<p><strong>ಹಾಸನ</strong>: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಮಂಗಳವಾರ ಮೊದಲ ಬಜೆಟ್ ಮಂಡನೆ ಆಗಲಿದೆ. ಈ ಬಾರಿ ಕೇಂದ್ರದಲ್ಲಿ ಜಿಲ್ಲೆಯ ಎಚ್.ಡಿ.ಕುಮಾರಸ್ವಾಮಿ ಸಚಿವರಾಗಿದ್ದು, ಈ ಬಾರಿಯಾದರೂ, ಜಿಲ್ಲೆಗೆ ಒಂದಿಷ್ಟು ಯೋಜನೆಗಳು ಬರಲಿವೆ ಎನ್ನುವ ನಿರೀಕ್ಷೆಗಳು ಜನರಲ್ಲಿ ಗರಿಗೆದರಿವೆ.</p>.<p>ಹಲವು ವರ್ಷಗಳಿಂದ ಜಿಲ್ಲೆಯ ಹಲವು ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಅವುಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಹೊಸ ಯೋಜನೆಗಳು ಜಿಲ್ಲೆಗೆ ಸಿಗಬಹುದು ಎನ್ನುವ ನಿರೀಕ್ಷೆ ಜನರಲ್ಲಿದೆ.</p>.<p>ಬಡವರ ಊಟಿ ಎಂದೇ ಪ್ರಸಿದ್ಧಿಯಾಗಿರುವ ಜಿಲ್ಲೆಯು ಮಲೆನಾಡು ಅರೆ ಮಲೆನಾಡು ಬಯಲು ಸೀಮೆ ಭೌಗೋಳಿಕ ಲಕ್ಷಣ ಹೊಂದಿದೆ. ಪ್ರವಾಸೋದ್ಯಮ, ಕೈಗಾರಿಕೆ, ಕೃಷಿ ಸೇರಿದಂತೆ ನಾನಾ ವಲಯಗಳಿಗೆ ಪೂರಕ ವಾತಾವರಣ ಇದೆ.</p>.<p>ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕುಂಟುತ್ತ ಸಾಗಿರುವ ಬೂವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಈ ಬಾರಿಯ ಬಜೆಟ್ನಲ್ಲಿ ಕ್ರಮ ಕೈಗೊಳ್ಳಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.</p>.<p>ಹಾಸನದ ರೈಲ್ವೆ ಮೇಲ್ಸೇತುವೆ ಒಂದು ಬದಿಯ ರಸ್ತೆ ಕಾಮಗಾರಿ ಮುಗಿದಿದ್ದು, ಮತ್ತೊಂದು ಬದಿ ಕಾಮಗಾರಿಗೆ ₹ 48 ಕೋಟಿ ಅನುದಾನ ಒದಗಿಸುವುದು, ಹಾಸನ -ಚಿಕ್ಕಮಗಳೂರು ರೈಲ್ವೆ ಮಾರ್ಗ, ಹೊಸ ರೈಲು ಮಾರ್ಗ, ಹೆಚ್ಚುವರಿ ರೈಲುಗಳ ಓಡಾಟಕ್ಕೆ ಅನುಮತಿ ಸಿಗಬಹುದು ಎಂದು ಜನರು ನಿರೀಕ್ಷಿಸುತ್ತಿದ್ದಾರೆ.</p>.<p>ಶಿಲ್ಪಕಲೆಗಳ ತವರೂರು ಬೇಲೂರು, ಹಳೇಬೀಡು, ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು, ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪ್ರವಾಸೋದ್ಯಮ ಉತ್ತೇಜನದೊಂದಿಗೆ ಅಗತ್ಯ ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತರಬಹುದು ಎಂಬ ಆಶಯವನ್ನು ಇಲ್ಲಿನ ಜನರು ವ್ಯಕ್ತಪಡಿಸಿದ್ದಾರೆ.