<p><strong>ಹಾಸನ:</strong> ‘ಸಾಕ್ಷಿ -ಆಧಾರವಿಲ್ಲದೇ ನನ್ನ ವಿರುದ್ಧ ಆರೋಪ ಮಾಡಿರುವ ಮತ್ತು ಅಸಂಬದ್ಧ ಪದ ಪ್ರಯೋಗ ಮಾಡಿರುವ ವಕೀಲ ದೇವರಾಜೇಗೌಡ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು’ ಎಂದು ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಜ್ವಲ್ ಹಾಗೂ ರೇವಣ್ಣ ಕುಟುಂಬದ ನ್ಯಾಯಾಲಯದಲ್ಲಿನ ಪ್ರಕರಣಗಳಲ್ಲಿ ಪೂರ್ಣಚಂದ್ರ ಅವರು ರಾಜಿ ಪಂಚಾಯಿತಿ ಮಾಡಲು ನನ್ನ ಬಳಿ ಬಂದಿದ್ದರು ಎಂದು ನೀಡಿರುವ ಹೇಳಿಕೆಗಳನ್ನು ಖಂಡಿಸುವುದಾಗಿ’ ತಿಳಿಸಿದರು.</p>.<p>‘ದೇವರಾಜೇಗೌಡ ಅವರು 2017 ರಿಂದ ವಕೀಲ ವೃತ್ತಿಯನ್ನು ಆರಂಭಿಸಿದ್ದಾರೆ. ಆದರೆ ನಾನು 2003 ವೃತ್ತಿ ಆರಂಭಿಸಿದ್ದೇನೆ. ಯಾವುದೇ ಆರೋಪ ಮಾಡಬೇಕಾದರೂ ಆಧಾರ ಇರಬೇಕು, ಸಾರ್ವಜನಿಕವಾಗಿ ನನ್ನ ವಿರುದ್ಧ ಹೇಳಿಕೆ ನೀಡಿರುವುದು ಕಾನೂನುಬಾಹಿರ’ ಎಂದರು.</p>.<p>‘ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಸಂಬಂಧ ರಾಜಿ ಮಾಡಲು ಬಂದಿದ್ದೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸೂಕ್ತ ದಾಖಲೆಯನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ ಅವರು, ‘ದೇವರಾಜೇಗೌಡ ಅವರ ಅಕ್ರಮ ಆಸ್ತಿ ಹಾಗೂ ಇತರೆ ಮಾಹಿತಿಯನ್ನು ಸೂಕ್ತ ದಾಖಲೆ ಸಮೇತ ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ’ ತಿಳಿಸಿದರು.</p>.<p>‘ದೇವರಾಜೇಗೌಡ ವಿರುದ್ಧ ಸರ್ಕಾರಿ ಚಿಹ್ನೆಯನ್ನು ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣಗಳು ವಿಚಾರಣೆಯಲ್ಲಿದ್ದು, ನನ್ನ ವಿರುದ್ಧ ಇಲ್ಲಸಲ್ಲದ ಅರೋಪ ಮಾಡುತ್ತಿದ್ದಾರೆ’ ಎಂದರು.</p>.<p>‘ಲಾರಿ ಚಾಲಕರಾಗಿದ್ದ ದೇವರಾಜೇಗೌಡರು 2017 ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದು, ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಾಗ ₹77 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಇಷ್ಟು ಪ್ರಮಾಣದ ಹಣವನ್ನು ಹೇಗೆ ಸಂಪಾದಿಸಿದರು. ಈ ಸಂಬಂಧ ಕೇಂದ್ರದ ತೆರಿಗೆ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುವಂತೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ’ ಹೇಳಿದರು.</p>.<p>ವಕೀಲರಾದ ಲೋಕೇಶ್, ಸುದೀಪ್, ಯತೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಸಾಕ್ಷಿ -ಆಧಾರವಿಲ್ಲದೇ ನನ್ನ ವಿರುದ್ಧ ಆರೋಪ ಮಾಡಿರುವ ಮತ್ತು ಅಸಂಬದ್ಧ ಪದ ಪ್ರಯೋಗ ಮಾಡಿರುವ ವಕೀಲ ದೇವರಾಜೇಗೌಡ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು’ ಎಂದು ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಜ್ವಲ್ ಹಾಗೂ ರೇವಣ್ಣ ಕುಟುಂಬದ ನ್ಯಾಯಾಲಯದಲ್ಲಿನ ಪ್ರಕರಣಗಳಲ್ಲಿ ಪೂರ್ಣಚಂದ್ರ ಅವರು ರಾಜಿ ಪಂಚಾಯಿತಿ ಮಾಡಲು ನನ್ನ ಬಳಿ ಬಂದಿದ್ದರು ಎಂದು ನೀಡಿರುವ ಹೇಳಿಕೆಗಳನ್ನು ಖಂಡಿಸುವುದಾಗಿ’ ತಿಳಿಸಿದರು.</p>.<p>‘ದೇವರಾಜೇಗೌಡ ಅವರು 2017 ರಿಂದ ವಕೀಲ ವೃತ್ತಿಯನ್ನು ಆರಂಭಿಸಿದ್ದಾರೆ. ಆದರೆ ನಾನು 2003 ವೃತ್ತಿ ಆರಂಭಿಸಿದ್ದೇನೆ. ಯಾವುದೇ ಆರೋಪ ಮಾಡಬೇಕಾದರೂ ಆಧಾರ ಇರಬೇಕು, ಸಾರ್ವಜನಿಕವಾಗಿ ನನ್ನ ವಿರುದ್ಧ ಹೇಳಿಕೆ ನೀಡಿರುವುದು ಕಾನೂನುಬಾಹಿರ’ ಎಂದರು.</p>.<p>‘ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಸಂಬಂಧ ರಾಜಿ ಮಾಡಲು ಬಂದಿದ್ದೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸೂಕ್ತ ದಾಖಲೆಯನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ ಅವರು, ‘ದೇವರಾಜೇಗೌಡ ಅವರ ಅಕ್ರಮ ಆಸ್ತಿ ಹಾಗೂ ಇತರೆ ಮಾಹಿತಿಯನ್ನು ಸೂಕ್ತ ದಾಖಲೆ ಸಮೇತ ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ’ ತಿಳಿಸಿದರು.</p>.<p>‘ದೇವರಾಜೇಗೌಡ ವಿರುದ್ಧ ಸರ್ಕಾರಿ ಚಿಹ್ನೆಯನ್ನು ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣಗಳು ವಿಚಾರಣೆಯಲ್ಲಿದ್ದು, ನನ್ನ ವಿರುದ್ಧ ಇಲ್ಲಸಲ್ಲದ ಅರೋಪ ಮಾಡುತ್ತಿದ್ದಾರೆ’ ಎಂದರು.</p>.<p>‘ಲಾರಿ ಚಾಲಕರಾಗಿದ್ದ ದೇವರಾಜೇಗೌಡರು 2017 ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದು, ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಾಗ ₹77 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಇಷ್ಟು ಪ್ರಮಾಣದ ಹಣವನ್ನು ಹೇಗೆ ಸಂಪಾದಿಸಿದರು. ಈ ಸಂಬಂಧ ಕೇಂದ್ರದ ತೆರಿಗೆ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುವಂತೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ’ ಹೇಳಿದರು.</p>.<p>ವಕೀಲರಾದ ಲೋಕೇಶ್, ಸುದೀಪ್, ಯತೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>