<p><strong>ಬ್ಯಾಡಗಿ:</strong> ಪಟ್ಟಣದಲ್ಲಿಯೂ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಆರಂಭಿಸುವ ಮೂಲಕ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.</p>.<p>ಪಟ್ಟಣದ ಪಂಚಾಯತ್ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಬಡವರ ಪರವಾಗಿರುವ ಕಾಂಗ್ರೆಸ್ ಸರ್ಕಾರ ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಅನುಷ್ಟಾನಗೊಳಿಸಲಿದೆ. ಗರೀಬಿ ಹಠಾವೋ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಉತ್ತಮ ಆಡಳಿತ ನೀಡಿದ್ದಾರೆ. ಅವರ ಮುಂದುವರೆದ ಭಾಗವೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಮುಖಂಡಂರಾದ ಬೀರಪ್ಪ ಬಣಕಾರ, ರಮೇಶ ಸುತ್ತಕೋಟಿ, ಶಿವಪುತ್ರಪ್ಪ ಅಗಡಿ, ಪುರಸಭೆ ಸದಸ್ಯರಾದ ಫಕ್ಕೀರಮ್ಮ ಛಲವಾದಿ, ರೇಷ್ಮಾಬಾನು ಶೇಖ್, ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಪಟ್ಟಣದಲ್ಲಿಯೂ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಆರಂಭಿಸುವ ಮೂಲಕ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.</p>.<p>ಪಟ್ಟಣದ ಪಂಚಾಯತ್ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಬಡವರ ಪರವಾಗಿರುವ ಕಾಂಗ್ರೆಸ್ ಸರ್ಕಾರ ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಅನುಷ್ಟಾನಗೊಳಿಸಲಿದೆ. ಗರೀಬಿ ಹಠಾವೋ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಉತ್ತಮ ಆಡಳಿತ ನೀಡಿದ್ದಾರೆ. ಅವರ ಮುಂದುವರೆದ ಭಾಗವೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಮುಖಂಡಂರಾದ ಬೀರಪ್ಪ ಬಣಕಾರ, ರಮೇಶ ಸುತ್ತಕೋಟಿ, ಶಿವಪುತ್ರಪ್ಪ ಅಗಡಿ, ಪುರಸಭೆ ಸದಸ್ಯರಾದ ಫಕ್ಕೀರಮ್ಮ ಛಲವಾದಿ, ರೇಷ್ಮಾಬಾನು ಶೇಖ್, ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>