<p><strong>ಅಕ್ಕಿಆಲೂರು:</strong> ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಮಳಗಿ ಧರ್ಮಾ ಜಲಾಶಯಕ್ಕೆ ಗುರುವಾರ ಶಾಸಕ ಶ್ರೀನಿವಾಸ ಮಾನೆ ಅವರು, ಅಪಾರ ಸಂಖ್ಯೆ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ವಿಶೇಷ ಗಂಗಾಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.</p>.<p>ಬೆಳಿಗ್ಗೆ ಮಂತಗಿ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ, ಕಲ್ಲಹಕ್ಕಲ ಮೂಲಕ 9 ಕಿ.ಮೀ ದೂರ ಕ್ರಮಿಸಿ ಮಳಗಿ ಜಲಾಶಯ ತಲುಪಿದರು. ಬಳಿಕ ಜಲಾಶಯದಲ್ಲಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ ಅವರ ಜೊತೆಗೂಡಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.<br><br> ನಂತರ ಮಾತನಾಡಿದ ಶ್ರೀನಿವಾಸ ಮಾನೆ, ‘ಕಳೆದ ಬಾರಿ ಅನಾವೃಷ್ಟಿಯಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮ ಮಳೆಯಿಂದಾಗಿ ಹಾನಗಲ್ ತಾಲ್ಲೂಕಿನ ಜೀವನಾಡಿ ಧರ್ಮಾ ಜಲಾಶಯ ಭರ್ತಿಯಾಗಿರುವುದರಿಂದ ಸಂಭ್ರಮ ಮೂಡಿದೆ. ಜಲಾಶಯ ಅಚ್ಚುಕಟ್ಟು ಪ್ರದೇಶದ 98 ಕೆರೆಗಳು ತುಂಬುತ್ತಿದ್ದು, 18 ಸಾವಿರ ಎಕರೆ ಪ್ರದೇಶಕ್ಕೆ ನೀರು ಹರಿಯುತ್ತಿದೆ. ಹಾನಗಲ್ ನಗರದ ಕುಡಿಯುವ ನೀರಿನ ಮೂಲವಾಗಿರುವ ಆನಿಕೆರೆಯೂ ಜಲಾಶಯದಿಂದ ನೀರಿನಿಂದ ಭರ್ತಿಯಾಗಿದೆ’ ಎಂದರು.</p>.<p>‘ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿರುವುದು ಸಮೃದ್ಧಿಯ ಸಂಕೇತ. ಜಲಾಶಯದ ನೀರು ಹಾನಗಲ್ ತಾಲ್ಲೂಕಿಗೆ ಹರಿದು ಬರುತ್ತಿದೆ. ನೀರು ಸದ್ಭಳಕೆ ಮಾಡಿಕೊಂಡು ಕೆರೆ-ಕಟ್ಟೆಗಳನ್ನೆಲ್ಲ ತುಂಬಿಸಲು ಗಮನ ನೀಡಲಾಗಿದೆ’ಎಂದು ತಿಳಿಸಿದರು</p>.<p>ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ‘ಧರ್ಮಾ ಜಲಾಶಯ ಮುಂಡಗೋಡ ತಾಲ್ಲೂಕಿನಲ್ಲಿದ್ದರೂ ಹಾನಗಲ್ ತಾಲ್ಲೂಕಿನ ರೈತರಿಗೆ ಹೆಚ್ಚು ಉಪಯುಕ್ತವಾಗಿದೆ. ಉತ್ತಮ ಮಳೆಯಾಗಿದೆ, ಉತ್ತಮ ಬೆಳೆಯೂ ರೈತರ ಕೈ ಸೇರಬೇಕಿದೆ’ ಎಂದು ತಿಳಿಸಿದರು.</p>.<p>ಕೆಪಿಸಿಸಿ ಸದಸ್ಯರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಕುಮಾರ ದೊಡ್ಡಮನಿ, ಮಂಜು ಗೊರಣ್ಣನವರ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವು ಭದ್ರಾವತಿ, ಶಿವು ತಳವಾರ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಕ್ಕಿಆಲೂರು:</strong> ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಮಳಗಿ ಧರ್ಮಾ ಜಲಾಶಯಕ್ಕೆ ಗುರುವಾರ ಶಾಸಕ ಶ್ರೀನಿವಾಸ ಮಾನೆ ಅವರು, ಅಪಾರ ಸಂಖ್ಯೆ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ವಿಶೇಷ ಗಂಗಾಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.</p>.<p>ಬೆಳಿಗ್ಗೆ ಮಂತಗಿ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ, ಕಲ್ಲಹಕ್ಕಲ ಮೂಲಕ 9 ಕಿ.ಮೀ ದೂರ ಕ್ರಮಿಸಿ ಮಳಗಿ ಜಲಾಶಯ ತಲುಪಿದರು. ಬಳಿಕ ಜಲಾಶಯದಲ್ಲಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ ಅವರ ಜೊತೆಗೂಡಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.<br><br> ನಂತರ ಮಾತನಾಡಿದ ಶ್ರೀನಿವಾಸ ಮಾನೆ, ‘ಕಳೆದ ಬಾರಿ ಅನಾವೃಷ್ಟಿಯಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮ ಮಳೆಯಿಂದಾಗಿ ಹಾನಗಲ್ ತಾಲ್ಲೂಕಿನ ಜೀವನಾಡಿ ಧರ್ಮಾ ಜಲಾಶಯ ಭರ್ತಿಯಾಗಿರುವುದರಿಂದ ಸಂಭ್ರಮ ಮೂಡಿದೆ. ಜಲಾಶಯ ಅಚ್ಚುಕಟ್ಟು ಪ್ರದೇಶದ 98 ಕೆರೆಗಳು ತುಂಬುತ್ತಿದ್ದು, 18 ಸಾವಿರ ಎಕರೆ ಪ್ರದೇಶಕ್ಕೆ ನೀರು ಹರಿಯುತ್ತಿದೆ. ಹಾನಗಲ್ ನಗರದ ಕುಡಿಯುವ ನೀರಿನ ಮೂಲವಾಗಿರುವ ಆನಿಕೆರೆಯೂ ಜಲಾಶಯದಿಂದ ನೀರಿನಿಂದ ಭರ್ತಿಯಾಗಿದೆ’ ಎಂದರು.</p>.<p>‘ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿರುವುದು ಸಮೃದ್ಧಿಯ ಸಂಕೇತ. ಜಲಾಶಯದ ನೀರು ಹಾನಗಲ್ ತಾಲ್ಲೂಕಿಗೆ ಹರಿದು ಬರುತ್ತಿದೆ. ನೀರು ಸದ್ಭಳಕೆ ಮಾಡಿಕೊಂಡು ಕೆರೆ-ಕಟ್ಟೆಗಳನ್ನೆಲ್ಲ ತುಂಬಿಸಲು ಗಮನ ನೀಡಲಾಗಿದೆ’ಎಂದು ತಿಳಿಸಿದರು</p>.<p>ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ‘ಧರ್ಮಾ ಜಲಾಶಯ ಮುಂಡಗೋಡ ತಾಲ್ಲೂಕಿನಲ್ಲಿದ್ದರೂ ಹಾನಗಲ್ ತಾಲ್ಲೂಕಿನ ರೈತರಿಗೆ ಹೆಚ್ಚು ಉಪಯುಕ್ತವಾಗಿದೆ. ಉತ್ತಮ ಮಳೆಯಾಗಿದೆ, ಉತ್ತಮ ಬೆಳೆಯೂ ರೈತರ ಕೈ ಸೇರಬೇಕಿದೆ’ ಎಂದು ತಿಳಿಸಿದರು.</p>.<p>ಕೆಪಿಸಿಸಿ ಸದಸ್ಯರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಕುಮಾರ ದೊಡ್ಡಮನಿ, ಮಂಜು ಗೊರಣ್ಣನವರ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವು ಭದ್ರಾವತಿ, ಶಿವು ತಳವಾರ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>