<p><strong>ಶಿಗ್ಗಾವಿ</strong>: ಕಳೆದ 15 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ನೀರಿನಿಂದಾಗಿ ತಾಲ್ಲೂಕಿನ ಬಾಡ ಮತ್ತು ಹುಣಸಿಕಟ್ಟಿ ಗ್ರಾಮಕ್ಕೆ ಹೋಗುವ ರಸ್ತೆ ಮಳೆ ನೀರಿನಿಂದ ಹದಗೆಟ್ಟು ಕೆಸರಾಗಿ ನಿತ್ಯ ಸಂಚರಿಸುವುದು ಕಷ್ಟಕರವಾಗಿದೆ.</p>.<p>ಹುಣಸಿಕಟ್ಟ ಗ್ರಾಮದಿಂದ ಬಾಡ ಗ್ರಾಮಕ್ಕೆ ಬರುವ ಪ್ರಮುಖ ರಸ್ತೆಯಾಗಿದ್ದು, ಮಳೆಗಾಲ ಬಂದರೆ ಸಾಕು ರಸ್ತೆಯಲ್ಲಿ ನೀರು ಹರಿದು ಇಡೀ ರಸ್ತೆಯಲ್ಲ ಕೆಸರುಮಯವಾಗಿ ಪಾದಚಾರಿಗಳು, ವಾಹನಗಳು ಓಡಾಡದಂತಾಗುತ್ತದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಂಚಾರಕ್ಕಾಗಿ ಪರದಾಡುತ್ತಿದ್ದಾರೆ. </p>.<p>ವಾಹನಗಳಿಲ್ಲದೆ ಸಂಚಾರ ಸ್ಥಗಿತವಾಗುತ್ತಿವೆ. ಹೀಗಾಗಿ ರೈತರು, ವ್ಯಾಪಾರಸ್ಥರು ಸಹ ಸಂಚರಿಸದಂತಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಈ ಕಡೆ ಗಮನ ಹರಿಸಿ ರಸ್ತೆ ಡಾಂಬರೀಕರಣ ಮಾಡಬೇಕು. ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದು ಗ್ರಾಮಸ್ಥರರಾದ ಜಗದೀಶ ಸಿದ್ದಣ್ಣವರ, ಮಾಲತೇಶ ಕಮ್ಮಾರ, ಅಶೋಕ ಸಿದ್ದಣ್ಣವರ, ಶೇಖಪ್ಪ ಹಾದಿಮನಿ, ರಮೇಶ ಕಲಿವಾಳ ಸೇರಿದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><strong>ಮರ ಬಿದ್ದು ರಸ್ತೆ ಸಂಚಾರಕ್ಕೆ ಕಿರಿಕಿರಿ:</strong></p>.<p>ತಾಲ್ಲೂಕಿನ ಮುನವಳ್ಳಿಯಿಂದ ಶಿಗ್ಗಾವಿಗೆ ಹೋಗುವ ರಸ್ತೆ ನಡುವೆ ದೊಡ್ಡಹಳ್ಳದ ಹತ್ತಿರದಲ್ಲಿ ಮರ ಬಿದ್ದು 3 ತಾಸು ರಸ್ತೆ ಸಂಚಾರ ಸ್ಥಗಿತವಾಗಿತ್ತು. ನಂತರ ಹೆಸ್ಕಾಂ ಮತ್ತು ಸಾರ್ವಜನಿಕರು, ರಸ್ತೆ ಪಕ್ಕದ ರೈತರು ಸೇರಿ ಮರವನ್ನು ತೆರವುಗೊಳಿಸುವಲ್ಲಿ ನೆರವಾದರು.</p>.<p>ನಂತರ ರಸ್ತೆ ಸಂಚಾರ ಸುಗಮಗೊಂಡಿತು. ಮುನವಳ್ಳಿಯಿಂದ ಶಿಗ್ಗಾವಿಗೆ ಹೋಗುವ ವಾಹನಗಳು, ಪಾದಚಾರಿಗಳು, ದ್ವಿಚಕ್ರ ವಾಹನಗಳು ಬಂಕಾಪುರ ಮಾರ್ಗವಾಗಿ ಮತ್ತು ದುರ್ಗಾದೇವಿ ದೇವಸ್ಥಾನದ ರಸ್ತೆ ಮಾರ್ಗವಾಗಿ ಸುತ್ತುವರೆದು ಹೋಗುವಂತೆ ಆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಕಳೆದ 15 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ನೀರಿನಿಂದಾಗಿ ತಾಲ್ಲೂಕಿನ ಬಾಡ ಮತ್ತು ಹುಣಸಿಕಟ್ಟಿ ಗ್ರಾಮಕ್ಕೆ ಹೋಗುವ ರಸ್ತೆ ಮಳೆ ನೀರಿನಿಂದ ಹದಗೆಟ್ಟು ಕೆಸರಾಗಿ ನಿತ್ಯ ಸಂಚರಿಸುವುದು ಕಷ್ಟಕರವಾಗಿದೆ.