</p>.<p>ದಶಕಗಳ ಬೇಡಿಕೆಯಾದ ಐಐಟಿ ಸ್ಥಾಪನೆ ಆಗಬೇಕಿದೆ. ಈಗಾಗಲೇ ಜಮೀನು ಗುರುತಿಸಿದ್ದು, ಕೇಂದ್ರದ ಅನುಮತಿಗೆ ಕಾಯಲಾಗುತ್ತಿದೆ. ಬಿಜೆಪಿ– ಜೆಡಿಎಸ್ ಮೈತ್ರಿಯಾಗಿದ್ದು, ಎಚ್.ಡಿ. ಕುಮಾರಸ್ವಾಮಿ ತಮ್ಮ ತವರೂರಾದ ಹಾಸನ ಜಿಲ್ಲೆಗೆ ಐಐಟಿ, ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬಹುದು ಎಂದು ಜನರು ಆಶಿಸುತ್ತಿದ್ದಾರೆ.</p>.<p>ಹಾಸನ -ಬಿಳಿಕೆರೆ ನೂತನ ರಾಷ್ಟ್ರೀಯ ಹೆದ್ದಾರಿಗೆ ಪೂರಕ ಅನುದಾನ, ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ ಏರಿಸುವ ಅಥವಾ ಸುರಂಗ ಮಾರ್ಗ ಯೋಜನೆಗಳ ಕುರಿತು ಬಜೆಟ್ನಲ್ಲಿ ಪ್ರಸ್ತಾಪ ಆಗಬಹುದು ಎಂಬ ನಿರೀಕ್ಷೆ ಇದೆ.</p>.<p>ಜಿಲ್ಲೆಯ ಕಾಫಿ ಬೆಳೆಗಾರರ ಹಲವು ವರ್ಷಗಳ ಬೇಡಿಕೆಯಾದ ವಿಶೇಷ ಪ್ಯಾಕೇಜ್ ಘೋಷಣೆ, ಸಾಲದ ಮೇಲಿನ ಬಡ್ಡಿಮನ್ನಾ ಬಗ್ಗೆ ಬಹುತೇಕ ಕಾಫಿ ಬೆಳೆಗಾರರಲ್ಲಿ ನಿರೀಕ್ಷೆಯಿದ್ದು, ಈ ಬಾರಿಯ ಬಜೆಟ್ನಲ್ಲಿ ಅದು ಈಡೇರುವ ಸಾಧ್ಯತೆಗಳಿವೆ. ಈ ಸಂಬಂಧ ಹಲವು ವರ್ಷಗಳಿಂದ ಕಾಫಿ ಬೆಳೆಗಾರರ ಸಂಘವು, ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗೆ ಮನವಿ ನೀಡುತ್ತಲೇ ಬಂದಿದ್ದಾರೆ.</p>.<p>ವಿಶೇಷ ಪ್ಯಾಕೇಜ್ ಸಾಲದ ಮೇಲಿನ ಬಡ್ಡಿಮನ್ನಾ ಭೂಕುಸಿತ ನೆರೆ ಸೇರಿದಂತೆ ಪರಿಹಾರವನ್ನು ಹೆಕ್ಟೇರ್ಗೆ ₹50ಸಾವಿರಕ್ಕೆ ಏರಿಸಬೇಕು. ಸಕಲೇಶಪುರದಲ್ಲಿ ಕಾಫಿ ಮ್ಯೂಸಿಯಂ ತೆರೆಯಬೇಕು </p><p><strong>–ಕೃಷ್ಣಪ್ಪ ಕಾಫಿ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ</strong></p>.<p>ಮಯೂರ ಹೊಟೇಲ್ ಅಭಿವೃದ್ಧಿ ಆಗಬೇಕು. ಹೆಚ್ಚುವರಿ ಕೊಠಡಿ ನಿರ್ಮಾಣ ಆಗಬೇಕು. ಶೌಚಾಲಯ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕೆಲಸ ಆಗಬೇಕಾಗಿದೆ </p><p><strong>–ಎಚ್.ಎಂ. ಬಸವರಾಜು ಇತಿಹಾಸ ಪ್ರಾಧ್ಯಾಪಕ ಹಳೇಬೀಡು</strong></p>.<p> ಬೇಲೂರು ಯುನೆಸ್ಕೋ ಪಟ್ಟಿಗೆ ಸೇರಿದ್ದು ಅನುಮಭವಿಗಳಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸುವ ಅಗತ್ಯವಿದೆ </p><p><strong>–ಡಾ.