<p><strong>ಸವಣೂರು:</strong> ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ ಲೋಕಾರ್ಪಣೆ ಹಾಗೂ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ತಾಲ್ಲೂಕಿನಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ಪೂಜಾ ವಿಧಿ ವಿಧಾನಕ್ಕೆ ತಯಾರಿ ಭರದಿಂದ ಸಾಗಿವೆ.</p>.<p>ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿ ಪ್ರವೀಣ ಹೊಳಲಪ್ಪ ಗುಡಗೇರಿ ರಟ್ಟನ್ನು ಬಳಸಿ ಕೇವಲ 20ದಿನಗಳ ಅವಧಿಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಕೃತಿಯನ್ನು ನಿರ್ಮಾಣ ಮಾಡುವ ಮೂಲಕ ಗಮನ ಸೆಳೆದಿದ್ದಾನೆ</p>.<p>ಗ್ರಾಮದ ಗ್ರಾಮದೇವಿ ಹೊನ್ನಮ್ಮದೇವಿ, ಆಂಜನೇಯ ಸೇರಿದಂತೆ ವಿವಿಧ ದೇವರಿಗೆ ಸೋಮವಾರ ಪ್ರಾತಃಕಾಲ ಅಭಿಷೇಕ, ವಿಶೇಷ ಅಲಂಕಾರದೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ತಾಲ್ಲೂಕಿನ ಕಾರಡಗಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ , ಸಂಗೀತ ಸೇವೆ, ದೀಪೋತ್ಸವ, ಅನ್ನ ಸಂತರ್ಪಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು:</strong> ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ ಲೋಕಾರ್ಪಣೆ ಹಾಗೂ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ತಾಲ್ಲೂಕಿನಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ಪೂಜಾ ವಿಧಿ ವಿಧಾನಕ್ಕೆ ತಯಾರಿ ಭರದಿಂದ ಸಾಗಿವೆ.</p>.<p>ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿ ಪ್ರವೀಣ ಹೊಳಲಪ್ಪ ಗುಡಗೇರಿ ರಟ್ಟನ್ನು ಬಳಸಿ ಕೇವಲ 20ದಿನಗಳ ಅವಧಿಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಕೃತಿಯನ್ನು ನಿರ್ಮಾಣ ಮಾಡುವ ಮೂಲಕ ಗಮನ ಸೆಳೆದಿದ್ದಾನೆ</p>.<p>ಗ್ರಾಮದ ಗ್ರಾಮದೇವಿ ಹೊನ್ನಮ್ಮದೇವಿ, ಆಂಜನೇಯ ಸೇರಿದಂತೆ ವಿವಿಧ ದೇವರಿಗೆ ಸೋಮವಾರ ಪ್ರಾತಃಕಾಲ ಅಭಿಷೇಕ, ವಿಶೇಷ ಅಲಂಕಾರದೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ತಾಲ್ಲೂಕಿನ ಕಾರಡಗಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ , ಸಂಗೀತ ಸೇವೆ, ದೀಪೋತ್ಸವ, ಅನ್ನ ಸಂತರ್ಪಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>