<p><strong>ಹಾಸನ</strong>: ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲ್ಲೂಕಿನ ಕುಂಬರಡಿ ಹಾಗೂ ಹಾರ್ಲೆ ಎಸ್ಟೇಟ್ ನಡುವೆ ಭೂಕುಸಿತ ಸಂಭವಿಸಿದೆ. </p>.<p>ಭೂಕುಸಿತದಿಂದಾಗಿ ರಸ್ತೆಯೊಂದು 200 ಮೀಟರ್ಗೂ ಹೆಚ್ಚು ದೂರ ಕೊಚ್ಚಿ ಹೋಗಿದೆ. ಮಧ್ಯದಲ್ಲಿಯೇ ರಸ್ತೆ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. </p><p>ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಯೋಜನೆ ಪೈಪ್ಲೈನ್ ಅಳವಡಿಸಲಾಗಿದ್ದು, ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. </p><p>ಹೇಮಾವತಿ ಹೊರಹರಿವು ಹೆಚ್ಚಳ: ಎರಡು ದಿನಗಳಿಂದ ಕಡಿಮೆಯಾಗಿದ್ದ ಹೇಮಾವತಿ ಜಲಾಶಯದ ಒಳಹರಿವು ಮಂಗಳವಾರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ 73800 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹೇಮಾವತಿ ಅಣೆಕಟ್ಟೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಗಂಗಾಧರ್ ತಿಳಿಸಿದ್ದಾರೆ. </p><p>ಕೊಚ್ಚಿ ಹೋದ ರಸ್ತೆ, ಭತ್ತದ ಗದ್ದೆ: ಬೇಲೂರು ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಳ್ಳಕ್ಕಿ ಗ್ರಾಮದ ರಸ್ತೆ ಕೊಚ್ಚಿ ಹೋಗಿದೆ. ಇದರಿಂದಾಗಿ ಸುಳ್ಳಕ್ಕಿ–ಮೈಲಹಳ್ಳಿ, ಆಲೂರು–ಬೇಲೂರು–ಕೋನೆರ್ಲು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಜೊತೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. </p><p>ನಿರಂತರವಾಗಿ ಸುರಿದ ಮಳೆಯಿಂದಾಗಿ ಅರಕಲಗೂಡು ತಾಲ್ಲೂಕಿನ ಯಗಟಿ ಗ್ರಾಮದ ಸರ್ಕಾರಿ ಶಾಲೆ ಆವರಣ ಮತ್ತು ಶಾಲೆ ಕೊಠಡಿ ಜಲಾವೃತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲ್ಲೂಕಿನ ಕುಂಬರಡಿ ಹಾಗೂ ಹಾರ್ಲೆ ಎಸ್ಟೇಟ್ ನಡುವೆ ಭೂಕುಸಿತ ಸಂಭವಿಸಿದೆ. </p>.<p>ಭೂಕುಸಿತದಿಂದಾಗಿ ರಸ್ತೆಯೊಂದು 200 ಮೀಟರ್ಗೂ ಹೆಚ್ಚು ದೂರ ಕೊಚ್ಚಿ ಹೋಗಿದೆ. ಮಧ್ಯದಲ್ಲಿಯೇ ರಸ್ತೆ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. </p><p>ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಯೋಜನೆ ಪೈಪ್ಲೈನ್ ಅಳವಡಿಸಲಾಗಿದ್ದು, ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. </p><p>ಹೇಮಾವತಿ ಹೊರಹರಿವು ಹೆಚ್ಚಳ: ಎರಡು ದಿನಗಳಿಂದ ಕಡಿಮೆಯಾಗಿದ್ದ ಹೇಮಾವತಿ ಜಲಾಶಯದ ಒಳಹರಿವು ಮಂಗಳವಾರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ 73800 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹೇಮಾವತಿ ಅಣೆಕಟ್ಟೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಗಂಗಾಧರ್ ತಿಳಿಸಿದ್ದಾರೆ. </p><p>ಕೊಚ್ಚಿ ಹೋದ ರಸ್ತೆ, ಭತ್ತದ ಗದ್ದೆ: ಬೇಲೂರು ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಳ್ಳಕ್ಕಿ ಗ್ರಾಮದ ರಸ್ತೆ ಕೊಚ್ಚಿ ಹೋಗಿದೆ. ಇದರಿಂದಾಗಿ ಸುಳ್ಳಕ್ಕಿ–ಮೈಲಹಳ್ಳಿ, ಆಲೂರು–ಬೇಲೂರು–ಕೋನೆರ್ಲು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಜೊತೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. </p><p>ನಿರಂತರವಾಗಿ ಸುರಿದ ಮಳೆಯಿಂದಾಗಿ ಅರಕಲಗೂಡು ತಾಲ್ಲೂಕಿನ ಯಗಟಿ ಗ್ರಾಮದ ಸರ್ಕಾರಿ ಶಾಲೆ ಆವರಣ ಮತ್ತು ಶಾಲೆ ಕೊಠಡಿ ಜಲಾವೃತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>