ಹಾನಗಲ್: ನಿರ್ವಹಣೆ ಕೊರತೆಯಿಂದಾಗಿ ತಾಲ್ಲೂಕಿನ ಬಸಾಪೂರ ಏತ ನೀರಾವರಿ ಯೋಜನೆ ಸ್ಥಗಿತಗೊಂಡಿದ್ದು, ನೀರು ಬರುವುದಾಗಿ ಕಾದು ಕುಳಿತಿದ್ದ ರೈತರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ರೈತರ ಸಮಸ್ಯೆಗೆ ಸ್ಪಂದಿಸಿರುವ ಶಾಸಕ ಶ್ರೀನಿವಾಸ ಮಾನೆ, ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ನೀರು ಹರಿಸಲು ಅಧಿಕಾರಿಗಳಿಗೆ ಜುಲೈ 15ರವರೆಗೆ ಗಡುವು ನೀಡಿದ್ದಾರೆ.