<p>ಬ್ಯಾಡಗಿ: ‘ವಿಜ್ಞಾನ ಹಲವಾರು ಅವಕಾಶಗಳನ್ನು ನೀಡಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲೇ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.</p>.<p>ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನ ಶಕ್ತಿಯನ್ನು ಅನಾವರಣಗೊಳಿಸಿದೆ’ ಎಂದರು.</p>.<p>ಪ್ರಧಾನ ಮಂತ್ರಿ ಪೋಷಣಾ ಅಭಿಯಾನದ ಜಿಲ್ಲಾ ಅಧಿಕಾರಿ ಝಡ್.ಎಂ. ಖಾಜಿ ಮಾತನಾಡಿ, <br />‘ವಿಜ್ಞಾನದಿಂದಾಗಿ ಜಗತ್ತೇ ಅಂಗೈಯಲ್ಲಿದೆ. ಮಕ್ಕಳಿಗೆ ವಿಜ್ಞಾನದ ಆಸಕ್ತಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದರು.</p>.<p>ವಿಶ್ವನಾಥ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಸಿ.ಎನ್. ಕರಿಯಪ್ಪನವರ, ವಿಷಯ ಪರಿವೀಕ್ಷಕ ಸುರೇಶ ಮೂಡಲದವರ, ವಿ.ಎಸ್. ಪಾಟೀಲ, ಹನುಮಂತಗೌಡ ನರೇಗೌಡ್ರ, ಭರಮಪ್ಪ ಕುರುವತ್ತಿ, ವಿದ್ಯಾ ಕುರಹಟ್ಟಿ, ವಿ.ಡಿ.ಅಕ್ಕೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ‘ವಿಜ್ಞಾನ ಹಲವಾರು ಅವಕಾಶಗಳನ್ನು ನೀಡಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲೇ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.</p>.<p>ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನ ಶಕ್ತಿಯನ್ನು ಅನಾವರಣಗೊಳಿಸಿದೆ’ ಎಂದರು.</p>.<p>ಪ್ರಧಾನ ಮಂತ್ರಿ ಪೋಷಣಾ ಅಭಿಯಾನದ ಜಿಲ್ಲಾ ಅಧಿಕಾರಿ ಝಡ್.ಎಂ. ಖಾಜಿ ಮಾತನಾಡಿ, <br />‘ವಿಜ್ಞಾನದಿಂದಾಗಿ ಜಗತ್ತೇ ಅಂಗೈಯಲ್ಲಿದೆ. ಮಕ್ಕಳಿಗೆ ವಿಜ್ಞಾನದ ಆಸಕ್ತಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದರು.</p>.<p>ವಿಶ್ವನಾಥ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಸಿ.ಎನ್. ಕರಿಯಪ್ಪನವರ, ವಿಷಯ ಪರಿವೀಕ್ಷಕ ಸುರೇಶ ಮೂಡಲದವರ, ವಿ.ಎಸ್. ಪಾಟೀಲ, ಹನುಮಂತಗೌಡ ನರೇಗೌಡ್ರ, ಭರಮಪ್ಪ ಕುರುವತ್ತಿ, ವಿದ್ಯಾ ಕುರಹಟ್ಟಿ, ವಿ.ಡಿ.ಅಕ್ಕೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>