<p><strong>ಹಾವೇರಿ</strong>: ಹಾವೇರಿ ಲೋಕಸಭಾ ಚುನಾವಣೆಯ ಕಣದಲ್ಲಿದ್ದ 14 ಅಭ್ಯರ್ಥಿಗಳಲ್ಲಿ 12 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ವಿಶೇಷವೆಂದರೆ ‘ನೋಟಾ’ ಮತಗಳಷ್ಟೂ ಈ ಅಭ್ಯರ್ಥಿಗಳು ಮತಗಳನ್ನು ಪಡೆದಿಲ್ಲ. </p>.<p>ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ –7,05,538 ಮತ್ತು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ– 6,62,025 ಮತಗಳನ್ನು ಪಡೆದಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳನ್ನು ಹೊರಡುಪಡಿಸಿದರೆ ವಿವಿಧ ಪಕ್ಷಗಳ ಉಮೇದುವಾರರು ಹಾಗೂ ಪಕ್ಷೇತರ ಸ್ಪರ್ಧಾಳುಗಳು ಠೇವಣಿ ಇಟ್ಟ ₹25 ಸಾವಿರ ಮೊತ್ತವನ್ನು ಕಳೆದುಕೊಂಡಿದ್ದಾರೆ. </p>.<p>ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿ ₹25 ಸಾವಿರ ಭದ್ರತಾ ಠೇವಣಿ ಇಡಬೇಕು. ಯೋಗ್ಯ ಅಭ್ಯರ್ಥಿಗಳೇ ಚುನಾವಣಾ ಕಣಕ್ಕಿಳಿಯಬೇಕು. ಯಾರೂ ಪ್ರಚಾರಕ್ಕಾಗಿ, ಬೇಕಾಬಿಟ್ಟಿ ಸ್ಪರ್ಧಿಸಬಾರದೆಂಬ ಉದ್ದೇಶದೊಂದಿಗೆ ಚುನಾವಣಾ ಆಯೋಗ ಅಭ್ಯರ್ಥಿಗಳಿಂದ ಭದ್ರತಾ ಠೇವಣಿ ಪಡೆಯುತ್ತದೆ.</p>.<p>ಅಭ್ಯರ್ಥಿ ತಾನು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಅರ್ಹ ಮತಗಳ 1/6 ಕ್ಕಿಂತ ಹೆಚ್ಚಿಗೆ ಮತ ಗಳಿಸಬೇಕು. ಅಷ್ಟು ಮತಗಳಿಸಿದರೆ ಚುನಾವಣಾಧಿಕಾರಿಗೆ ಪಾವತಿಸಿದ ಠೇವಣಿ ಹಣ ಅಭ್ಯರ್ಥಿಗೆ ಮರಳಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿ 1/6 ಕ್ಕಿಂತ ಕಡಿಮೆ ಮತ ಗಳಿಸಿದರೆ ಆತನ ಠೇವಣಿಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕುತ್ತದೆ. </p>.<p>10,865 ಮತದಾರರಿಂದ ನೋಟಾ!</p>.<p>ಕಣದಲ್ಲಿರುವ ಅಭ್ಯರ್ಥಿಗಳನ್ನು ತಿರಸ್ಕರಿಸುವ ಅಧಿಕಾರ ನೀಡಿದ ‘ನೋಟಾ’ ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಅಸ್ತ್ರವಾಗಿ ಬಳಕೆಯಾಗಿದೆ. ಹಾವೇರಿ ಮತ್ತು ಗದಗ ಜಿಲ್ಲೆಗಳ 8 ವಿಧಾನಸಭಾ ಕ್ಷೇತ್ರಗಳ ಒಟ್ಟು 10,865 ಮತದಾರರು ‘ನೋಟಾ’ ಆಯ್ಕೆ ಮಾಡಿಕೊಂಡು ಗಮನ ಸೆಳೆದಿದ್ದಾರೆ.</p>.<p>ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 17,92,774 ಮತದಾರರಿದ್ದು, ಈ ಪೈಕಿ 13,91,214 ಜನರು ಹಕ್ಕು ಚಲಾಯಿಸಿದ್ದರು. ಇದರಲ್ಲಿ ಶೇ 0.78 ಮತದಾರರು ‘ನೋಟಾ’ ಒತ್ತಿ ಅಭಿಪ್ರಾಯ ಪ್ರಕಟಿಸಿದ್ದಾರೆ.</p>.<p>ಏನಿದು ನೋಟಾ?</p>.