</p>.<p>ಹುಣಸಿಕಟ್ಟ ಗ್ರಾಮದಿಂದ ಬಾಡ ಗ್ರಾಮಕ್ಕೆ ಬರುವ ಪ್ರಮುಖ ರಸ್ತೆಯಾಗಿದ್ದು, ಮಳೆಗಾಲ ಬಂದರೆ ಸಾಕು ರಸ್ತೆಯಲ್ಲಿ ನೀರು ಹರಿದು ಇಡೀ ರಸ್ತೆಯಲ್ಲ ಕೆಸರುಮಯವಾಗಿ ಪಾದಚಾರಿಗಳು, ವಾಹನಗಳು ಓಡಾಡದಂತಾಗುತ್ತದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಂಚಾರಕ್ಕಾಗಿ ಪರದಾಡುತ್ತಿದ್ದಾರೆ. </p>.<p>ವಾಹನಗಳಿಲ್ಲದೆ ಸಂಚಾರ ಸ್ಥಗಿತವಾಗುತ್ತಿವೆ. ಹೀಗಾಗಿ ರೈತರು, ವ್ಯಾಪಾರಸ್ಥರು ಸಹ ಸಂಚರಿಸದಂತಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಈ ಕಡೆ ಗಮನ ಹರಿಸಿ ರಸ್ತೆ ಡಾಂಬರೀಕರಣ ಮಾಡಬೇಕು. ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದು ಗ್ರಾಮಸ್ಥರರಾದ ಜಗದೀಶ ಸಿದ್ದಣ್ಣವರ, ಮಾಲತೇಶ ಕಮ್ಮಾರ, ಅಶೋಕ ಸಿದ್ದಣ್ಣವರ, ಶೇಖಪ್ಪ ಹಾದಿಮನಿ, ರಮೇಶ ಕಲಿವಾಳ ಸೇರಿದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><strong>ಮರ ಬಿದ್ದು ರಸ್ತೆ ಸಂಚಾರಕ್ಕೆ ಕಿರಿಕಿರಿ:</strong></p>.<p>ತಾಲ್ಲೂಕಿನ ಮುನವಳ್ಳಿಯಿಂದ ಶಿಗ್ಗಾವಿಗೆ ಹೋಗುವ ರಸ್ತೆ ನಡುವೆ ದೊಡ್ಡಹಳ್ಳದ ಹತ್ತಿರದಲ್ಲಿ ಮರ ಬಿದ್ದು 3 ತಾಸು ರಸ್ತೆ ಸಂಚಾರ ಸ್ಥಗಿತವಾಗಿತ್ತು. ನಂತರ ಹೆಸ್ಕಾಂ ಮತ್ತು ಸಾರ್ವಜನಿಕರು, ರಸ್ತೆ ಪಕ್ಕದ ರೈತರು ಸೇರಿ ಮರವನ್ನು ತೆರವುಗೊಳಿಸುವಲ್ಲಿ ನೆರವಾದರು.</p>.<p>ನಂತರ ರಸ್ತೆ ಸಂಚಾರ ಸುಗಮಗೊಂಡಿತು. ಮುನವಳ್ಳಿಯಿಂದ ಶಿಗ್ಗಾವಿಗೆ ಹೋಗುವ ವಾಹನಗಳು, ಪಾದಚಾರಿಗಳು, ದ್ವಿಚಕ್ರ ವಾಹನಗಳು ಬಂಕಾಪುರ ಮಾರ್ಗವಾಗಿ ಮತ್ತು ದುರ್ಗಾದೇವಿ ದೇವಸ್ಥಾನದ ರಸ್ತೆ ಮಾರ್ಗವಾಗಿ ಸುತ್ತುವರೆದು ಹೋಗುವಂತೆ ಆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>