<p><strong>ರಟ್ಟೀಹಳ್ಳಿ</strong>: ತಾಲ್ಲೂಕಿನ ಕಡೂರು ಕುಡುಪಲಿ ಗ್ರಾಮಗಳ ಮಾರ್ಗ ಮಧ್ಯೆ ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಗುರುವಾರ ಮಧ್ಯ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಚಿರತೆ ಓಡಾಟದ ದೃಶ್ಯ ತೋಟದ ಮನೆಯಲ್ಲಿ ಅಳವಡಿಸಿದ್ದ ಸಿ.ಸಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಗುರುವಾರ ತೋಟದ ಮನೆಯಲ್ಲಿ ರೈತ ಶಂಕರಗೌಡ ಶಿರಗಂಬಿ ಮಲಗಿರುವ ಸಂದರ್ಭದಲ್ಲಿ 12.30 ಗಂಟೆಯ ಸುಮಾರಿಗೆ ನಾಯಿಗಳು ವಿಪರೀತವಾಗಿ ಬೊಗಳಾರಂಭಿಸಿವೆ. ಸಂಶಯಗೊಂಡ ಶಂಕರಗೌಡ ಅವರು ಎದ್ದು ಸಿ.ಸಿ. ಟಿವಿ ಕ್ಯಾಮೆರಾ ವೀಕ್ಷಿಸಿದಾಗ ಮನೆಯ ಬಳಿ ಚಿರತೆಯೊಂದು ಹೋಗುತ್ತಿರುವ ದೃಶ್ಯ ನೋಡಿದ್ದಾರೆ. ತೋಟದಲ್ಲಿ ಚಿರತೆಯ ಹೆಜ್ಜೆ ಗುರುತು ಸ್ಪಷ್ಟವಾಗಿ ಕಾಣುತ್ತಿದೆ. ಶುಕ್ರವಾರ ಬೆಳಿಗ್ಗೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಚಿರತೆ ಓಡಾಡಿರುವ ಖಚಿತ ಮಾಹಿತಿ ಮೇರೆಗೆ ಬೋನಿನ ವ್ಯವಸ್ಥೆ ಮಾಡಿದ್ದಾರೆ.</p>.<p>ಈ ಕುರಿತು ರಟ್ಟೀಹಳ್ಳಿ ಉಪವಲಯ ಅರಣ್ಯಾಧಿಕಾರಿ ಸಂತೋಷ ಅವಕ್ಕನವರ ಮಾತನಾಡಿ, ‘ಚಿರತೆ ಚಲನವಲನ ಸಿ.ಸಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಗಾಗಿ ಬೋನಿನ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ರೈತ ಶಂಕರಗೌಡ ಶಿರಗಂಬಿ ಮಾತನಾಡಿ, ‘ರಾತ್ರಿ ವೇಳೆ ವಿದ್ಯುತ್ ಪೂರೈಕೆ ಇರುವುದರಿಂದ ಹೊಲಗಳಿಗೆ ನೀರು ಹಾಯಿಸಲು ಅನಿವಾರ್ಯವಾಗಿ ರೈತರು ಜಮೀನುಗಳಿಗೆ ತೆರಳಬೇಕಾಗುತ್ತದೆ. ಚಿರತೆ ಪ್ರತ್ಯೇಕ್ಷವಾಗಿರುವುದರಿಂದ ರೈತರಲ್ಲಿ ಆತಂಕ ಮೂಡಿದೆ. ಕೂಡಲೇ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಮುಂದಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ತಾಲ್ಲೂಕಿನ ಕಡೂರು ಕುಡುಪಲಿ ಗ್ರಾಮಗಳ ಮಾರ್ಗ ಮಧ್ಯೆ ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಗುರುವಾರ ಮಧ್ಯ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಚಿರತೆ ಓಡಾಟದ ದೃಶ್ಯ ತೋಟದ ಮನೆಯಲ್ಲಿ ಅಳವಡಿಸಿದ್ದ ಸಿ.ಸಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಗುರುವಾರ ತೋಟದ ಮನೆಯಲ್ಲಿ ರೈತ ಶಂಕರಗೌಡ ಶಿರಗಂಬಿ ಮಲಗಿರುವ ಸಂದರ್ಭದಲ್ಲಿ 12.30 ಗಂಟೆಯ ಸುಮಾರಿಗೆ ನಾಯಿಗಳು ವಿಪರೀತವಾಗಿ ಬೊಗಳಾರಂಭಿಸಿವೆ. ಸಂಶಯಗೊಂಡ ಶಂಕರಗೌಡ ಅವರು ಎದ್ದು ಸಿ.ಸಿ. ಟಿವಿ ಕ್ಯಾಮೆರಾ ವೀಕ್ಷಿಸಿದಾಗ ಮನೆಯ ಬಳಿ ಚಿರತೆಯೊಂದು ಹೋಗುತ್ತಿರುವ ದೃಶ್ಯ ನೋಡಿದ್ದಾರೆ. ತೋಟದಲ್ಲಿ ಚಿರತೆಯ ಹೆಜ್ಜೆ ಗುರುತು ಸ್ಪಷ್ಟವಾಗಿ ಕಾಣುತ್ತಿದೆ. ಶುಕ್ರವಾರ ಬೆಳಿಗ್ಗೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಚಿರತೆ ಓಡಾಡಿರುವ ಖಚಿತ ಮಾಹಿತಿ ಮೇರೆಗೆ ಬೋನಿನ ವ್ಯವಸ್ಥೆ ಮಾಡಿದ್ದಾರೆ.</p>.<p>ಈ ಕುರಿತು ರಟ್ಟೀಹಳ್ಳಿ ಉಪವಲಯ ಅರಣ್ಯಾಧಿಕಾರಿ ಸಂತೋಷ ಅವಕ್ಕನವರ ಮಾತನಾಡಿ, ‘ಚಿರತೆ ಚಲನವಲನ ಸಿ.ಸಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಗಾಗಿ ಬೋನಿನ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ರೈತ ಶಂಕರಗೌಡ ಶಿರಗಂಬಿ ಮಾತನಾಡಿ, ‘ರಾತ್ರಿ ವೇಳೆ ವಿದ್ಯುತ್ ಪೂರೈಕೆ ಇರುವುದರಿಂದ ಹೊಲಗಳಿಗೆ ನೀರು ಹಾಯಿಸಲು ಅನಿವಾರ್ಯವಾಗಿ ರೈತರು ಜಮೀನುಗಳಿಗೆ ತೆರಳಬೇಕಾಗುತ್ತದೆ. ಚಿರತೆ ಪ್ರತ್ಯೇಕ್ಷವಾಗಿರುವುದರಿಂದ ರೈತರಲ್ಲಿ ಆತಂಕ ಮೂಡಿದೆ. ಕೂಡಲೇ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಮುಂದಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>