಮತ್ತಷ್ಟು ಸಂಕಷ್ಟ ಉಂಟುಮಾಡಿದೆ. ರೈತರ ಸಮಸ್ಯೆಗಳನ್ನು ಪರಿಹರಿಸದೇ ಹೆದ್ದಾರಿ ಕಾಮಗಾರಿ ಕೈಗೊಳ್ಳುತ್ತಿರುವುದು ಸರಿಯಲ್. ಸಮಸ್ಯೆ ಆಲಿಸಿ, ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮಸ್ಥರಾದ ಹೇಮಂತ್ ಕುಮಾರ್, ಲಕ್ಷ್ಮೀಗೌಡ, ರಾಧಮ್ಮ, ರಂಗಯ್ಯ, ಸಾವಿತ್ರಮ್ಮ, ಕೃಷ್ಣೆಗೌಡ, ಪ್ರಕಾಶ್, ವೆಂಕಟೇಶ್, ರಂಗಸ್ವಾಮಿ, ನೂರಾರು ಮಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>