<p><strong>ಬೇಲೂರು:</strong> ಪುರಸಭೆಗೆ ಸೇರಿದ ವಾಣಿಜ್ಯ ಮಳಿಗೆಗೆಳ ಹರಾಜು ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಆಡಳಿತ ಮಂಡಳಿ ಹಾಗೂ ಸದಸ್ಯರು ಕ್ರಮಕೈಗೊಳ್ಳಬೇಕು ಎಂದು ಕರವೇ (ಪ್ರವೀಣ್ಶೆಟ್ಟಿ ಬಣ ) ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಸ್. ಭೋಜೇಗೌಡ ಆಗ್ರಹಿಸಿದರು.</p>.<p>ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ರವರಿಗೆ ಗುರುವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು, ಪುರಸಭೆಗೆ ಸೇರಿದ 134 ವಾಣಿಜ್ಯ ಮಳಿಗೆಗಳ ಹರಾಜನ್ನು ಇ- ಪ್ರಕ್ಯೂರ್ಮೆಂಟ್ ಮೂಲಕ ನಡೆಸಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ ಈ ಹರಾಜು ಪ್ರಕ್ರಿಯೆಯಲ್ಲಿ ಕಾಣದ ಕೈಗಳಿಂದ ಹಣದ ದೊಡ್ಡ ದಂಧೆಯೇ ನಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಒಂದು ಮಳಿಗೆಗೆ ₹5ರಿಂದ ₹6ಲಕ್ಷ ಬೇಡಿಕೆ ಇಡಲಾಗಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಉಳ್ಳವರು ಬೇರೆಯವರ ಹೆಸರಿನಲ್ಲಿ 5ರಿಂದ 6 ಮಳಿಗೆ ಮಾಡಿಕೊಂಡು ಬಾಡಿಗೆ ಕೊಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಇದ್ದು, ಟೆಂಡರ್ ಪ್ರಕಕ್ರಿಯೆಯಲ್ಲಿ ಅವ್ಯವಹಾರ ನಡೆದರೆ ಸಂಘಟನೆಯಿಂದ ಪತ್ರಿಭಟನೆ ನಡೆಸಲಾಗುವುದು. ಈ ಬಗ್ಗೆ ಎಚ್ಚರ ವಹಿಸಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಸದಸ್ಯರು ಕ್ರಮಕ್ಕೆ ಮುಂದಾಗಬೇಕು ಎಂದರು.</p>.<p>ಕರವೇ ಪದಾಧಿಕಾರಿಗಳ ಮನವಿ ಸ್ವೀಕರಿಸಿ ಮಾತನಾಡಿದ ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಮಳಿಗೆಗಳ ಹರಾಜನ್ನು ಪಾರದರ್ಶಕವಾಗಿ ನಡೆಸುತ್ತಿದ್ದೇವೆ. ಇಲ್ಲಿ ಯವುದೇ ಅವ್ಯವಹಾರಕ್ಕೆ ಅವಕಾಶವಿಲ್ಲ. 134 ಮಳಿಗೆಗಳಿಂದ ₹2.84 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಕಟ್ಟದಿರುವವರು ಹರಾಜಿನಲ್ಲಿ ಭಾಗವಹಸಿಲು ಅವಕಾಶವಿಲ್ಲ. ಬೇ-ಬಾಕಿ ಪ್ರತಿ ನೀಡಿದರೆ ಹರಾಜಿನಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗುವುದು. ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷದವರು ಅಪಪ್ರಚಾರ ನಡೆಸುತ್ತಿದ್ದಾರೆ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಸುಜಯ್ಕುಮಾರ್ ಹಾಗೂ ಕರವೇ ಪ್ರಧಾನ ಕಾರ್ಯದರ್ಶಿ ಜಯ ಪ್ರಕಾಶ್, ಪದಾಧಿಕಾರಿಗಳಾದ ದಿನೇಶ್, ನವೀನ್ ಅರುಣ್ ಸಿಂಗ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಪುರಸಭೆಗೆ ಸೇರಿದ ವಾಣಿಜ್ಯ ಮಳಿಗೆಗೆಳ ಹರಾಜು ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಆಡಳಿತ ಮಂಡಳಿ ಹಾಗೂ ಸದಸ್ಯರು ಕ್ರಮಕೈಗೊಳ್ಳಬೇಕು ಎಂದು ಕರವೇ (ಪ್ರವೀಣ್ಶೆಟ್ಟಿ ಬಣ ) ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಸ್. ಭೋಜೇಗೌಡ ಆಗ್ರಹಿಸಿದರು.