<p><strong>ಶಿಗ್ಗಾವಿ:</strong> ಮುಡಾ ಹಗರಣದ ಬಗ್ಗೆ ಸುಳ್ಳು ಆರೋಪ ಮಾಡಿ ಬಿಜೆಪಿ ಶಾಸಕರು ಮೈಸೂರಿನಿಂದ ಬೆಂಗಳೂರು ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ವಿರೋಧಿಸಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಬಿಜೆಪಿ ಶಾಸಕರ ವಿರೋಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ನಂತರ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು.</p>.<p>ಮಾಜಿ ಶಾಸಕ ಅಜ್ಮಂಪೀರ್ ಖಾದ್ರಿ ಮಾತನಾಡಿ, ‘ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದನ್ನು ಸಹಿಸದ ಬಿಜೆಪಿ ಮುಖಂಡರು ಇಲ್ಲ, ಸಲ್ಲದ ಆರೋಪ ಮಾಡುತ್ತಿದ್ದಾರೆ. ತಮ್ಮ ಆಡಳಿತದಲ್ಲಿನ ಹಗರಣಗಳನ್ನು ಮುಚ್ಚಿ ಹಾಕಲು ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p>ಮುಖಂಡರಾದ ಮಂಜುನಾಥ ತಿಮ್ಮಾಪುರ, ರವಿ ಕೋಣನವರ, ಶಂಭು ನೇತ್ರಿ, ಪ್ರದೀಪ ಗಿರಡ್ಡೆರ, ಬೀರೇಶ ಜಟ್ಟೆಪ್ಪನವರ, ಡಿ.ಯು.ಅಜ್ಜಣ್ಣನವರ, ಸುರೇಶ ಕೆಂಚಮ್ಮನವರ, ಮಲ್ಲಿಕಾರ್ಜುನ ಇಳಿಗೇರ, ರುದ್ರೇಶ ಗುಡಿಗೇರಿ, ಇಸ್ಮಾಯಿಲಸಾಬ ಗೌಡಗೇರಿ, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ಮುಡಾ ಹಗರಣದ ಬಗ್ಗೆ ಸುಳ್ಳು ಆರೋಪ ಮಾಡಿ ಬಿಜೆಪಿ ಶಾಸಕರು ಮೈಸೂರಿನಿಂದ ಬೆಂಗಳೂರು ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ವಿರೋಧಿಸಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಬಿಜೆಪಿ ಶಾಸಕರ ವಿರೋಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ನಂತರ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು.</p>.<p>ಮಾಜಿ ಶಾಸಕ ಅಜ್ಮಂಪೀರ್ ಖಾದ್ರಿ ಮಾತನಾಡಿ, ‘ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದನ್ನು ಸಹಿಸದ ಬಿಜೆಪಿ ಮುಖಂಡರು ಇಲ್ಲ, ಸಲ್ಲದ ಆರೋಪ ಮಾಡುತ್ತಿದ್ದಾರೆ. ತಮ್ಮ ಆಡಳಿತದಲ್ಲಿನ ಹಗರಣಗಳನ್ನು ಮುಚ್ಚಿ ಹಾಕಲು ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p>ಮುಖಂಡರಾದ ಮಂಜುನಾಥ ತಿಮ್ಮಾಪುರ, ರವಿ ಕೋಣನವರ, ಶಂಭು ನೇತ್ರಿ, ಪ್ರದೀಪ ಗಿರಡ್ಡೆರ, ಬೀರೇಶ ಜಟ್ಟೆಪ್ಪನವರ, ಡಿ.ಯು.ಅಜ್ಜಣ್ಣನವರ, ಸುರೇಶ ಕೆಂಚಮ್ಮನವರ, ಮಲ್ಲಿಕಾರ್ಜುನ ಇಳಿಗೇರ, ರುದ್ರೇಶ ಗುಡಿಗೇರಿ, ಇಸ್ಮಾಯಿಲಸಾಬ ಗೌಡಗೇರಿ, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>