<p><strong>ಹೊಳೆನರಸೀಪುರ</strong>: ತಾಲ್ಲೂಕಿನ ಹರದನಹಳ್ಳಿಯ ಶಿವನ ದೇವಾಲಯದಲ್ಲಿ ಬುಧವಾರ ಬೆಳಗಿನ ಜಾವ ಪೂಜೆ ಸಲ್ಲಿಸಿ ಬರುವಾಗ ಮೆಟ್ಟಿಲಿನ ಮೇಲೆ ಕಾಲು ಜಾರಿಬಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಬಲಪಕ್ಕೆಯ 6 ನೇ ಮೂಳೆಯಲ್ಲಿ ಸಣ್ಣ ಬಿರುಕು ಬಿಟ್ಟಿದೆ. 7ನೇ ಮೂಳೆಗೆ ಹೆಚ್ಚು ಹಾನಿಯಾಗಿದೆ.</p>.<p>ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್, ಮೂಳೆ ತಜ್ಞರಾದ ಡಾ.ಜೆ.ಕೆ. ದಿನೇಶ್, ಡಾ. ದಿನೇಶ್ ಕುಮಾರ್ ಹಾಗೂ ಡಾ. ಸತ್ಯಪ್ರಕಾಶ್, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರು.</p>.<p>‘ಗಾಬರಿ ಪಡಬೇಕಿಲ್ಲ. 3 ವಾರಗಳ ವಿಶ್ರಾಂತಿಯಿಂದ ಸಂಪೂರ್ಣ ಗುಣಮುಖರಾಗುತ್ತಾರೆ. ಮೂಳೆಗಳು ವಯಸ್ಸಿಗೆ ತಕ್ಕಂತೆ ದೃಢವಾಗಿವೆ’ ಎಂದು ವೈದ್ಯರು ತಿಳಿಸಿದರು.</p>.<p>ರೇವಣ್ಣ ಕೆಲಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದು, ಬೆಂಗಳೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುವುದಾಗಿ ಹೇಳಿ ತೆರಳಿದರು. ಆಷಾಢ ಏಕಾದಶಿಯ ಪ್ರಯುಕ್ತ ಹರದನಹಳ್ಳಿಯಿಂದ ಬಂದಿದ್ದ ಅವರು ಮೊದಲಿಗೆ ಇಲ್ಲಿನ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲೂ ಪೂಜೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ತಾಲ್ಲೂಕಿನ ಹರದನಹಳ್ಳಿಯ ಶಿವನ ದೇವಾಲಯದಲ್ಲಿ ಬುಧವಾರ ಬೆಳಗಿನ ಜಾವ ಪೂಜೆ ಸಲ್ಲಿಸಿ ಬರುವಾಗ ಮೆಟ್ಟಿಲಿನ ಮೇಲೆ ಕಾಲು ಜಾರಿಬಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಬಲಪಕ್ಕೆಯ 6 ನೇ ಮೂಳೆಯಲ್ಲಿ ಸಣ್ಣ ಬಿರುಕು ಬಿಟ್ಟಿದೆ. 7ನೇ ಮೂಳೆಗೆ ಹೆಚ್ಚು ಹಾನಿಯಾಗಿದೆ.</p>.<p>ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್, ಮೂಳೆ ತಜ್ಞರಾದ ಡಾ.ಜೆ.ಕೆ. ದಿನೇಶ್, ಡಾ. ದಿನೇಶ್ ಕುಮಾರ್ ಹಾಗೂ ಡಾ. ಸತ್ಯಪ್ರಕಾಶ್, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರು.</p>.<p>‘ಗಾಬರಿ ಪಡಬೇಕಿಲ್ಲ. 3 ವಾರಗಳ ವಿಶ್ರಾಂತಿಯಿಂದ ಸಂಪೂರ್ಣ ಗುಣಮುಖರಾಗುತ್ತಾರೆ. ಮೂಳೆಗಳು ವಯಸ್ಸಿಗೆ ತಕ್ಕಂತೆ ದೃಢವಾಗಿವೆ’ ಎಂದು ವೈದ್ಯರು ತಿಳಿಸಿದರು.</p>.<p>ರೇವಣ್ಣ ಕೆಲಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದು, ಬೆಂಗಳೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುವುದಾಗಿ ಹೇಳಿ ತೆರಳಿದರು. ಆಷಾಢ ಏಕಾದಶಿಯ ಪ್ರಯುಕ್ತ ಹರದನಹಳ್ಳಿಯಿಂದ ಬಂದಿದ್ದ ಅವರು ಮೊದಲಿಗೆ ಇಲ್ಲಿನ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲೂ ಪೂಜೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>