<p><strong>ಹಾಸನ</strong>: ಪುರದಮ್ಮ ದೇವಸ್ಥಾನದ ಅರ್ಚಕ ಎಂದು ಹೇಳಲಾದ ದಯಾನಂದ ಎಂಬುವವನು ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದು, ಆತನಿಗೂ, ಪುರದಮ್ಮ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬೀಕನಹಳ್ಳಿ ಗ್ರಾಮಸ್ಥ ಪ್ರಕಾಶ್ ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರದಮ್ಮ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಮಹಿಳೆಯ ಮೇಲೆ ಮೇಲೆ ದಯಾನಂದ ಎಂಬ ಅರ್ಚಕ ಅತ್ಯಾಚಾರ ಎಸಗಿದ್ದಾನೆ ಎಂಬ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿರುವುದು ವಿಷಾದನೀಯ. ಆದರೆ ಅರಸೀಕೆರೆಯ ದಯಾನಂದ ಎಂಬಾತನಿಗೆ, ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.</p>.<p>ಪುರದಮ್ಮ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಅಧಿಕೃತವಾಗಿ ಅರ್ಚಕರನ್ನಾಗಿ ಅಶೋಕ ಎಂಬುವವರನ್ನು ತಾಲ್ಲೂಕು ಆಡಳಿತ ನಿಯೋಜನೆ ಮಾಡಿದೆ ಎಂದರು.</p>.<p>ಅತ್ಯಾಚಾರ ಆರೋಪ ಹೊತ್ತಿರುವ ದಯಾನಂದ, ಸಾಮಾನ್ಯ ಭಕ್ತನಾಗಿ ಪುರದಮ್ಮ ದೇವಸ್ಥಾನಕ್ಕೆ ಪೀಠವನ್ನು ಕೊಡುಗೆಯಾಗಿ ನೀಡಿದ್ದ. ಆ ಸಂದರ್ಭದಲ್ಲಿ ದೇವರಿಗೆ ಪೂಜೆ ಮಾಡುವ ವಿಡಿಯೋ ಚಿತ್ರೀಕರಣ ಮಾಡಿದ್ದು, ಅದನ್ನು ಈ ಸಂದರ್ಭದಲ್ಲಿ ಬಳಸಿಕೊಳ್ಳಲಾಗಿದೆ. ಇದನ್ನೇ ಮಾಧ್ಯಮಗಳಲ್ಲಿ ಬಿತ್ತರ ಮಾಡುತ್ತಿದ್ದು, ಆತ ಪುರದಮ್ಮ ದೇವಾಲಯದಲ್ಲಿ ಆರ್ಚಕನಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಈ ದೇವಾಲಯದ ಸುತ್ತ ಅನಧಿಕೃತವಾಗಿ ದೇವರಪೀಠ ಬಾಡಿಗೆ ಕೊಡುವುದು ಹಾಗೂ ಇತರೆ ಧಾರ್ಮಿಕ ವಿಧಿ ವಿಧಾನಗಳನ್ನು ಮಾಡುವ ಮೂಲಕ ಭಕ್ತಾದಿಗಳನ್ನು ದಾರಿ ತಪ್ಪಿಸಲಾಗುತ್ತಿದೆ. ಮುಜರಾಯಿ ಇಲಾಖೆ ಸೂಕ್ತ ಕ್ರಮ ಕೈಗೊಂಡು ಅಧಿಕೃತವಾಗಿ ಸಿಬ್ಬಂದಿ ಮತ್ತು ಆಡಳಿತಾಧಿಕಾರಿಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದರು.</p>.<p>ಬೀಕನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ರವಿ, ಯಲಗುಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಪುರದಮ್ಮ ದೇವಸ್ಥಾನದ ಅರ್ಚಕ ಎಂದು ಹೇಳಲಾದ ದಯಾನಂದ ಎಂಬುವವನು ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದು, ಆತನಿಗೂ, ಪುರದಮ್ಮ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬೀಕನಹಳ್ಳಿ ಗ್ರಾಮಸ್ಥ ಪ್ರಕಾಶ್ ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರದಮ್ಮ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಮಹಿಳೆಯ ಮೇಲೆ ಮೇಲೆ ದಯಾನಂದ ಎಂಬ ಅರ್ಚಕ ಅತ್ಯಾಚಾರ ಎಸಗಿದ್ದಾನೆ ಎಂಬ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿರುವುದು ವಿಷಾದನೀಯ. ಆದರೆ ಅರಸೀಕೆರೆಯ ದಯಾನಂದ ಎಂಬಾತನಿಗೆ, ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.</p>.<p>ಪುರದಮ್ಮ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಅಧಿಕೃತವಾಗಿ ಅರ್ಚಕರನ್ನಾಗಿ ಅಶೋಕ ಎಂಬುವವರನ್ನು ತಾಲ್ಲೂಕು ಆಡಳಿತ ನಿಯೋಜನೆ ಮಾಡಿದೆ ಎಂದರು.</p>.<p>ಅತ್ಯಾಚಾರ ಆರೋಪ ಹೊತ್ತಿರುವ ದಯಾನಂದ, ಸಾಮಾನ್ಯ ಭಕ್ತನಾಗಿ ಪುರದಮ್ಮ ದೇವಸ್ಥಾನಕ್ಕೆ ಪೀಠವನ್ನು ಕೊಡುಗೆಯಾಗಿ ನೀಡಿದ್ದ. ಆ ಸಂದರ್ಭದಲ್ಲಿ ದೇವರಿಗೆ ಪೂಜೆ ಮಾಡುವ ವಿಡಿಯೋ ಚಿತ್ರೀಕರಣ ಮಾಡಿದ್ದು, ಅದನ್ನು ಈ ಸಂದರ್ಭದಲ್ಲಿ ಬಳಸಿಕೊಳ್ಳಲಾಗಿದೆ. ಇದನ್ನೇ ಮಾಧ್ಯಮಗಳಲ್ಲಿ ಬಿತ್ತರ ಮಾಡುತ್ತಿದ್ದು, ಆತ ಪುರದಮ್ಮ ದೇವಾಲಯದಲ್ಲಿ ಆರ್ಚಕನಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಈ ದೇವಾಲಯದ ಸುತ್ತ ಅನಧಿಕೃತವಾಗಿ ದೇವರಪೀಠ ಬಾಡಿಗೆ ಕೊಡುವುದು ಹಾಗೂ ಇತರೆ ಧಾರ್ಮಿಕ ವಿಧಿ ವಿಧಾನಗಳನ್ನು ಮಾಡುವ ಮೂಲಕ ಭಕ್ತಾದಿಗಳನ್ನು ದಾರಿ ತಪ್ಪಿಸಲಾಗುತ್ತಿದೆ. ಮುಜರಾಯಿ ಇಲಾಖೆ ಸೂಕ್ತ ಕ್ರಮ ಕೈಗೊಂಡು ಅಧಿಕೃತವಾಗಿ ಸಿಬ್ಬಂದಿ ಮತ್ತು ಆಡಳಿತಾಧಿಕಾರಿಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದರು.</p>.<p>ಬೀಕನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ರವಿ, ಯಲಗುಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>