ಕೃಷ್ಣೇಗೌಡರಿಂದ ₹ 4 ಕೋಟಿಗೂ ಹೆಚ್ಚು ಹಣವನ್ನು ಯೋಗಾನಂದ ಪಡೆದಿದ್ದು ಈ ಹಣವನ್ನು ಹಿಂದಿರುಗಿಸುವ ಬದಲು ಕೃಷ್ಣೇಗೌಡರನ್ನೇ ಕೊಲೆ ಮಾಡುವ ಯೋಜನೆ ರೂಪಿಸಲಾಗಿತ್ತು. ಎರಡು ವರ್ಷದ ಹಿಂದೆ ಖಾಸಗಿ ವಾಹಿನಿ ಪಾಲುದಾರನಾಗಿದ್ದ ಸುರೇಶ್ ಹಾಗೂ ಯೋಗಾನಂದ ಸೇರಿ ಕೊಲೆಯ ಸಂಚು ರೂಪಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಎಸ್ಪಿ ಹೇಳಿದರು. ಕೃಷ್ಣೇಗೌಡರಿಗೂ ಕೊಲೆ ಸಂಚಿನ ಬಗ್ಗೆ ತಿಳಿದಿತ್ತು. ಕೃಷ್ಣೇಗೌಡರ ಕೊಲೆಗೆ ಸಂಚು ರೂಪಿಸಿದ್ದ ಧ್ವನಿ ಮುದ್ರಿಕೆ (ಆಡಿಯೋ ರೆಕಾರ್ಡ್) ಕೃಷ್ಣೇಗೌಡರಿಗೆ ದೊರೆತಿತ್ತು. ಆದರೂ ಕೃಷ್ಣೇಗೌಡರು ಈ ಬಗ್ಗೆ ಪೊಲೀಸರ ಗಮನಕ್ಕೆ ತಂದಿರಲಿಲ್ಲ. ಯಾವುದೇ ದೂರು ದಾಖಲಿಸಿರಲಿಲ್ಲ ಎಂದು ವಿವರಿಸಿದರು.