<p><strong>ಬೇಲೂರು</strong>: ಅರಣ್ಯ ವಿಭಾಗದ ಆಲೂರು, ಬೇಲೂರು, ಸಕಲೇಶಪುರ ಮತ್ತು ಯಸಳೂರು ವಲಯಗಳ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳಿಗೆ ರೆಡಿಯೊ ಕಾಲರ್ ಅಳವಡಿಸುವ ಮತ್ತು ಸೆರೆಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಯ 5 ನೇ ದಿನವಾದ ಮಂಗಳವಾರ ಮುಂದುವರಿಯಿತು.</p>.<p>ಬೇಲೂರು ತಾಲ್ಲೂಕು ಅರೇಹಳ್ಳಿ ಶಾಖೆಯ ದೊಡ್ಡ ಉಡುವೆ ಎಸ್ಟೇಟ್ ಬಳಿ ಹೊಳವು ಜೈದೀಪ್ ಅವರ ತೋಟದಲ್ಲಿ ಒಂಟಿ ಕೋರೆಯ ಗಂಡಾನೆ ಸೆರೆ ಹಿಡಿಯಲಾಗಿದ್ದು, ಸ್ಥಳಾಂತರಿಸಲಾಯಿತು.</p>.<p>ಕಾರ್ಯಾಚರಣೆಯಲ್ಲಿ ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಆರ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭುಗೌಡ ಬಿರಾದಾರ, ಎಸ್.ಪಿ.ಮಹದೇವ್ ಮತ್ತು ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.</p>.<p>5 ದಿನಗಳಲ್ಲಿ ಒಟ್ಟು 03 ಕಾಡಾನೆಗಳಿಗೆ ರೆಡಿಯೊ ಕಾಲರ್ ಅಳವಡಿಸಲಾಗಿದ್ದು, 2 ಕಾಡಾನೆಗಳನ್ನು ಸ್ಥಳಾಂತರ ಮಾಡಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಸುತ್ತಲಿನ ಪ್ರದೇಶದ ಸಾರ್ವಜನಿಕರು ಮನೆಯಿಂದ ಹೊರಬಾರದಂತೆ ಎಚ್ಚರಿಕೆಯಿಂದ ಇರಲು ಇಲಾಖೆಯ ಜೀಪ್ಗಳಲ್ಲಿ ಮೈಕ್ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಡಿಎಫ್ಒ ಮೋಹನ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಅರಣ್ಯ ವಿಭಾಗದ ಆಲೂರು, ಬೇಲೂರು, ಸಕಲೇಶಪುರ ಮತ್ತು ಯಸಳೂರು ವಲಯಗಳ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳಿಗೆ ರೆಡಿಯೊ ಕಾಲರ್ ಅಳವಡಿಸುವ ಮತ್ತು ಸೆರೆಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಯ 5 ನೇ ದಿನವಾದ ಮಂಗಳವಾರ ಮುಂದುವರಿಯಿತು.</p>.<p>ಬೇಲೂರು ತಾಲ್ಲೂಕು ಅರೇಹಳ್ಳಿ ಶಾಖೆಯ ದೊಡ್ಡ ಉಡುವೆ ಎಸ್ಟೇಟ್ ಬಳಿ ಹೊಳವು ಜೈದೀಪ್ ಅವರ ತೋಟದಲ್ಲಿ ಒಂಟಿ ಕೋರೆಯ ಗಂಡಾನೆ ಸೆರೆ ಹಿಡಿಯಲಾಗಿದ್ದು, ಸ್ಥಳಾಂತರಿಸಲಾಯಿತು.</p>.<p>ಕಾರ್ಯಾಚರಣೆಯಲ್ಲಿ ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಆರ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭುಗೌಡ ಬಿರಾದಾರ, ಎಸ್.ಪಿ.ಮಹದೇವ್ ಮತ್ತು ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.</p>.<p>5 ದಿನಗಳಲ್ಲಿ ಒಟ್ಟು 03 ಕಾಡಾನೆಗಳಿಗೆ ರೆಡಿಯೊ ಕಾಲರ್ ಅಳವಡಿಸಲಾಗಿದ್ದು, 2 ಕಾಡಾನೆಗಳನ್ನು ಸ್ಥಳಾಂತರ ಮಾಡಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಸುತ್ತಲಿನ ಪ್ರದೇಶದ ಸಾರ್ವಜನಿಕರು ಮನೆಯಿಂದ ಹೊರಬಾರದಂತೆ ಎಚ್ಚರಿಕೆಯಿಂದ ಇರಲು ಇಲಾಖೆಯ ಜೀಪ್ಗಳಲ್ಲಿ ಮೈಕ್ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಡಿಎಫ್ಒ ಮೋಹನ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>