<p><strong>ಹಾಸನ</strong>: ಹಾಸನ ಮತ್ತು ಶಾಂತಿಗ್ರಾಮ ನಡುವಿನ ರೈಲು ಮಾರ್ಗದಲ್ಲಿ ಶನಿವಾರ ಬೆಳಿಗ್ಗೆ ಭೂಕುಸಿತ ಉಂಟಾಗಿದ್ದು, ಗೂಡ್ಸ್ ರೈಲಿಗೆ ಸ್ವಲ್ಪ ಹಾನಿಯಾಗಿದೆ. </p><p>ಸ್ಥಳದಲ್ಲಿದ್ದ ಟ್ರ್ಯಾಕ್ಮೆನ್ಗಳು ಮಣ್ಣನ್ನು ತೆರವುಗೊಳಿಸಿದ್ದು, ರೈಲು ಸಂಚಾರ ಆರಂಭಿಸಲಾಗಿದೆ. ಈ ಮಾರ್ಗದಲ್ಲಿ 20 ಕಿ.ಮೀ ವೇಗದಲ್ಲಿ ರೈಲುಗಳನ್ನು ಓಡಿಸಲು ಸೂಚಿಸಲಾಗಿದೆ. ಹೆಚ್ಚಿನ ಕಾರ್ಯಾಚರಣೆಗೆ ಹಾಸನದಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. </p><p>ಬೆಳಿಗ್ಗೆ 7 ಗಂಟೆಗೆ ಹೊರಡಬೇಕಿದ್ದ ಹಾಸನ-ಯಶವಂತಪುರ ರೈಲು 08.30 ಕ್ಕೆ ಹಾಸನದಿಂದ ಹೊರಟಿದೆ.</p>.<blockquote>ಯಡಕುಮೇರಿ–ಕಡಗರವಳ್ಳಿ ಮಾರ್ಗದಲ್ಲಿ ಮಣ್ಣು ಕುಸಿತ: ರೈಲುಗಳ ಸಂಚಾರ ರದ್ದು</blockquote>.<p>ಯಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿರುವುದರಿಂದ ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು, ಮಧ್ಯಾಹ್ನ 12 ಗಂಟೆಯ ಬದಲು, ಸಂಜೆ 6.30 ಕ್ಕೆ ವಿಜಯಪುರದಿಂದ ಹೊರಡಲಿದೆ.</p><p>ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು, ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ ರೈಲು ರೈಲು ಜುಲೈ 27ರಂದು ರದ್ದಾಗಿವೆ.</p><p>ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ಪ್ರೆಸ್, ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್, ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್, ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್, ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ರೈಲು ರೈಲು ಜುಲೈ 28ರಂದು ರದ್ದಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಹಾಸನ ಮತ್ತು ಶಾಂತಿಗ್ರಾಮ ನಡುವಿನ ರೈಲು ಮಾರ್ಗದಲ್ಲಿ ಶನಿವಾರ ಬೆಳಿಗ್ಗೆ ಭೂಕುಸಿತ ಉಂಟಾಗಿದ್ದು, ಗೂಡ್ಸ್ ರೈಲಿಗೆ ಸ್ವಲ್ಪ ಹಾನಿಯಾಗಿದೆ. </p><p>ಸ್ಥಳದಲ್ಲಿದ್ದ ಟ್ರ್ಯಾಕ್ಮೆನ್ಗಳು ಮಣ್ಣನ್ನು ತೆರವುಗೊಳಿಸಿದ್ದು, ರೈಲು ಸಂಚಾರ ಆರಂಭಿಸಲಾಗಿದೆ. ಈ ಮಾರ್ಗದಲ್ಲಿ 20 ಕಿ.ಮೀ ವೇಗದಲ್ಲಿ ರೈಲುಗಳನ್ನು ಓಡಿಸಲು ಸೂಚಿಸಲಾಗಿದೆ. ಹೆಚ್ಚಿನ ಕಾರ್ಯಾಚರಣೆಗೆ ಹಾಸನದಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. </p><p>ಬೆಳಿಗ್ಗೆ 7 ಗಂಟೆಗೆ ಹೊರಡಬೇಕಿದ್ದ ಹಾಸನ-ಯಶವಂತಪುರ ರೈಲು 08.30 ಕ್ಕೆ ಹಾಸನದಿಂದ ಹೊರಟಿದೆ.</p>.<blockquote>ಯಡಕುಮೇರಿ–ಕಡಗರವಳ್ಳಿ ಮಾರ್ಗದಲ್ಲಿ ಮಣ್ಣು ಕುಸಿತ: ರೈಲುಗಳ ಸಂಚಾರ ರದ್ದು</blockquote>.<p>ಯಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿರುವುದರಿಂದ ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು, ಮಧ್ಯಾಹ್ನ 12 ಗಂಟೆಯ ಬದಲು, ಸಂಜೆ 6.30 ಕ್ಕೆ ವಿಜಯಪುರದಿಂದ ಹೊರಡಲಿದೆ.</p><p>ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು, ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ ರೈಲು ರೈಲು ಜುಲೈ 27ರಂದು ರದ್ದಾಗಿವೆ.</p><p>ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ಪ್ರೆಸ್, ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್, ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್, ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್, ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ರೈಲು ರೈಲು ಜುಲೈ 28ರಂದು ರದ್ದಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>