<p><strong>ಹಾನಗಲ್/ರಟ್ಟೀಹಳ್ಳಿ:</strong> ಭೂ ದಾಖಲೆಗಳ ಇಲಾಖೆಯ ಹಾನಗಲ್ ಸಹಾಯಕ ನಿರ್ದೇಶಕ ಎಸ್. ಚಂದ್ರಶೇಖರ್ (53) ಹಾಗೂ ರಟ್ಟೀಹಳ್ಳಿ–ಹಿರೇಕೆರೂರು ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಯಾಗಿದ್ದ ರೇವಣಸಿದ್ದಪ್ಪ ಮಾಳಿಗೇರ (58) ಅವರು ಅನುಮಾನಾಸ್ಪದ ರೀತಿ ಮೃತಪಟ್ಟಿದ್ದು, ಹಾನಗಲ್ ಹಾಗೂ ಹಿರೇಕೆರೂರು ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>ಮನೆಯಲ್ಲಿ ಮೃತದೇಹ: ‘ತುಮಕೂರು ಜಿಲ್ಲೆಯ ಚಂದ್ರಶೇಖರ ಹಾನಗಲ್ ಕಚೇರಿಯಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಹಾನಗಲ್ನಲ್ಲಿ ಒಂಟಿಯಾಗಿದ್ದರು. ಕುಟುಂಬದ ಸದಸ್ಯರು ತುಮಕೂರಿನಲ್ಲಿದ್ದಾರೆ’ ಎಂದು ಹಾನಗಲ್ ಪೊಲೀಸರು ಹೇಳಿದರು.</p>.<p>‘ಕಚೇರಿಗೂ ಬಾರದ ಮತ್ತು ದೂರವಾಣಿ ಕರೆಯು ಸ್ವೀಕರಿಸದ ಕಾರಣ ಕಚೇರಿಯ ಸಿಬ್ಬಂದಿಯು ಮನೆಗೆ ಹೋಗಿ ಪರಿಶೀಲಿಸಿದಾಗ, ಅವರು ಶವವಾಗಿ ಪತ್ತೆಯಾಗಿರುವುದು ಗೊತ್ತಾಯಿತು. ಮರಣೋತ್ತರ ಪರೀಕ್ಷೆಯ ನಂತರ ಅವರ ಸಾವಿನ ಕಾರಣ ತಿಳಿದುಬರಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸೇತುವೆ ಬಳಿ ಶಿಕ್ಷಣಾಧಿಕಾರಿ ಮೃತದೇಹ: ರೇವಣಸಿದ್ದಪ್ಪ ಅವರ ಮೃತದೇಹ ಖಂಡೇಬಾಗೂರು ಸೇತುವೆ ಬಳಿ ಬುಧವಾರ (ಜುಲೈ 24) ಪತ್ತೆಯಾಗಿದೆ.</p>.<p>‘ಎರಡೂ ತಾಲ್ಲೂಕುಗಳ ಶಾಲೆಯಲ್ಲಿರುವ ದೈಹಿಕ ಶಿಕ್ಷಣದ ಶಿಕ್ಷಕರ ಮೇಲ್ವಿಚಾರಣೆ ಹಾಗೂ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದ ರೇವಣಸಿದ್ದಪ್ಪ ಅವರು ಜುಲೈ 22ರಂದು ಕಾಣೆಯಾಗಿದ್ದರು. ಈ ಬಗ್ಗೆ ಸಂಬಂಧಿಕರು ದೂರು ನೀಡಿದ್ದರು. ಅವರಿಗಾಗಿ ಹುಡುಕಾಟ ನಡೆಸುತ್ತಿರುವಾಗಲೇ, ಮೃತದೇಹ ಪತ್ತೆಯಾಗಿದೆ’ ಎಂದು ಹಿರೇಕೆರೂರು ಠಾಣೆ ಪೊಲೀಸರು ಹೇಳಿದರು.</p>.<p>‘ರೇವಣಸಿದ್ದಪ್ಪ ಅವರು ಹೆಚ್ಚಾಗಿ ಬಸ್ನಲ್ಲಿ ಓಡಾಡುತ್ತಿದ್ದರು. ಅವರು ಹಲವು ವರ್ಷಗಳಿಂದ ರಟ್ಟೀಹಳ್ಳಿ ಹಾಗೂ ಹಿರೇಕೆರೂರು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಕಂ ಪರಿವೀಕ್ಷಣಾಧಿಕಾರಿ ಆಗಿದ್ದರು. ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳಿವೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್/ರಟ್ಟೀಹಳ್ಳಿ:</strong> ಭೂ ದಾಖಲೆಗಳ ಇಲಾಖೆಯ ಹಾನಗಲ್ ಸಹಾಯಕ ನಿರ್ದೇಶಕ ಎಸ್. ಚಂದ್ರಶೇಖರ್ (53) ಹಾಗೂ ರಟ್ಟೀಹಳ್ಳಿ–ಹಿರೇಕೆರೂರು ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಯಾಗಿದ್ದ ರೇವಣಸಿದ್ದಪ್ಪ ಮಾಳಿಗೇರ (58) ಅವರು ಅನುಮಾನಾಸ್ಪದ ರೀತಿ ಮೃತಪಟ್ಟಿದ್ದು, ಹಾನಗಲ್ ಹಾಗೂ ಹಿರೇಕೆರೂರು ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>ಮನೆಯಲ್ಲಿ ಮೃತದೇಹ: ‘ತುಮಕೂರು ಜಿಲ್ಲೆಯ ಚಂದ್ರಶೇಖರ ಹಾನಗಲ್ ಕಚೇರಿಯಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಹಾನಗಲ್ನಲ್ಲಿ ಒಂಟಿಯಾಗಿದ್ದರು. ಕುಟುಂಬದ ಸದಸ್ಯರು ತುಮಕೂರಿನಲ್ಲಿದ್ದಾರೆ’ ಎಂದು ಹಾನಗಲ್ ಪೊಲೀಸರು ಹೇಳಿದರು.</p>.<p>‘ಕಚೇರಿಗೂ ಬಾರದ ಮತ್ತು ದೂರವಾಣಿ ಕರೆಯು ಸ್ವೀಕರಿಸದ ಕಾರಣ ಕಚೇರಿಯ ಸಿಬ್ಬಂದಿಯು ಮನೆಗೆ ಹೋಗಿ ಪರಿಶೀಲಿಸಿದಾಗ, ಅವರು ಶವವಾಗಿ ಪತ್ತೆಯಾಗಿರುವುದು ಗೊತ್ತಾಯಿತು. ಮರಣೋತ್ತರ ಪರೀಕ್ಷೆಯ ನಂತರ ಅವರ ಸಾವಿನ ಕಾರಣ ತಿಳಿದುಬರಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸೇತುವೆ ಬಳಿ ಶಿಕ್ಷಣಾಧಿಕಾರಿ ಮೃತದೇಹ: ರೇವಣಸಿದ್ದಪ್ಪ ಅವರ ಮೃತದೇಹ ಖಂಡೇಬಾಗೂರು ಸೇತುವೆ ಬಳಿ ಬುಧವಾರ (ಜುಲೈ 24) ಪತ್ತೆಯಾಗಿದೆ.</p>.<p>‘ಎರಡೂ ತಾಲ್ಲೂಕುಗಳ ಶಾಲೆಯಲ್ಲಿರುವ ದೈಹಿಕ ಶಿಕ್ಷಣದ ಶಿಕ್ಷಕರ ಮೇಲ್ವಿಚಾರಣೆ ಹಾಗೂ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದ ರೇವಣಸಿದ್ದಪ್ಪ ಅವರು ಜುಲೈ 22ರಂದು ಕಾಣೆಯಾಗಿದ್ದರು. ಈ ಬಗ್ಗೆ ಸಂಬಂಧಿಕರು ದೂರು ನೀಡಿದ್ದರು. ಅವರಿಗಾಗಿ ಹುಡುಕಾಟ ನಡೆಸುತ್ತಿರುವಾಗಲೇ, ಮೃತದೇಹ ಪತ್ತೆಯಾಗಿದೆ’ ಎಂದು ಹಿರೇಕೆರೂರು ಠಾಣೆ ಪೊಲೀಸರು ಹೇಳಿದರು.</p>.<p>‘ರೇವಣಸಿದ್ದಪ್ಪ ಅವರು ಹೆಚ್ಚಾಗಿ ಬಸ್ನಲ್ಲಿ ಓಡಾಡುತ್ತಿದ್ದರು. ಅವರು ಹಲವು ವರ್ಷಗಳಿಂದ ರಟ್ಟೀಹಳ್ಳಿ ಹಾಗೂ ಹಿರೇಕೆರೂರು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಕಂ ಪರಿವೀಕ್ಷಣಾಧಿಕಾರಿ ಆಗಿದ್ದರು. ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳಿವೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>