ಶ್ರೀವತ್ಸ ಎಸ್.ವಟಿ ಸಂಶೋಧಕ ಬೇಲೂರು</strong></p>.<p>ಆನೆ ಕಾರಿಡಾರ್ಗೆ ಚಾಲನೆ ನೀಡಿ ಮಲೆನಾಡಿನ ಜನರ ಸಮಸ್ಯೆಯಾದ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿದ್ದು ಈ ನಿಟ್ಟಿನಲ್ಲಿಯೂ ಈ ಬಜೆಟ್ನಲ್ಲಿ ಉತ್ತಮ ಸ್ಪಂದನೆ ದೊರೆಯಬಹುದು ಎನ್ನುವ ಕಾತುರ ರೈತಾಪಿ ಜನರದ್ದು. ಸಕಲೇಶಪುರ ಆಲೂರು ಬೇಲೂರು ರೈತರು ಹಾಗೂ ಕಾಫಿ ಬೆಳೆಗಾರರ ಬಹು ವರ್ಷಗಳ ಬೇಡಿಕೆಯಾದ ಆನೆ ಕಾರಿಡಾರ್ ನಿರ್ಮಾಣಕ್ಕೆ ಈ ಬಾರಿಯ ಬಜೆಟ್ನಲ್ಲಿ ಅಲ್ಪಸ್ವಲ್ಪ ಅನುದಾನವನ್ನಾದರೂ ಬಿಡುಗಡೆ ಮಾಡಿ ಯೋಜನೆಗೆ ಚಾಲನೆ ನೀಡುವುದು ಅವಶ್ಯಕವಾಗಿದೆ ಎಂದು ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ಕುಮಾರ್ ಹೇಳಿದ್ದಾರೆ. ಪ್ರತಿ ಬಾರಿಯ ಬಜೆಟ್ನಲ್ಲಿ ಈ ಬೇಡಿಕೆ ಹುಸಿಯಾಗುತ್ತಿದ್ದು ಕಾಡಾನೆ ಉಪಟಳದಿಂದ ಬೆಳೆ ಹಾನಿ ಜೊತೆಗೆ ಪ್ರಾಣ ಹಾನಿಯೂ ಹೆಚ್ಚುತ್ತಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಮಂಗಳವಾರ ಮೊದಲ ಬಜೆಟ್ ಮಂಡನೆ ಆಗಲಿದೆ. ಈ ಬಾರಿ ಕೇಂದ್ರದಲ್ಲಿ ಜಿಲ್ಲೆಯ ಎಚ್.ಡಿ.ಕುಮಾರಸ್ವಾಮಿ ಸಚಿವರಾಗಿದ್ದು, ಈ ಬಾರಿಯಾದರೂ, ಜಿಲ್ಲೆಗೆ ಒಂದಿಷ್ಟು ಯೋಜನೆಗಳು ಬರಲಿವೆ ಎನ್ನುವ ನಿರೀಕ್ಷೆಗಳು ಜನರಲ್ಲಿ ಗರಿಗೆದರಿವೆ.</p>.<p>ಹಲವು ವರ್ಷಗಳಿಂದ ಜಿಲ್ಲೆಯ ಹಲವು ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಅವುಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಹೊಸ ಯೋಜನೆಗಳು ಜಿಲ್ಲೆಗೆ ಸಿಗಬಹುದು ಎನ್ನುವ ನಿರೀಕ್ಷೆ ಜನರಲ್ಲಿದೆ.</p>.<p>ಬಡವರ ಊಟಿ ಎಂದೇ ಪ್ರಸಿದ್ಧಿಯಾಗಿರುವ ಜಿಲ್ಲೆಯು ಮಲೆನಾಡು ಅರೆ ಮಲೆನಾಡು ಬಯಲು ಸೀಮೆ ಭೌಗೋಳಿಕ ಲಕ್ಷಣ ಹೊಂದಿದೆ. ಪ್ರವಾಸೋದ್ಯಮ, ಕೈಗಾರಿಕೆ, ಕೃಷಿ ಸೇರಿದಂತೆ ನಾನಾ ವಲಯಗಳಿಗೆ ಪೂರಕ ವಾತಾವರಣ ಇದೆ.</p>.