ಶೈಕ್ಷಣಿಕ ವರ್ಷ ಆರಂಭದಿಂದಲೂ ಶ್ರಮ ಹಾಕಲಾಗಿದೆ. ಶಾಲೆಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗಮನಿಸುತ್ತಿದ್ದೇವೆ. ಪ್ರತಿ ಮಗುವಿನ ಶೈಕ್ಷಣಿಕ ಸಾಧನೆಗೆ ಹೆಜ್ಜೆ ಇಟ್ಟಿದ್ದೇವೆ
ಕೆ.ಪಿ.ನಾರಾಯಣ್ ಕ್ಷೇತ್ರ ಶಿಕ್ಷಣಾಧಿಕಾರಿ
ಮನೆಗಳಿಗೆ ಶಿಕ್ಷಕರು ಭೇಟಿ ನೀಡಿದ್ದರಿಂದ ಸಾಧಿಸುವ ಛಲ ಬಂದಿದೆ. ಕಲಿಕೆಯ ಆಸಕ್ತಿ ಹೆಚ್ಚಾಗಿದೆ. ಶಿಕ್ಷಕ ವೃಂದದ ಕಾಳಜಿಯಿಂದ ಮನಸ್ಸಿಗೆ ಹಿತ ದೊರಕಿದೆ
ಹೇಮಾವತಿ ವಿದ್ಯಾರ್ಥಿನಿ
ಬಹುತೇಕ ಮಕ್ಕಳು ಶಿಕ್ಷಕರನ್ನು ಗೌರವಿಸುತ್ತಾರೆ. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡುವುದರಿಂದ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ದೊರಕಿದಂತಾಗಿದೆ
ಸವಿತಾ ಪೋಷಕಿ
ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳ ಮನೆಗೆ ಶಿಕ್ಷಕರೊಂದಿಗೆ ಭೇಟಿ ನೀಡುತ್ತಿದ್ದು ಮಕ್ಕಳು ಮನೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಒತ್ತಡಕ್ಕಾಗಿ ಪುಸ್ತಕ ಹಿಡಿಯದೇ ಅರ್ಥ ಮಾಡಿಕೊಂಡು ಓದಿದರೆ ಅನುಕೂಲ
ಮುಳ್ಳಯ್ಯ ಕೆಪಿಎಸ್ ಶಾಲೆ ಉಪ ಪ್ರಾಂಶುಪಾಲ
ನಿತ್ಯ ಸಂಜೆ ಗುಂಪು ಅಧ್ಯಯನ
ಪ್ರತಿ ದಿನ ಸಂಜೆ ಶಾಲೆಯ ಅಂಗಳದಲ್ಲಿ ಮಕ್ಕಳನ್ನು ಕೂರಿಸಿ ಗುಂಪು ಅಧ್ಯಯನ ನಡೆಸಲಾಗುತ್ತಿದೆ. 10 ವಿದ್ಯಾರ್ಥಿಗಳ ಒಂದೊಂದು ಗುಂಪನ್ನು ವೃತ್ತಾಕಾರದಲ್ಲಿ ಕೂರಿಸಿ ಓದಿಸುವ ಪ್ರಕ್ರಿಯೆ ಪ್ರತಿ ದಿನ ಸಂಜೆ ನಡೆಯುತ್ತಿದೆ. ‘ಮಕ್ಕಳು ಮನಸ್ಸು ಬೇರೆಡೆಗೆ ಹರಿಯದಂತೆ ಶಿಕ್ಷಕರು ನೋಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಕಠಿಣ ವಿಷಯಗಳನ್ನು ಶಿಕ್ಷಕರಿಂದ ಪರಿಹರಿಸಿಕೊಳ್ಳುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಲಿಕೆಯಲ್ಲಿ ಹಿಂದುಳಿದ ಬುದ್ಧಿವಂತ ಹಾಗೂ ಮಧ್ಯಮ ಕಲಿಕಾ ಸಾಮರ್ಥ್ಯದ ಮಕ್ಕಳನ್ನು ಶಾಲೆಗಳಲ್ಲಿ ವಿಂಗಡಣೆ ಮಾಡಿಕೊಂಡಿದ್ದಾರೆ. ಪಾಸಿಂಗ್ ಪ್ಯಾಕೇಜ್ ಮೂಲಕ ಹಿಂದುಳಿದ ಮಕ್ಕಳಿಗೆ ಕಲಿಸಲಾಗುತ್ತಿದೆ. ಬುದ್ಧಿವಂತ ಮಕ್ಕಳಿಗೆ ಪಠ್ಯಪುಸ್ತಕ ಓದಿಸಲಾಗುತ್ತಿದೆ. ಮಧ್ಯಮ ವರ್ಗದ ಮಕ್ಕಳನ್ನು ಪ್ರೋತ್ಸಾಹಿಸಿ ಪಠ್ಯಪುಸ್ತಕ ಕಲಿಕೆ ಮಟ್ಟಕ್ಕೆ ಬೆಳೆಸಲಾಗುತ್ತಿದೆ’ ಎನ್ನುತ್ತಾರೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್.