<p><strong>ಹಾಸನ</strong>: ‘ಸಕಲೇಶಪುರ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದಲ್ಲಿ ಪ್ರಯಾಣಕ್ಕೆ 3 ಗಂಟೆ ಕಾಲ ಬೇಕಾಗುತ್ತಿದೆ. ಈ ಅವಧಿಯನ್ನು ಕಡಿಮೆ ಮಾಡಲು ಹೊಸ ರೈಲು ಮಾರ್ಗಕ್ಕೆ ಸಮೀಕ್ಷೆ ನಡೆಸುವಂತೆ ಅನುಭವಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರ ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.</p><p>ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮಂಗಳೂರಿನಲ್ಲಿ ಮಾತ್ರ ದೊಡ್ಡ ಬಂದರು ಇದೆ. ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗದ ಉನ್ನತೀಕರಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಾಗುವುದು’ ಎಂದರು.</p><p>‘ಮಂಗಳೂರು -ಬೆಂಗಳೂರು ಮಧ್ಯೆ ಹೊಸ ರೈಲು ಸಂಚಾರಕ್ಕೆ ಒಪ್ಪಿಗೆ ಸಿಕ್ಕಿದ್ದು, ಶೀಘ್ರ ಸಂಚಾರ ಆರಂಭವಾಗಲಿದೆ’ ಎಂದರು.</p><p>‘ರೈಲ್ವೆ ಯೋಜನೆಗಳಿಗಾಗಿ ಜಿಲ್ಲೆಗೆ ₹11 ಸಾವಿರ ಕೋಟಿ ವ್ಯಯ ಮಾಡಬೇಕಾಗಿದ್ದು, ಅದರಲ್ಲಿ ರಾಜ್ಯ ಸರ್ಕಾರ ₹5,500 ಕೋಟಿ ಪಾಲು ಕೊಡಬೇಕು. ಆದರೆ ಇದುವರೆಗೂ ₹500 ಕೋಟಿ ಸಹ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ, ಪೂರ್ಣ ಪ್ರಮಾಣದ ಹಣವನ್ನು ಕೇಂದ್ರದಿಂದಲೇ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p><p>‘2025-26 ರೊಳಗೆ ರಾಜ್ಯದ 58 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ, ತ್ರೀಸ್ಟಾರ್ ಮಾದರಿ ಸೇವೆ ನೀಡಲಾಗುವುದು. ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಗೃಹ, ಕ್ಯಾಂಟೀನ್ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು’ ಎಂದರು.</p><p><strong>‘3 ತಿಂಗಳಿಗೊಮ್ಮೆ ಶಾಸಕರೊಂದಿಗೆ ಸಭೆ’</strong></p><p>ಚಿಕ್ಕಮಗಳೂರು: ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನೊಳಗೊಂಡ ಸಲಹಾ ಸಮಿತಿ ರಚನೆ ಮಾಡಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ಎಲ್ಲಾ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ (ಡಿಆರ್ಎಂ) ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.</p><p>ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಕರೆದು ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲ ಆಗುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಸಕಲೇಶಪುರ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದಲ್ಲಿ ಪ್ರಯಾಣಕ್ಕೆ 3 ಗಂಟೆ ಕಾಲ ಬೇಕಾಗುತ್ತಿದೆ. ಈ ಅವಧಿಯನ್ನು ಕಡಿಮೆ ಮಾಡಲು ಹೊಸ ರೈಲು ಮಾರ್ಗಕ್ಕೆ ಸಮೀಕ್ಷೆ ನಡೆಸುವಂತೆ ಅನುಭವಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರ ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.</p><p>ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮಂಗಳೂರಿನಲ್ಲಿ ಮಾತ್ರ ದೊಡ್ಡ ಬಂದರು ಇದೆ. ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗದ ಉನ್ನತೀಕರಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಾಗುವುದು’ ಎಂದರು.</p><p>‘ಮಂಗಳೂರು -ಬೆಂಗಳೂರು ಮಧ್ಯೆ ಹೊಸ ರೈಲು ಸಂಚಾರಕ್ಕೆ ಒಪ್ಪಿಗೆ ಸಿಕ್ಕಿದ್ದು, ಶೀಘ್ರ ಸಂಚಾರ ಆರಂಭವಾಗಲಿದೆ’ ಎಂದರು.</p><p>‘ರೈಲ್ವೆ ಯೋಜನೆಗಳಿಗಾಗಿ ಜಿಲ್ಲೆಗೆ ₹11 ಸಾವಿರ ಕೋಟಿ ವ್ಯಯ ಮಾಡಬೇಕಾಗಿದ್ದು, ಅದರಲ್ಲಿ ರಾಜ್ಯ ಸರ್ಕಾರ ₹5,500 ಕೋಟಿ ಪಾಲು ಕೊಡಬೇಕು. ಆದರೆ ಇದುವರೆಗೂ ₹500 ಕೋಟಿ ಸಹ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ, ಪೂರ್ಣ ಪ್ರಮಾಣದ ಹಣವನ್ನು ಕೇಂದ್ರದಿಂದಲೇ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p><p>‘2025-26 ರೊಳಗೆ ರಾಜ್ಯದ 58 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ, ತ್ರೀಸ್ಟಾರ್ ಮಾದರಿ ಸೇವೆ ನೀಡಲಾಗುವುದು. ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಗೃಹ, ಕ್ಯಾಂಟೀನ್ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು’ ಎಂದರು.</p><p><strong>‘3 ತಿಂಗಳಿಗೊಮ್ಮೆ ಶಾಸಕರೊಂದಿಗೆ ಸಭೆ’</strong></p><p>ಚಿಕ್ಕಮಗಳೂರು: ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನೊಳಗೊಂಡ ಸಲಹಾ ಸಮಿತಿ ರಚನೆ ಮಾಡಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ಎಲ್ಲಾ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ (ಡಿಆರ್ಎಂ) ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.</p><p>ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಕರೆದು ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲ ಆಗುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>