‘ತೀವ್ರ ಜ್ವರದಿಂದ ಬಳಲುತ್ತಿದ್ದ ದೀಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ ಆಕೆ ಅಸುನೀಗಿದ್ದಾಳೆ’ ಎಂದು ಪೋಷಕರು ತಿಳಿಸಿದ್ದಾರೆ.
’ಜೂನ್ 24ರಂದು ಹಾವೇರಿಯ ಖಾಸಗಿ ಆಸ್ಪತ್ರೆಯಲ್ಲಿ ದೀಕ್ಷಾಳನ್ನು ದಾಖಲಿಸಲಾಗಿತ್ತು. ಅಲ್ಲಿಯ ವೈದ್ಯರು, ಡೆಂಗಿ ಶಂಕೆ ವ್ಯಕ್ತಪಡಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದಾಗಿ ಹೇಳಿದ್ದರು. ನಂತರವೇ ದೀಕ್ಷಾಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಅವರು ಹೇಳಿದ್ದಾರೆ.
ಡೆಂಗಿ ಸಾವಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ.