<p><strong>ಹಾವೇರಿ:</strong> ನಿರಂತರ ಮಳೆಯಿಂದಾಗಿ ಇಲ್ಲಿಯ ಸವಣೂರು ತಾಲ್ಲೂಕಿನ ಕಾರಡಗಿ ಬಳಿಯ ಮಾದಾಪುರದಲ್ಲಿ ಮನೆಯೊಂದು ಕುಸಿದು ತಾಯಿ ಹಾಗೂ ಅವರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಗ್ರಾಮದ ಚನ್ನಮ್ಮ ದೊಡ್ಡಬಸಪ್ಪ ಹರಕುಣಿ (35), ಅಮೂಲ್ಯ ಮುತ್ತಪ್ಪ ಹರಕುಣಿ (2) ಹಾಗೂ ಅನುಶ್ರೀ ಮುತ್ತಪ್ಪ ಹರಕುಣಿ (2) ಮೃತರು. ಯಲ್ಲಮ್ಮ ದೊಡ್ಡಬಸಪ್ಪ ಹರಕುಣಿ (70) ಅವರು ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತಪ್ಪ ಹರಕುಣಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p><p>ಜಿಲ್ಲೆಯಲ್ಲಿ ಗುರುವಾರದಿಂದ ಶುಕ್ರವಾರ ನಸುಕಿನವರೆಗೂ ನಿರಂತರವಾಗಿ ಮಳೆ ಆಗಿದೆ. ಚನ್ನಮ್ಮ ಹಾಗೂ ಕುಟುಂಬದವರು ಗುರುವಾರ ಮನೆಯಲ್ಲಿ ಮಲಗಿದ್ದರು. ಶುಕ್ರವಾರ ನಸುಕಿನಲ್ಲಿ ಮನೆ ಕುಸಿದು, ಅವರ ಮೈ ಮೇಲೆಯೇ ಅವಶೇಷಗಳು ಬಿದ್ದಿವೆ. ಇದರಿಂದ ತಾಯಿ-ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದರು.</p><p>ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ನಿರಂತರ ಮಳೆಯಿಂದಾಗಿ ಇಲ್ಲಿಯ ಸವಣೂರು ತಾಲ್ಲೂಕಿನ ಕಾರಡಗಿ ಬಳಿಯ ಮಾದಾಪುರದಲ್ಲಿ ಮನೆಯೊಂದು ಕುಸಿದು ತಾಯಿ ಹಾಗೂ ಅವರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಗ್ರಾಮದ ಚನ್ನಮ್ಮ ದೊಡ್ಡಬಸಪ್ಪ ಹರಕುಣಿ (35), ಅಮೂಲ್ಯ ಮುತ್ತಪ್ಪ ಹರಕುಣಿ (2) ಹಾಗೂ ಅನುಶ್ರೀ ಮುತ್ತಪ್ಪ ಹರಕುಣಿ (2) ಮೃತರು. ಯಲ್ಲಮ್ಮ ದೊಡ್ಡಬಸಪ್ಪ ಹರಕುಣಿ (70) ಅವರು ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತಪ್ಪ ಹರಕುಣಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p><p>ಜಿಲ್ಲೆಯಲ್ಲಿ ಗುರುವಾರದಿಂದ ಶುಕ್ರವಾರ ನಸುಕಿನವರೆಗೂ ನಿರಂತರವಾಗಿ ಮಳೆ ಆಗಿದೆ. ಚನ್ನಮ್ಮ ಹಾಗೂ ಕುಟುಂಬದವರು ಗುರುವಾರ ಮನೆಯಲ್ಲಿ ಮಲಗಿದ್ದರು. ಶುಕ್ರವಾರ ನಸುಕಿನಲ್ಲಿ ಮನೆ ಕುಸಿದು, ಅವರ ಮೈ ಮೇಲೆಯೇ ಅವಶೇಷಗಳು ಬಿದ್ದಿವೆ. ಇದರಿಂದ ತಾಯಿ-ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದರು.</p><p>ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>