<p><strong>ಸಕಲೇಶಪುರ (ಹಾಸನ):</strong> ನೈಋತ್ಯ ರೈಲ್ವೆ ಮೈಸೂರು ವಿಭಾಗದ ವತಿಯಿಂದ ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕ ವಿಪತ್ತು ನಿರ್ವಹಣಾ ಅಣಕು ಕವಾಯತು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರ ಆಕ್ರೋಶಕ್ಕೆ ಕಾರಣವಾಯಿತು.</p>.<p>‘ರೈಲು ನಿಲ್ದಾಣದಲ್ಲಿ ಅಪಘಾತವಾಗಿ ಪ್ರಯಾಣಿಕರ ಸಾವು– ನೋವುಗಳು ಉಂಟಾಗಿವೆ’ ಎಂಬ ಮಾಹಿತಿ ತಲುಪಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಉಪ ವಿಭಾಗಾಧಿಕಾರಿ ಡಾ. ಎಂ.ಕೆ. ಶ್ರುತಿ ಹಾಗೂ ತಹಶೀಲ್ದಾರ್ ಜಿ. ಮೇಘನಾ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದರು.</p>.<p>ಇಬ್ಬರೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದಾಗ ಪ್ರಯಾಣಿಕರ ರೈಲಿನ ಸ್ಲೀಪರ್ ಕೋಚ್ ಉರುಳಿ ಬಿದ್ದಿತ್ತು. ಎನ್ಡಿಆರ್ಎಫ್ ತಂಡ ತುರ್ತು ಕಾರ್ಯನಿರ್ವಹಣೆ ಮಾಡುತ್ತಿದ್ದದನ್ನು ನೋಡಿ ಅವರು ಮತ್ತಷ್ಟು ಗಾಬರಿಗೊಂಡರು.</p>.<p>‘ಅದು ಅಣಕು ಕವಾಯತು’ ಎಂದು ಅವರಿಗೆ ಆಗಷ್ಟೇ ತಿಳಿಯಿತು. ಆ ಮಾಹಿತಿಯನ್ನು ನೀಡುವುದರೊಳಗೇ ಜಿಲ್ಲಾಧಿಕಾರಿಯೂ ನಿಲ್ದಾಣಕ್ಕೆ ಬಂದಿಳಿದರು. ಅಣಕು ಕಾರ್ಯಾಚರಣೆಯ ವಿಷಯ ತಿಳಿಯುತ್ತಿದ್ದಂತೆಯೇ ಸಿಟ್ಟಾದರು.</p>.<p>‘ಜಿಲ್ಲಾಧಿಕಾರಿಯಾಗಿ ಸಾಕಷ್ಟು ಕೆಲಸಗಳಿರುತ್ತವೆ. ಮೊನ್ನೆ ಆಲೂರಿನ ಕೆರೆಯಲ್ಲಿ ನಾಲ್ಕು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಈಗ ದೊಡ್ಡ ಪ್ರಮಾಣದಲ್ಲಿ ರೈಲು ಅಪಘಾತವಾಗಿದೆ ಎಂದು ಎಲ್ಲಾ ಕೆಲಸ ಬಿಟ್ಟು ತರಾತುರಿಯಲ್ಲಿ ಬರುವಂತೆ ಮಾಡಿದ್ದೀರಿ’ ಎಂದು ರೈಲ್ವೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ (ಹಾಸನ):</strong> ನೈಋತ್ಯ ರೈಲ್ವೆ ಮೈಸೂರು ವಿಭಾಗದ ವತಿಯಿಂದ ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕ ವಿಪತ್ತು ನಿರ್ವಹಣಾ ಅಣಕು ಕವಾಯತು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರ ಆಕ್ರೋಶಕ್ಕೆ ಕಾರಣವಾಯಿತು.</p>.<p>‘ರೈಲು ನಿಲ್ದಾಣದಲ್ಲಿ ಅಪಘಾತವಾಗಿ ಪ್ರಯಾಣಿಕರ ಸಾವು– ನೋವುಗಳು ಉಂಟಾಗಿವೆ’ ಎಂಬ ಮಾಹಿತಿ ತಲುಪಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಉಪ ವಿಭಾಗಾಧಿಕಾರಿ ಡಾ. ಎಂ.ಕೆ. ಶ್ರುತಿ ಹಾಗೂ ತಹಶೀಲ್ದಾರ್ ಜಿ. ಮೇಘನಾ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದರು.</p>.<p>ಇಬ್ಬರೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದಾಗ ಪ್ರಯಾಣಿಕರ ರೈಲಿನ ಸ್ಲೀಪರ್ ಕೋಚ್ ಉರುಳಿ ಬಿದ್ದಿತ್ತು. ಎನ್ಡಿಆರ್ಎಫ್ ತಂಡ ತುರ್ತು ಕಾರ್ಯನಿರ್ವಹಣೆ ಮಾಡುತ್ತಿದ್ದದನ್ನು ನೋಡಿ ಅವರು ಮತ್ತಷ್ಟು ಗಾಬರಿಗೊಂಡರು.</p>.<p>‘ಅದು ಅಣಕು ಕವಾಯತು’ ಎಂದು ಅವರಿಗೆ ಆಗಷ್ಟೇ ತಿಳಿಯಿತು. ಆ ಮಾಹಿತಿಯನ್ನು ನೀಡುವುದರೊಳಗೇ ಜಿಲ್ಲಾಧಿಕಾರಿಯೂ ನಿಲ್ದಾಣಕ್ಕೆ ಬಂದಿಳಿದರು. ಅಣಕು ಕಾರ್ಯಾಚರಣೆಯ ವಿಷಯ ತಿಳಿಯುತ್ತಿದ್ದಂತೆಯೇ ಸಿಟ್ಟಾದರು.</p>.<p>‘ಜಿಲ್ಲಾಧಿಕಾರಿಯಾಗಿ ಸಾಕಷ್ಟು ಕೆಲಸಗಳಿರುತ್ತವೆ. ಮೊನ್ನೆ ಆಲೂರಿನ ಕೆರೆಯಲ್ಲಿ ನಾಲ್ಕು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಈಗ ದೊಡ್ಡ ಪ್ರಮಾಣದಲ್ಲಿ ರೈಲು ಅಪಘಾತವಾಗಿದೆ ಎಂದು ಎಲ್ಲಾ ಕೆಲಸ ಬಿಟ್ಟು ತರಾತುರಿಯಲ್ಲಿ ಬರುವಂತೆ ಮಾಡಿದ್ದೀರಿ’ ಎಂದು ರೈಲ್ವೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>