<p><strong>ಅರಕಲಗೂಡು</strong>: ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಆಲೂಗೆಡ್ಡೆ ಬೆಳೆಗೆ ಮುಂಜಾಗ್ರತಾ ಕ್ರಮವಾಗಿ ಶಿಲೀಂಧ್ರ ನಾಶಕಗಳನ್ನು ಮಳೆ ಇಲ್ಲದ ಸಮಯದಲ್ಲಿ ಸಿಂಪಡಿಸಬೇಕೆಂದು ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಮಂಗಳಾ ತಿಳಿಸಿದರು.</p>.<p>ತಾಲ್ಲೂಕಿನ ವಿವಿಧ ರೈತರ ಆಲೂಗೆಡ್ಡೆ ತಾಕುಗಳಿಗೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಂಗಾಂಶ ಬಾಳೆ ತಾಕಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿ ಆಲೂಗಡ್ಡೆ ಬೆಳೆಯ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 650 ರಿಂದ 700 ಹೆಕ್ಟೇರ್ ಜಮೀನಿನಲ್ಲಿ ಆಲೂಗೆಡ್ಡೆ ಬೆಳೆ ಬಿತ್ತನೆ ನಡೆದಿದ್ದು, ಈವರೆಗೂ ಅಂಗಮಾರಿ ರೋಗ ಕಂಡು ಬಂದಿಲ್ಲ ಎಂದರು.</p>.<p>ಹಿರಿಯ ಸಹಾಯಕ ನಿರ್ದೆಶಕ ಡಿ.ರಾಜೇಶ್, ದೊಡ್ಡಮಗ್ಗೆ ಸಹಾಯಕ ತೋಟಗಾರಿಕೆ ಅಧಿಕಾರಿ ಪಲ್ಲವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು</strong>: ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಆಲೂಗೆಡ್ಡೆ ಬೆಳೆಗೆ ಮುಂಜಾಗ್ರತಾ ಕ್ರಮವಾಗಿ ಶಿಲೀಂಧ್ರ ನಾಶಕಗಳನ್ನು ಮಳೆ ಇಲ್ಲದ ಸಮಯದಲ್ಲಿ ಸಿಂಪಡಿಸಬೇಕೆಂದು ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಮಂಗಳಾ ತಿಳಿಸಿದರು.</p>.<p>ತಾಲ್ಲೂಕಿನ ವಿವಿಧ ರೈತರ ಆಲೂಗೆಡ್ಡೆ ತಾಕುಗಳಿಗೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಂಗಾಂಶ ಬಾಳೆ ತಾಕಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿ ಆಲೂಗಡ್ಡೆ ಬೆಳೆಯ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 650 ರಿಂದ 700 ಹೆಕ್ಟೇರ್ ಜಮೀನಿನಲ್ಲಿ ಆಲೂಗೆಡ್ಡೆ ಬೆಳೆ ಬಿತ್ತನೆ ನಡೆದಿದ್ದು, ಈವರೆಗೂ ಅಂಗಮಾರಿ ರೋಗ ಕಂಡು ಬಂದಿಲ್ಲ ಎಂದರು.</p>.<p>ಹಿರಿಯ ಸಹಾಯಕ ನಿರ್ದೆಶಕ ಡಿ.ರಾಜೇಶ್, ದೊಡ್ಡಮಗ್ಗೆ ಸಹಾಯಕ ತೋಟಗಾರಿಕೆ ಅಧಿಕಾರಿ ಪಲ್ಲವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>