<p><strong>ಹಿರೇಕೆರೂರು:</strong> ನೂತನವಾಗಿ ಪ್ರಾರಂಭವಾದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳ ಆದೇಶದ ಮೇರೆಗೆ ಸ್ಥಾನಿಕ ತನಿಖಾ ಸಮಿತಿಯವರು ಪಟ್ಟಣದ ಬಿ.ಆರ್.ತಂಬಾಕದ ಪ್ರಥಮ ದರ್ಜೆ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ಒಪ್ಪಿಸಿದರು.</p>.<p>ತನಿಖಾ ಸಮಿತಿ ಅಧ್ಯಕ್ಷ ಡಾ.ಎಚ್.ಎಚ್.ಭರಡಿ ಮಾತನಾಡಿ, ‘ವಿದ್ಯಾಲಯವು ಸುಸಜ್ಜಿತ ಕಟ್ಟಡ, ಗ್ರಂಥಾಲಯ ಹಾಗೂ ಎಲ್ಲಾ ಮೂಲ ಸೌಲಭ್ಯಗಳನ್ನು ಹೊಂದಿದೆ. ನ್ಯಾಕ್ನಿಂದ 3 ಸಾರಿ ಮಾನ್ಯತೆ ಪಡೆದ ಈ ಮಹಾವಿದ್ಯಾಲಯವು ಗ್ರಾಮಾಂತರ ಪ್ರದೇಶದಲ್ಲಿ ಸ್ನಾತಕೋತ್ತರ ಎಂ.ಕಾಂ. ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಿ ಗ್ರಾಮೀಣ ಭಾಗದವರಿಗೆ ಉನ್ನತ ಶಿಕ್ಷಣವನ್ನು ಮನೆಬಾಗಿಲಿನಲ್ಲಿಯೇ ಪಡೆಯುವಂತಹ ಭಾಗ್ಯ ಕಲ್ಪಿಸಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಸಮಿತಿ ಸದಸ್ಯ ಡಾ.ಪಿ.ಜಿ.ಪಾಟೀಲ ಮಾತನಾಡಿ, ‘ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹೊಂದಿ ಉತ್ಕೃಷ್ಟ ಮಹಾವಿದ್ಯಾಲಯವಾಗಿ ಹೊರಹೊಮ್ಮಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡಿರುತ್ತಾರೆಂದು ಹೇಳಿದರು. </p>.<p>ಸಂಸ್ಥೆಯ ಅಧ್ಯಕ್ಷ ಎಸ್.ಬಿ.ತಿಪ್ಪಣ್ಣನವರ, ಗೌರವ ಕಾರ್ಯದರ್ಶಿ ಎಸ್.ಎಸ್.ಪಾಟೀಲ, ಆಡಳಿತಾಧಿಕಾರಿ ಎಸ್.ವೀರಭದ್ರಯ್ಯ ಪ್ರಾಂಶುಪಾಲ ಡಾ. ಎಸ್.ಬಿ.ಚನ್ನಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರು:</strong> ನೂತನವಾಗಿ ಪ್ರಾರಂಭವಾದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳ ಆದೇಶದ ಮೇರೆಗೆ ಸ್ಥಾನಿಕ ತನಿಖಾ ಸಮಿತಿಯವರು ಪಟ್ಟಣದ ಬಿ.ಆರ್.ತಂಬಾಕದ ಪ್ರಥಮ ದರ್ಜೆ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ಒಪ್ಪಿಸಿದರು.</p>.<p>ತನಿಖಾ ಸಮಿತಿ ಅಧ್ಯಕ್ಷ ಡಾ.ಎಚ್.ಎಚ್.ಭರಡಿ ಮಾತನಾಡಿ, ‘ವಿದ್ಯಾಲಯವು ಸುಸಜ್ಜಿತ ಕಟ್ಟಡ, ಗ್ರಂಥಾಲಯ ಹಾಗೂ ಎಲ್ಲಾ ಮೂಲ ಸೌಲಭ್ಯಗಳನ್ನು ಹೊಂದಿದೆ. ನ್ಯಾಕ್ನಿಂದ 3 ಸಾರಿ ಮಾನ್ಯತೆ ಪಡೆದ ಈ ಮಹಾವಿದ್ಯಾಲಯವು ಗ್ರಾಮಾಂತರ ಪ್ರದೇಶದಲ್ಲಿ ಸ್ನಾತಕೋತ್ತರ ಎಂ.ಕಾಂ. ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಿ ಗ್ರಾಮೀಣ ಭಾಗದವರಿಗೆ ಉನ್ನತ ಶಿಕ್ಷಣವನ್ನು ಮನೆಬಾಗಿಲಿನಲ್ಲಿಯೇ ಪಡೆಯುವಂತಹ ಭಾಗ್ಯ ಕಲ್ಪಿಸಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಸಮಿತಿ ಸದಸ್ಯ ಡಾ.ಪಿ.ಜಿ.ಪಾಟೀಲ ಮಾತನಾಡಿ, ‘ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹೊಂದಿ ಉತ್ಕೃಷ್ಟ ಮಹಾವಿದ್ಯಾಲಯವಾಗಿ ಹೊರಹೊಮ್ಮಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡಿರುತ್ತಾರೆಂದು ಹೇಳಿದರು. </p>.<p>ಸಂಸ್ಥೆಯ ಅಧ್ಯಕ್ಷ ಎಸ್.ಬಿ.ತಿಪ್ಪಣ್ಣನವರ, ಗೌರವ ಕಾರ್ಯದರ್ಶಿ ಎಸ್.ಎಸ್.ಪಾಟೀಲ, ಆಡಳಿತಾಧಿಕಾರಿ ಎಸ್.ವೀರಭದ್ರಯ್ಯ ಪ್ರಾಂಶುಪಾಲ ಡಾ. ಎಸ್.ಬಿ.ಚನ್ನಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>