</p>.<p>ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ರವರಿಗೆ ಗುರುವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು, ಪುರಸಭೆಗೆ ಸೇರಿದ 134 ವಾಣಿಜ್ಯ ಮಳಿಗೆಗಳ ಹರಾಜನ್ನು ಇ- ಪ್ರಕ್ಯೂರ್ಮೆಂಟ್ ಮೂಲಕ ನಡೆಸಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ ಈ ಹರಾಜು ಪ್ರಕ್ರಿಯೆಯಲ್ಲಿ ಕಾಣದ ಕೈಗಳಿಂದ ಹಣದ ದೊಡ್ಡ ದಂಧೆಯೇ ನಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಒಂದು ಮಳಿಗೆಗೆ ₹5ರಿಂದ ₹6ಲಕ್ಷ ಬೇಡಿಕೆ ಇಡಲಾಗಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಉಳ್ಳವರು ಬೇರೆಯವರ ಹೆಸರಿನಲ್ಲಿ 5ರಿಂದ 6 ಮಳಿಗೆ ಮಾಡಿಕೊಂಡು ಬಾಡಿಗೆ ಕೊಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಇದ್ದು, ಟೆಂಡರ್ ಪ್ರಕಕ್ರಿಯೆಯಲ್ಲಿ ಅವ್ಯವಹಾರ ನಡೆದರೆ ಸಂಘಟನೆಯಿಂದ ಪತ್ರಿಭಟನೆ ನಡೆಸಲಾಗುವುದು. ಈ ಬಗ್ಗೆ ಎಚ್ಚರ ವಹಿಸಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಸದಸ್ಯರು ಕ್ರಮಕ್ಕೆ ಮುಂದಾಗಬೇಕು ಎಂದರು.</p>.<p>ಕರವೇ ಪದಾಧಿಕಾರಿಗಳ ಮನವಿ ಸ್ವೀಕರಿಸಿ ಮಾತನಾಡಿದ ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಮಳಿಗೆಗಳ ಹರಾಜನ್ನು ಪಾರದರ್ಶಕವಾಗಿ ನಡೆಸುತ್ತಿದ್ದೇವೆ. ಇಲ್ಲಿ ಯವುದೇ ಅವ್ಯವಹಾರಕ್ಕೆ ಅವಕಾಶವಿಲ್ಲ. 134 ಮಳಿಗೆಗಳಿಂದ ₹2.84 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಕಟ್ಟದಿರುವವರು ಹರಾಜಿನಲ್ಲಿ ಭಾಗವಹಸಿಲು ಅವಕಾಶವಿಲ್ಲ. ಬೇ-ಬಾಕಿ ಪ್ರತಿ ನೀಡಿದರೆ ಹರಾಜಿನಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗುವುದು. ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷದವರು ಅಪಪ್ರಚಾರ ನಡೆಸುತ್ತಿದ್ದಾರೆ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಸುಜಯ್ಕುಮಾರ್ ಹಾಗೂ ಕರವೇ ಪ್ರಧಾನ ಕಾರ್ಯದರ್ಶಿ ಜಯ ಪ್ರಕಾಶ್, ಪದಾಧಿಕಾರಿಗಳಾದ ದಿನೇಶ್, ನವೀನ್ ಅರುಣ್ ಸಿಂಗ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>