<p><strong>ಹಾವೇರಿ</strong>: ಟ್ರ್ಯಾಕ್ಟರ್ ನೋಂದಣಿ ಮಾಡಿಸಲು ಅಗತ್ಯವಿದ್ದ ಬೋನೊಫೈಡ್ ಪ್ರಮಾಣ ಪತ್ರ ನೀಡಲು ₹5 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಕರ್ಜಗಿ ಉಪ ತಹಶೀಲ್ದಾರ್ ಸೋಮಪ್ಪ ಶಿವಪ್ಪ ನಾಯ್ಕರ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ಹಾವೇರಿ ತಾಲ್ಲೂಕಿನ ಕರ್ಜಗಿಯಲ್ಲಿರುವ ನಾಡಕಚೇರಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಮುಸ್ತಾಕ ಅಹ್ಮದ್ ನೇತೃತ್ವದ ತಂಡ ಸೋಮಪ್ಪ ಅವರನ್ನು ಬಂಧಿಸಿದೆ.</p><p>‘ಕಳ್ಳಿಹಾಳದ ಪಂಚಯ್ಯ ಹಿರೇಮಠ ಎಂಬುವವರು ಕೃಷಿ ಕೆಲಸಕ್ಕೆಂದು ತಮ್ಮ ಸಹೋದರನ ಹೆಸರಿನಲ್ಲಿ ಟ್ರ್ಯಾಕ್ಟರ್ ಖರೀದಿಸಿದ್ದರು. ಅದರ ನೋಂದಣಿ ಮಾಡಿಸಲು ಬೋನೊಫೈಡ್ ಪ್ರಮಾಣ ಪತ್ರದ ಅಗತ್ಯವಿತ್ತು. ಅದನ್ನು ಮಾಡಿಕೊಡುವಂತೆ ಅರ್ಜಿ ನೀಡಿದ್ದರು’ ಎಂದು ಲೋಕಾಯುಕ್ತ ಪೊಲೀಸರು ಹೇಳಿದರು.</p><p>‘ಅರ್ಜಿ ವಿಲೇವಾರಿ ಮಾಡಿ ಬೋನೊಫೈಡ್ ಪ್ರಮಾಣ ಪತ್ರ ನೀಡಲು ಸೋಮಪ್ಪ, ₹5 ಸಾವಿರ ಲಂಚ ಕೇಳಿದ್ದರು. ಮುಂಗವಾಡಿ ₹500 ಪಡೆದುಕೊಂಡಿದ್ದರು. ಈ ಬಗ್ಗೆ ಪಂಚಯ್ಯ ಅವರು ಮಾಹಿತಿ ನೀಡಿದ್ದರು. ಬುಧವಾರ ಪುನಃ ₹2 ಸಾವಿರ ಪಡೆಯುವ ಸಂದರ್ಭದಲ್ಲಿ ಸೋಮಪ್ಪ ಅವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p><p>ಸೋಮಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು, ಕಚೇರಿ ಹಾಗೂ ಮನೆಯಲ್ಲಿ ಶೋಧ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಟ್ರ್ಯಾಕ್ಟರ್ ನೋಂದಣಿ ಮಾಡಿಸಲು ಅಗತ್ಯವಿದ್ದ ಬೋನೊಫೈಡ್ ಪ್ರಮಾಣ ಪತ್ರ ನೀಡಲು ₹5 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಕರ್ಜಗಿ ಉಪ ತಹಶೀಲ್ದಾರ್ ಸೋಮಪ್ಪ ಶಿವಪ್ಪ ನಾಯ್ಕರ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ಹಾವೇರಿ ತಾಲ್ಲೂಕಿನ ಕರ್ಜಗಿಯಲ್ಲಿರುವ ನಾಡಕಚೇರಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಮುಸ್ತಾಕ ಅಹ್ಮದ್ ನೇತೃತ್ವದ ತಂಡ ಸೋಮಪ್ಪ ಅವರನ್ನು ಬಂಧಿಸಿದೆ.</p><p>‘ಕಳ್ಳಿಹಾಳದ ಪಂಚಯ್ಯ ಹಿರೇಮಠ ಎಂಬುವವರು ಕೃಷಿ ಕೆಲಸಕ್ಕೆಂದು ತಮ್ಮ ಸಹೋದರನ ಹೆಸರಿನಲ್ಲಿ ಟ್ರ್ಯಾಕ್ಟರ್ ಖರೀದಿಸಿದ್ದರು. ಅದರ ನೋಂದಣಿ ಮಾಡಿಸಲು ಬೋನೊಫೈಡ್ ಪ್ರಮಾಣ ಪತ್ರದ ಅಗತ್ಯವಿತ್ತು. ಅದನ್ನು ಮಾಡಿಕೊಡುವಂತೆ ಅರ್ಜಿ ನೀಡಿದ್ದರು’ ಎಂದು ಲೋಕಾಯುಕ್ತ ಪೊಲೀಸರು ಹೇಳಿದರು.</p><p>‘ಅರ್ಜಿ ವಿಲೇವಾರಿ ಮಾಡಿ ಬೋನೊಫೈಡ್ ಪ್ರಮಾಣ ಪತ್ರ ನೀಡಲು ಸೋಮಪ್ಪ, ₹5 ಸಾವಿರ ಲಂಚ ಕೇಳಿದ್ದರು. ಮುಂಗವಾಡಿ ₹500 ಪಡೆದುಕೊಂಡಿದ್ದರು. ಈ ಬಗ್ಗೆ ಪಂಚಯ್ಯ ಅವರು ಮಾಹಿತಿ ನೀಡಿದ್ದರು. ಬುಧವಾರ ಪುನಃ ₹2 ಸಾವಿರ ಪಡೆಯುವ ಸಂದರ್ಭದಲ್ಲಿ ಸೋಮಪ್ಪ ಅವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p><p>ಸೋಮಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು, ಕಚೇರಿ ಹಾಗೂ ಮನೆಯಲ್ಲಿ ಶೋಧ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>