<p><strong>ರಾಣೆಬೆನ್ನೂರು (ಹಾವೇರಿ ಜಿಲ್ಲೆ):</strong> ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸರ್ವೀಸ್ ರಸ್ತೆಗೆ ಬಿದ್ದ ಪರಿಣಾಮ ನಾಲ್ವರು ಸಾವಿಗೀಡಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ 12.30ರಲ್ಲಿ ನಡೆದಿದೆ. </p><p>ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.</p><p>ಹಾವೇರಿಯ ಅಶ್ವಿನಿ ನಗರದ ಸುರೇಶ್ (45), ಐಶ್ವರ್ಯ( 22 ) ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p><p>ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಬಾರ್ಕಿ, ಪ್ರಭುರಾಜ್ ಸಮಗಂಡಿ, ಗೀತಾ ಭಾರ್ಕಿ, ಹೊನ್ನಪ್ಪ ಬಾರ್ಕಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ರಾಣೆಬೆನ್ನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ನಂತರ ಹೆಚ್ಚುವರಿ ಚಿಕಿತ್ಸೆಗೆ ನಾಲ್ವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. </p><p>ಹಾವೇರಿ ಎಸ್ಪಿ ಅoಶುಕುಮಾರ್ ಹಾಗೂ ಡಿವೈಎಸ್ಪಿ ಗಿರೀಶ್ ಭೋಜಣ್ಣನವರ ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದರು. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು (ಹಾವೇರಿ ಜಿಲ್ಲೆ):</strong> ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸರ್ವೀಸ್ ರಸ್ತೆಗೆ ಬಿದ್ದ ಪರಿಣಾಮ ನಾಲ್ವರು ಸಾವಿಗೀಡಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ 12.30ರಲ್ಲಿ ನಡೆದಿದೆ. </p><p>ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.</p><p>ಹಾವೇರಿಯ ಅಶ್ವಿನಿ ನಗರದ ಸುರೇಶ್ (45), ಐಶ್ವರ್ಯ( 22 ) ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p><p>ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಬಾರ್ಕಿ, ಪ್ರಭುರಾಜ್ ಸಮಗಂಡಿ, ಗೀತಾ ಭಾರ್ಕಿ, ಹೊನ್ನಪ್ಪ ಬಾರ್ಕಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ರಾಣೆಬೆನ್ನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ನಂತರ ಹೆಚ್ಚುವರಿ ಚಿಕಿತ್ಸೆಗೆ ನಾಲ್ವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. </p><p>ಹಾವೇರಿ ಎಸ್ಪಿ ಅoಶುಕುಮಾರ್ ಹಾಗೂ ಡಿವೈಎಸ್ಪಿ ಗಿರೀಶ್ ಭೋಜಣ್ಣನವರ ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದರು. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>