<p><strong>ಹಾಸನ</strong>: ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಮೊದಲ ಬಾರಿಗೆ ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದ ಶಾಸಕ ಎಚ್.ಡಿ. ರೇವಣ್ಣ ಕೊನೆಯ ಕ್ಷಣದಲ್ಲಿ ತಮ್ಮ ಪ್ರವಾಸವನ್ನು ಬದಲಾಯಿಸಿದರು.</p>.<p>ಬೆಂಗಳೂರಿನಿಂದ ರಸ್ತೆ ಮೂಲಕ ಜಿಲ್ಲೆಯ ಹಿರೀಸಾವೆ ಹೋಬಳಿಯ ಕಿರೀಸಾವೆಗೆ ಬಂದ ಅವರನ್ನು ಕಾರ್ಯಕರ್ತರು, ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಅವರು ಹೊಳೆನರಸೀಪುರಕ್ಕೆ ತೆರಳಿ, ಮನೆ ದೇವರಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಅವರು ಮೈಸೂರಿಗೆ ಪ್ರಯಾಣ ಬೆಳೆಸಿದರು.</p>.<p>ರೇವಣ್ಣ ಅವರನ್ನು ಸ್ವಾಗತಿಸಲು ಹೊಳೆನರಸೀಪುರದಲ್ಲಿ ಸಜ್ಜಾಗಿದ್ದ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರು, ನಿರಾಸೆಯಿಂದ ಮನೆಗೆ ವಾಪಸ್ ತೆರಳಿದರು. ಅವರ ಬರುವಿಕೆ ಹಿನ್ನೆಲೆಯಲ್ಲಿ ಹೊಳೆನರಸೀಪುರದ ಅವರ ಮನೆ, ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನ, ಹರದನಹಳ್ಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.</p>.<p>‘ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳಿದರು’ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಮೊದಲ ಬಾರಿಗೆ ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದ ಶಾಸಕ ಎಚ್.ಡಿ. ರೇವಣ್ಣ ಕೊನೆಯ ಕ್ಷಣದಲ್ಲಿ ತಮ್ಮ ಪ್ರವಾಸವನ್ನು ಬದಲಾಯಿಸಿದರು.</p>.<p>ಬೆಂಗಳೂರಿನಿಂದ ರಸ್ತೆ ಮೂಲಕ ಜಿಲ್ಲೆಯ ಹಿರೀಸಾವೆ ಹೋಬಳಿಯ ಕಿರೀಸಾವೆಗೆ ಬಂದ ಅವರನ್ನು ಕಾರ್ಯಕರ್ತರು, ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಅವರು ಹೊಳೆನರಸೀಪುರಕ್ಕೆ ತೆರಳಿ, ಮನೆ ದೇವರಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಅವರು ಮೈಸೂರಿಗೆ ಪ್ರಯಾಣ ಬೆಳೆಸಿದರು.</p>.<p>ರೇವಣ್ಣ ಅವರನ್ನು ಸ್ವಾಗತಿಸಲು ಹೊಳೆನರಸೀಪುರದಲ್ಲಿ ಸಜ್ಜಾಗಿದ್ದ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರು, ನಿರಾಸೆಯಿಂದ ಮನೆಗೆ ವಾಪಸ್ ತೆರಳಿದರು. ಅವರ ಬರುವಿಕೆ ಹಿನ್ನೆಲೆಯಲ್ಲಿ ಹೊಳೆನರಸೀಪುರದ ಅವರ ಮನೆ, ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನ, ಹರದನಹಳ್ಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.</p>.<p>‘ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳಿದರು’ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>