<p><strong>ಹಾಸನ</strong>: ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಡಕಮೇರಿ- ಕಡಗರಹಳ್ಳಿ ನಿಲ್ದಾಣಗಳ ನಡುವೆ ರೈಲ್ವೆ ಹಳಿಯ ಕೆಳಗೆ ಭೂ ಕುಸಿತವಾಗಿದೆ. ಈ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮಾರ್ಗದ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. </p>.<p>ಹಾಸನ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರದಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕಮೇರಿ-ಕಡಗರಹಳ್ಳಿ ರೈಲು ನಿಲ್ದಾಣಗಳ ನಡುವೆ ಹಳಿಯ ಕೆಳಗೆ ಭೂ ಕುಸಿತವಾಗಿದೆ. ಈ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.</p><p>ಶುಕ್ರವಾರ ರಾತ್ರಿ ಈ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದ್ದು, ಮಾರ್ಗದ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.</p><p> ಸುರಿಯುವ ಮಳೆಯ ನಡುವೆಯೇ ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.</p><p>ಮೈಸೂರು ವಿಭಾಗದ ಡಿಆರ್ಎಂ ಶಿಲ್ಪಾ ಅಗರ್ವಾಲ್ ಸೇರಿದಂತೆ ಅಧಿಕಾರಿಗಳು, ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ವೀಕ್ಷಣೆ ಮಾಡಿದರು. ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.</p><p>ಸುಮಾರು 500 ಮೀಟರ್ ಆಳಕ್ಕೆ ಭೂ ಕುಸಿತ ಉಂಟಾಗಿದೆ. ಗೂಡ್ಸ್ ರೈಲಿನಲ್ಲಿ ಕಲ್ಲುಗಳನ್ನು ತಂದು ಸ್ಥಳದಲ್ಲಿ ಹಾಕಲಾಗಿದ್ದು, ಹಳಿಯ ಕೆಳಗೆ ಮಣ್ಣು ಕುಸಿಯದಂತೆ ಕಾಮಗಾರಿ ಕೈಗೊಳ್ಳಲಾಗಿದೆ.</p><p>ಈ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ. ಸುಮಾರು 5 ದಿನಗಳ ಕಾಲ ಕಾರ್ಯಾಚರಣೆ ನಡೆಸಬೇಕಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು-ಮಂಗಳೂರು ಸೇರಿ, ಈ ಮಾರ್ಗದ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಡಕಮೇರಿ- ಕಡಗರಹಳ್ಳಿ ನಿಲ್ದಾಣಗಳ ನಡುವೆ ರೈಲ್ವೆ ಹಳಿಯ ಕೆಳಗೆ ಭೂ ಕುಸಿತವಾಗಿದೆ. ಈ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮಾರ್ಗದ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. </p>.<p>ಹಾಸನ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರದಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕಮೇರಿ-ಕಡಗರಹಳ್ಳಿ ರೈಲು ನಿಲ್ದಾಣಗಳ ನಡುವೆ ಹಳಿಯ ಕೆಳಗೆ ಭೂ ಕುಸಿತವಾಗಿದೆ. ಈ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.</p><p>ಶುಕ್ರವಾರ ರಾತ್ರಿ ಈ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದ್ದು, ಮಾರ್ಗದ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.</p><p> ಸುರಿಯುವ ಮಳೆಯ ನಡುವೆಯೇ ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.</p><p>ಮೈಸೂರು ವಿಭಾಗದ ಡಿಆರ್ಎಂ ಶಿಲ್ಪಾ ಅಗರ್ವಾಲ್ ಸೇರಿದಂತೆ ಅಧಿಕಾರಿಗಳು, ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ವೀಕ್ಷಣೆ ಮಾಡಿದರು. ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.</p><p>ಸುಮಾರು 500 ಮೀಟರ್ ಆಳಕ್ಕೆ ಭೂ ಕುಸಿತ ಉಂಟಾಗಿದೆ. ಗೂಡ್ಸ್ ರೈಲಿನಲ್ಲಿ ಕಲ್ಲುಗಳನ್ನು ತಂದು ಸ್ಥಳದಲ್ಲಿ ಹಾಕಲಾಗಿದ್ದು, ಹಳಿಯ ಕೆಳಗೆ ಮಣ್ಣು ಕುಸಿಯದಂತೆ ಕಾಮಗಾರಿ ಕೈಗೊಳ್ಳಲಾಗಿದೆ.</p><p>ಈ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ. ಸುಮಾರು 5 ದಿನಗಳ ಕಾಲ ಕಾರ್ಯಾಚರಣೆ ನಡೆಸಬೇಕಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು-ಮಂಗಳೂರು ಸೇರಿ, ಈ ಮಾರ್ಗದ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>