<p><strong>ಶಿಗ್ಗಾವಿ :</strong> ‘ಮಾನವ ಕಳ್ಳಸಾಗಣಿಕೆ ಸಮಾಜಕ್ಕೆ ಮಾರಕವಾಗಿದ್ದು, ಈ ಕುರಿತು ಜಾಗೃತಿ ವಹಿಸುವುದು ಮುಖ್ಯವಾಗಿದೆ’ ಎಂದು ಶಿಗ್ಗಾವಿ ನ್ಯಾಯಾಲಯದ ನ್ಯಾಯಾಧೀಶೆ ಅಶ್ವಿನಿ ಚಂದ್ರಕಾಂತ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಬಂಕಾಪುರ ಪೊಲೀಸ್ ಠಾಣೆ, ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಮಂಗಳವಾರ ನಡೆದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜಕ್ಕೆ ಅಂಟಿರುವ ಇಂತಹ ಅನಿಷ್ಟತೆ ತಡೆಯಲು ಯುವಕ, ಯುವತಿಯರಲ್ಲಿ ಅರಿವು ಮೂಡಿಸುವುದು ಅವಶ್ಯವಾಗಿದೆ’ ಎಂದರು.</p>.<p>ವಕೀಲ ವಿ.ಸಿ.ಪಾಟೀಲ , ‘ಮಾನವ ಕಳ್ಳ ಸಾಗಾಣಿಕೆ ತಡೆಗೆ ಕೈಗೊಂಡ ಕ್ರಮಗಳು’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಬಂಕಾಪುರ ಪೊಲೀಸ್ ಠಾಣೆ ಪಿ.ಎಸ್.ಐ ನಿಂಗರಾಜ್ ಎಚ್., ‘ವಿದ್ಯಾರ್ಥಿಗಳು ಜಾಗೃತರಾಗುವ ಜತೆಗೆ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ಎನ್.ಎನ್.ಮಲ್ಲಾಡದ, ವಕೀಲ ಎಸ್.ಜಿ.ಅಂಕಲಕೊಟ್ಟಿ, ಹೆಡ್ ಕಾನ್ಸ್ಟೆಬಲ್ ಮಲ್ಲೇಶ್ ಜಾಲಗಾರ ಮಾತನಾಡಿದರು.</p>.<p>ಹಿರಿಯ ಉಪನ್ಯಾಸಕ ಎಸ್.ಬಿ.ಕುರಬರ ಪ್ರತಿಜ್ಞೆ ಬೋಧಿಸಿದರು. ಪ್ರಾಚಾರ್ಯ ಎಸ್.ಆರ್.ಕಾರಗಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಬಸವರಾಜ ರಾಗಿ, ಉಪನ್ಯಾಸಕರಾದ ಎಂ.ಎಸ್.ಕನ್ನಕನವರ್, ಜಗದೀಶ ಪುರದ, ಗಿರೀಶ್ ಕುರಂದವಾಡ, ಬಸವರಾಜ್ ಸಜ್ಜನ, ಅನಿಲ ತಳವಾರ ಸೇರಿದಂತೆ ಕಾಲೇಜಿನ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ :</strong> ‘ಮಾನವ ಕಳ್ಳಸಾಗಣಿಕೆ ಸಮಾಜಕ್ಕೆ ಮಾರಕವಾಗಿದ್ದು, ಈ ಕುರಿತು ಜಾಗೃತಿ ವಹಿಸುವುದು ಮುಖ್ಯವಾಗಿದೆ’ ಎಂದು ಶಿಗ್ಗಾವಿ ನ್ಯಾಯಾಲಯದ ನ್ಯಾಯಾಧೀಶೆ ಅಶ್ವಿನಿ ಚಂದ್ರಕಾಂತ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಬಂಕಾಪುರ ಪೊಲೀಸ್ ಠಾಣೆ, ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಮಂಗಳವಾರ ನಡೆದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜಕ್ಕೆ ಅಂಟಿರುವ ಇಂತಹ ಅನಿಷ್ಟತೆ ತಡೆಯಲು ಯುವಕ, ಯುವತಿಯರಲ್ಲಿ ಅರಿವು ಮೂಡಿಸುವುದು ಅವಶ್ಯವಾಗಿದೆ’ ಎಂದರು.</p>.<p>ವಕೀಲ ವಿ.ಸಿ.ಪಾಟೀಲ , ‘ಮಾನವ ಕಳ್ಳ ಸಾಗಾಣಿಕೆ ತಡೆಗೆ ಕೈಗೊಂಡ ಕ್ರಮಗಳು’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಬಂಕಾಪುರ ಪೊಲೀಸ್ ಠಾಣೆ ಪಿ.ಎಸ್.ಐ ನಿಂಗರಾಜ್ ಎಚ್., ‘ವಿದ್ಯಾರ್ಥಿಗಳು ಜಾಗೃತರಾಗುವ ಜತೆಗೆ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ಎನ್.ಎನ್.ಮಲ್ಲಾಡದ, ವಕೀಲ ಎಸ್.ಜಿ.ಅಂಕಲಕೊಟ್ಟಿ, ಹೆಡ್ ಕಾನ್ಸ್ಟೆಬಲ್ ಮಲ್ಲೇಶ್ ಜಾಲಗಾರ ಮಾತನಾಡಿದರು.</p>.<p>ಹಿರಿಯ ಉಪನ್ಯಾಸಕ ಎಸ್.ಬಿ.ಕುರಬರ ಪ್ರತಿಜ್ಞೆ ಬೋಧಿಸಿದರು. ಪ್ರಾಚಾರ್ಯ ಎಸ್.ಆರ್.ಕಾರಗಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಬಸವರಾಜ ರಾಗಿ, ಉಪನ್ಯಾಸಕರಾದ ಎಂ.ಎಸ್.ಕನ್ನಕನವರ್, ಜಗದೀಶ ಪುರದ, ಗಿರೀಶ್ ಕುರಂದವಾಡ, ಬಸವರಾಜ್ ಸಜ್ಜನ, ಅನಿಲ ತಳವಾರ ಸೇರಿದಂತೆ ಕಾಲೇಜಿನ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>