<p><strong>ತಿಳವಳ್ಳಿ</strong>: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಶನಿವಾರ 117ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಗ್ರಾಮದ ಶಾಂತೇಶ್ವರ ಪ್ರೌಢ ಶಾಲೆಯಲ್ಲಿ ಸಸಿ ನೆಡುವುದರ ಮೂಲಕ ಆಚರಿಸಲಾಯಿತು..</p>.<p>ತಿಳವಳ್ಳಿ ಶಾಖೆಯ ವ್ಯವಸ್ಥಾಪಕ ಯೋಗಿ.ಎಚ್.ವೈ ಮಾತನಾಡಿ, ಬ್ಯಾಂಕಿನ 117 ವರ್ಷಗಳ ಧ್ಯೇಯದಂತೆ ಶ್ರೇಷ್ಠತೆಗಾಗಿ ಶ್ರಮಿಸಿ ಮತ್ತು ಬಲವಾದ, ಹೆಚ್ಚು ಸಮೃದ್ಧ ಭವಿಷ್ಯವನ್ನು ಸಮಗ್ರವಾಗಿ ನಿರ್ಮಿಸುವುದಾಗಿದೆ. ಈ ಬ್ಯಾಂಕ್ ಆಫ್ ಬರೋಡಾವನ್ನು ಮಹಾರಾಜ ಸಯ್ಯಾಜಿರಾವ್ ಗಾಯಕವಾಡ್ ಅವರು ಸ್ಥಾಪಿಸಿದರು. 1908 ರಲ್ಲಿ ಬರೋಡಾದ ಮಾಂಡವಿಯಲ್ಲಿ ಸ್ಥಾಪಿಸಲಾದ ಮೊದಲ ಶಾಖೆಯಿಂದ, ಬ್ಯಾಂಕ್ ಆಫ್ ಬರೋಡಾ ಇಂದು ದೇಶದ ಎರಡನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿ ಮೂಡಿ ಬಂದಿದೆ ಎಂದರು.</p>.<p>‘ನಮ್ಮ ಬ್ಯಾಂಕ್ 17 ದೇಶಗಳಲ್ಲಿ ಶಾಖೆ ಹೊಂದಿದೆ. 150 ಮಿಲಿಯನ್ ಗಿಂತಲೂ ಅಧಿಕ ಗ್ರಾಹಕರನ್ನು ಹೊಂದಿದೆ’ ಎಂದರು. ತಿಳವಳ್ಳಿ ಶಾಖೆಯಿಂದ ವಿವಿಧ ಶಾಲೆಗಳಿಗೆ ಊಟದ ತಟ್ಟೆ ದೇಣಿಗೆ ನೀಡಲಾಯಿತು.</p>.<p>ಮುಖ್ಯ ಶಿಕ್ಷಕ ಸೋಮನಾಥ ಬಾಬರ, ಸಿಬ್ಬಂದಿ ಪ್ರಕಾಶ ದೇವರಗುಡ್ಡ, ದೀಪಾ.ಎಲ್, ದಿವ್ಯಾ ಹಾದಿಮನಿ, ಶಿಕ್ಷಕಿ ಭಾರತಿ ಗುಡ್ಡದಮತ್ತಿಹಳ್ಳಿ, ಮಹೇಶ ಗುರು, ವಿಶ್ವನಾಥ ಗೋಡಿ, ರವಿ ಲಮಾಣಿ, ಮಂಜುನಾಥ ಕಮಾಟಿ, ರೇಣುಕಾ ಪತ್ತೇಪುರ, ಮುಸ್ಕಾನ್ ಲಾಲಖಾನವರ, ಸುಭಾಸ ದೊಡ್ಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಳವಳ್ಳಿ</strong>: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಶನಿವಾರ 117ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಗ್ರಾಮದ ಶಾಂತೇಶ್ವರ ಪ್ರೌಢ ಶಾಲೆಯಲ್ಲಿ ಸಸಿ ನೆಡುವುದರ ಮೂಲಕ ಆಚರಿಸಲಾಯಿತು..</p>.<p>ತಿಳವಳ್ಳಿ ಶಾಖೆಯ ವ್ಯವಸ್ಥಾಪಕ ಯೋಗಿ.ಎಚ್.ವೈ ಮಾತನಾಡಿ, ಬ್ಯಾಂಕಿನ 117 ವರ್ಷಗಳ ಧ್ಯೇಯದಂತೆ ಶ್ರೇಷ್ಠತೆಗಾಗಿ ಶ್ರಮಿಸಿ ಮತ್ತು ಬಲವಾದ, ಹೆಚ್ಚು ಸಮೃದ್ಧ ಭವಿಷ್ಯವನ್ನು ಸಮಗ್ರವಾಗಿ ನಿರ್ಮಿಸುವುದಾಗಿದೆ. ಈ ಬ್ಯಾಂಕ್ ಆಫ್ ಬರೋಡಾವನ್ನು ಮಹಾರಾಜ ಸಯ್ಯಾಜಿರಾವ್ ಗಾಯಕವಾಡ್ ಅವರು ಸ್ಥಾಪಿಸಿದರು. 1908 ರಲ್ಲಿ ಬರೋಡಾದ ಮಾಂಡವಿಯಲ್ಲಿ ಸ್ಥಾಪಿಸಲಾದ ಮೊದಲ ಶಾಖೆಯಿಂದ, ಬ್ಯಾಂಕ್ ಆಫ್ ಬರೋಡಾ ಇಂದು ದೇಶದ ಎರಡನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿ ಮೂಡಿ ಬಂದಿದೆ ಎಂದರು.</p>.<p>‘ನಮ್ಮ ಬ್ಯಾಂಕ್ 17 ದೇಶಗಳಲ್ಲಿ ಶಾಖೆ ಹೊಂದಿದೆ. 150 ಮಿಲಿಯನ್ ಗಿಂತಲೂ ಅಧಿಕ ಗ್ರಾಹಕರನ್ನು ಹೊಂದಿದೆ’ ಎಂದರು. ತಿಳವಳ್ಳಿ ಶಾಖೆಯಿಂದ ವಿವಿಧ ಶಾಲೆಗಳಿಗೆ ಊಟದ ತಟ್ಟೆ ದೇಣಿಗೆ ನೀಡಲಾಯಿತು.</p>.<p>ಮುಖ್ಯ ಶಿಕ್ಷಕ ಸೋಮನಾಥ ಬಾಬರ, ಸಿಬ್ಬಂದಿ ಪ್ರಕಾಶ ದೇವರಗುಡ್ಡ, ದೀಪಾ.ಎಲ್, ದಿವ್ಯಾ ಹಾದಿಮನಿ, ಶಿಕ್ಷಕಿ ಭಾರತಿ ಗುಡ್ಡದಮತ್ತಿಹಳ್ಳಿ, ಮಹೇಶ ಗುರು, ವಿಶ್ವನಾಥ ಗೋಡಿ, ರವಿ ಲಮಾಣಿ, ಮಂಜುನಾಥ ಕಮಾಟಿ, ರೇಣುಕಾ ಪತ್ತೇಪುರ, ಮುಸ್ಕಾನ್ ಲಾಲಖಾನವರ, ಸುಭಾಸ ದೊಡ್ಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>