ಮಡಬಲು ಗ್ರಾಮ ಪಂಚಾಯಿತಿ ಸದಸ್ಯ ಪ್ರೇಮ್ ರಾಜ್ ಮಾತನಾಡಿ, ‘ಗ್ರಾಮದ ಬಳಿ ಆಳವಾಗಿ ಕಾಲುವೆ ತೋಡಲಾಗಿದೆ. ಕಳೆದ ವರ್ಷ ನಿರ್ಮಿಸಿದ್ದ ರಸ್ತೆ ಹಾಳಾಗಿದ್ದು, ವಾಹನಗಳು ಸಂಚರಿಸಲು ಆಗುತ್ತಿಲ್ಲ. ಅಧಿಕಾರಿಗಳು ಕೂಡಲೇ ಬೆಳೆ ನಷ್ಟದ ಪ್ರಮಾಣವನ್ನು ಪರಿಶೀಲಿಸಿ ಪರಿಹಾರ ನೀಡಬೇಕು. ಇಲ್ಲದಿದ್ದರೆ ಎತ್ತಿನಹೊಳೆ ಕಚೇರಿ ಮುಂದೆ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ತಿಳಿಸಿದರು.