<p>ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕುಂಟುತ್ತ ಸಾಗಿರುವ ಬೂವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಈ ಬಾರಿಯ ಬಜೆಟ್ನಲ್ಲಿ ಕ್ರಮ ಕೈಗೊಳ್ಳಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.</p>.<p>ಹಾಸನದ ರೈಲ್ವೆ ಮೇಲ್ಸೇತುವೆ ಒಂದು ಬದಿಯ ರಸ್ತೆ ಕಾಮಗಾರಿ ಮುಗಿದಿದ್ದು, ಮತ್ತೊಂದು ಬದಿ ಕಾಮಗಾರಿಗೆ ₹ 48 ಕೋಟಿ ಅನುದಾನ ಒದಗಿಸುವುದು, ಹಾಸನ -ಚಿಕ್ಕಮಗಳೂರು ರೈಲ್ವೆ ಮಾರ್ಗ, ಹೊಸ ರೈಲು ಮಾರ್ಗ, ಹೆಚ್ಚುವರಿ ರೈಲುಗಳ ಓಡಾಟಕ್ಕೆ ಅನುಮತಿ ಸಿಗಬಹುದು ಎಂದು ಜನರು ನಿರೀಕ್ಷಿಸುತ್ತಿದ್ದಾರೆ.</p>.<p>ಶಿಲ್ಪಕಲೆಗಳ ತವರೂರು ಬೇಲೂರು, ಹಳೇಬೀಡು, ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು, ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪ್ರವಾಸೋದ್ಯಮ ಉತ್ತೇಜನದೊಂದಿಗೆ ಅಗತ್ಯ ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತರಬಹುದು ಎಂಬ ಆಶಯವನ್ನು ಇಲ್ಲಿನ ಜನರು ವ್ಯಕ್ತಪಡಿಸಿದ್ದಾರೆ.</p>.<p>ದಶಕಗಳ ಬೇಡಿಕೆಯಾದ ಐಐಟಿ ಸ್ಥಾಪನೆ ಆಗಬೇಕಿದೆ. ಈಗಾಗಲೇ ಜಮೀನು ಗುರುತಿಸಿದ್ದು, ಕೇಂದ್ರದ ಅನುಮತಿಗೆ ಕಾಯಲಾಗುತ್ತಿದೆ. ಬಿಜೆಪಿ– ಜೆಡಿಎಸ್ ಮೈತ್ರಿಯಾಗಿದ್ದು, ಎಚ್.ಡಿ. ಕುಮಾರಸ್ವಾಮಿ ತಮ್ಮ ತವರೂರಾದ ಹಾಸನ ಜಿಲ್ಲೆಗೆ ಐಐಟಿ, ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬಹುದು ಎಂದು ಜನರು ಆಶಿಸುತ್ತಿದ್ದಾರೆ.</p>.<p>ಹಾಸನ -ಬಿಳಿಕೆರೆ ನೂತನ ರಾಷ್ಟ್ರೀಯ ಹೆದ್ದಾರಿಗೆ ಪೂರಕ ಅನುದಾನ, ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ ಏರಿಸುವ ಅಥವಾ ಸುರಂಗ ಮಾರ್ಗ ಯೋಜನೆಗಳ ಕುರಿತು ಬಜೆಟ್ನಲ್ಲಿ ಪ್ರಸ್ತಾಪ ಆಗಬಹುದು ಎಂಬ ನಿರೀಕ್ಷೆ ಇದೆ.</p>.<p>ಜಿಲ್ಲೆಯ ಕಾಫಿ ಬೆಳೆಗಾರರ ಹಲವು ವರ್ಷಗಳ ಬೇಡಿಕೆಯಾದ ವಿಶೇಷ ಪ್ಯಾಕೇಜ್ ಘೋಷಣೆ, ಸಾಲದ ಮೇಲಿನ ಬಡ್ಡಿಮನ್ನಾ ಬಗ್ಗೆ ಬಹುತೇಕ ಕಾಫಿ ಬೆಳೆಗಾರರಲ್ಲಿ ನಿರೀಕ್ಷೆಯಿದ್ದು, ಈ ಬಾರಿಯ ಬಜೆಟ್ನಲ್ಲಿ ಅದು ಈಡೇರುವ ಸಾಧ್ಯತೆಗಳಿವೆ. ಈ ಸಂಬಂಧ ಹಲವು ವರ್ಷಗಳಿಂದ ಕಾಫಿ ಬೆಳೆಗಾರರ ಸಂಘವು, ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗೆ ಮನವಿ ನೀಡುತ್ತಲೇ ಬಂದಿದ್ದಾರೆ.</p>.<p>ವಿಶೇಷ ಪ್ಯಾಕೇಜ್ ಸಾಲದ ಮೇಲಿನ ಬಡ್ಡಿಮನ್ನಾ ಭೂಕುಸಿತ ನೆರೆ ಸೇರಿದಂತೆ ಪರಿಹಾರವನ್ನು ಹೆಕ್ಟೇರ್ಗೆ ₹50ಸಾವಿರಕ್ಕೆ ಏರಿಸಬೇಕು. ಸಕಲೇಶಪುರದಲ್ಲಿ ಕಾಫಿ ಮ್ಯೂಸಿಯಂ ತೆರೆಯಬೇಕು </p><p><strong>–ಕೃಷ್ಣಪ್ಪ ಕಾಫಿ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ</strong></p>.<p>ಮಯೂರ ಹೊಟೇಲ್ ಅಭಿವೃದ್ಧಿ ಆಗಬೇಕು. ಹೆಚ್ಚುವರಿ ಕೊಠಡಿ ನಿರ್ಮಾಣ ಆಗಬೇಕು. ಶೌಚಾಲಯ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕೆಲಸ ಆಗಬೇಕಾಗಿದೆ </p><p><strong>–ಎಚ್.ಎಂ. ಬಸವರಾಜು ಇತಿಹಾಸ ಪ್ರಾಧ್ಯಾಪಕ ಹಳೇಬೀಡು</strong></p>.<p> ಬೇಲೂರು ಯುನೆಸ್ಕೋ ಪಟ್ಟಿಗೆ ಸೇರಿದ್ದು ಅನುಮಭವಿಗಳಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸುವ ಅಗತ್ಯವಿದೆ </p><p><strong>–ಡಾ.ಶ್ರೀವತ್ಸ ಎಸ್.ವಟಿ ಸಂಶೋಧಕ ಬೇಲೂರು</strong></p>.<p>ಆನೆ ಕಾರಿಡಾರ್ಗೆ ಚಾಲನೆ ನೀಡಿ ಮಲೆನಾಡಿನ ಜನರ ಸಮಸ್ಯೆಯಾದ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿದ್ದು ಈ ನಿಟ್ಟಿನಲ್ಲಿಯೂ ಈ ಬಜೆಟ್ನಲ್ಲಿ ಉತ್ತಮ ಸ್ಪಂದನೆ ದೊರೆಯಬಹುದು ಎನ್ನುವ ಕಾತುರ ರೈತಾಪಿ ಜನರದ್ದು. ಸಕಲೇಶಪುರ ಆಲೂರು ಬೇಲೂರು ರೈತರು ಹಾಗೂ ಕಾಫಿ ಬೆಳೆಗಾರರ ಬಹು ವರ್ಷಗಳ ಬೇಡಿಕೆಯಾದ ಆನೆ ಕಾರಿಡಾರ್ ನಿರ್ಮಾಣಕ್ಕೆ ಈ ಬಾರಿಯ ಬಜೆಟ್ನಲ್ಲಿ ಅಲ್ಪಸ್ವಲ್ಪ ಅನುದಾನವನ್ನಾದರೂ ಬಿಡುಗಡೆ ಮಾಡಿ ಯೋಜನೆಗೆ ಚಾಲನೆ ನೀಡುವುದು ಅವಶ್ಯಕವಾಗಿದೆ ಎಂದು ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ಕುಮಾರ್ ಹೇಳಿದ್ದಾರೆ. ಪ್ರತಿ ಬಾರಿಯ ಬಜೆಟ್ನಲ್ಲಿ ಈ ಬೇಡಿಕೆ ಹುಸಿಯಾಗುತ್ತಿದ್ದು ಕಾಡಾನೆ ಉಪಟಳದಿಂದ ಬೆಳೆ ಹಾನಿ ಜೊತೆಗೆ ಪ್ರಾಣ ಹಾನಿಯೂ ಹೆಚ್ಚುತ್ತಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>