<p>‘ನೋಟಾ’ (NOTA) ಎಂದರೆ ‘ಮೇಲಿನ ಯಾರೂ ಅಲ್ಲ’ (None of the above) ಎಂದರ್ಥ. ಚುನಾವಣಾ ಕಣದಲ್ಲಿರುವ ಯಾರೊಬ್ಬರೂ ಮತ ಪಡೆಯಲು ಅರ್ಹರಲ್ಲ ಎಂದೂ ಹೇಳಬಹುದು. ಮತಯಂತ್ರದಲ್ಲಿ ಈ ಆಯ್ಕೆ ಕೊನೆಯಲ್ಲಿ ಇರುತ್ತದೆ. ಪಕ್ಷ, ಪಕ್ಷೇತರ ಅಭ್ಯರ್ಥಿಗಳಲ್ಲಿ ಯಾರೂ ಇಷ್ಟವಿಲ್ಲ ಎಂಬ ಅಭಿಪ್ರಾಯವನ್ನು ಈ ಮೂಲಕ ಮತದಾರರು ದಾಖಲಿಸಿದ್ದಾರೆ.</p>.<p>‘ನೋಟಾ’ದ ಮತಗಳಿಗೆ ಸಿಂಧುತ್ವವಿಲ್ಲ. ಒಂದು ವೇಳೆ ಎಲ್ಲ ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತ ಬಿದ್ದರೂ ಉಳಿದ ಅಭ್ಯರ್ಥಿಗಳಲ್ಲಿ ಹೆಚ್ಚು ಮತ ಪಡೆದವರನ್ನು ವಿಜೇತರೆಂದು ಘೋಷಿಸಲಾಗುತ್ತದೆ. ‘ನೋಟಾ’ಗೆ ಪ್ರಾಶಸ್ತ್ಯ ಇಲ್ಲದೇ ಇದ್ದರೂ ಕಣದಲ್ಲಿರುವ ಅಭ್ಯರ್ಥಿಗಳ ವಿರುದ್ಧ ಅಸಮಾಧಾನ ಹೊರಹಾಕಲು ಇದೊಂದು ಪ್ರಬಲ ಅಸ್ತ್ರವಾಗುತ್ತಿದೆ.</p>.<p>2013ರ ಚುನಾವಣೆ ಉತ್ತರ ಭಾರತದಲ್ಲಿ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಮೊದಲ ಬಾರಿಗೆ ಚುನಾವಣಾ ಆಯೋಗ ‘ನೋಟಾ’ ಅವಕಾಶ ಕಲ್ಪಿಸಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ‘ನೋಟಾ’ ಆಯ್ಕೆ ನೀಡಲಾಯಿತು.</p>.<p>ಅಭ್ಯರ್ಥಿಗಳು ಪಡೆದ ಮತಗಳ ವಿವರ</p><p>ಕ್ರ.ಸಂ.;ಅಭ್ಯರ್ಥಿಗಳು;ಪಕ್ಷ;ಪಡೆದ ಮತಗಳು 1;ಬಸವರಾಜ ಬೊಮ್ಮಾಯಿ;ಬಿಜೆಪಿ;7055382;ಆನಂದಸ್ವಾಮಿ ಗಡ್ಡದೇವರಮಠ;ಕಾಂಗ್ರೆಸ್;6620253;ಸುನಂದಾ ಕರಿಯಪ್ಪ ಶಿರಹಟ್ಟಿ;ಪಕ್ಷೇತರ;47074;ಖಾಜಾಮೋಹಿದ್ದೀನ್ ಗುಡಗೇರಿ;ಸೋಷಿಯಲಿಸ್ಟ್ ಪಾರ್ಟಿ(ಇಂಡಿಯಾ);34015;ಗಂಗಾಧರ ಬಡಿಗೇರ;ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್);22706;ರುದ್ರಪ್ಪ ಬಸಪ್ಪ ಕುಂಬಾರ;ಪಕ್ಷೇತರ;13567;ಪ್ರಜಾಕೀಯ ಸಚಿನಕುಮಾರ ಕರ್ಜೆಕಣ್ಣನವರ;ಉತ್ತಮ ಪ್ರಜಾಕೀಯ ಪಾರ್ಟಿ;10728;ಬಸವರಾಜ ಬಿ. ಹಾದಿ;ಪಕ್ಷೇತರ;10719;ಡಾ.ಜಿ.ಎಚ್.ಇಮ್ರಾಪೂರ;ಪಕ್ಷೇತರ;95310;ಜಗದೀಶ ಯಲ್ಲಪ್ಪ ಬಂಕಾಪೂರ;ಪಕ್ಷೇತರ;67411;ತನು ಚಿಕ್ಕಣ್ಣ ಯಾದವ್;ಕರ್ನಾಟಕ ರಾಷ್ಟ್ರ ಸಮಿತಿ;63612;ಎಚ್.ಕೆ.ನರಸಿಂಹಪ್ಪ;ಸಮಾಜವಾದಿ ಜನತಾ ಪಾರ್ಟಿ (ಕರ್ನಾಟಕ);44613;ವಿಶ್ವನಾಥ ಶೀರಿ;ಏಕಂ ಸನಾತನ ಭಾರತ ದಳ;40114;ರಶೀದಾ ಬೇಗಂ;ಇಂಡಿಯನ್ ಮೂವ್ಮೆಂಟ್ ಪಾರ್ಟಿ;397 </p>.<p>686 ಮತಗಳು ತಿರಸ್ಕೃತ</p><p>ಹಾವೇರಿ: 18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಲ್ಲಿ 5985 ಅಂಚೆ ಮತದಾನ ಚಲಾವಣೆಗೊಂಡಿವೆ. ಈ ಪೈಕಿ 686 ಮತಗಳು ತಿರಸ್ಕೃತಗೊಂಡಿವೆ. 5299 ಮತಗಳು ಸ್ವೀಕೃತ ಮತಗಳಾಗಿವೆ. 34 ಮತಗಳು ನೋಟಾಕ್ಕೆ ಚಲಾವಣೆಗೊಂಡಿವೆ. ಆನಂದಸ್ವಾಮಿ ಗಡ್ಡದೇವರಮಠ(ಕಾಂಗ್ರೆಸ್) 1834 ಮತಗಳು ಹಾಗೂ ಬಸವರಾಜ ಬೊಮ್ಮಾಯಿ(ಬಿಜೆಪಿ) 3349 ಅಂಚೆ ಮತಗಳನ್ನು ಪಡೆದಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಹಾವೇರಿ ಲೋಕಸಭಾ ಚುನಾವಣೆಯ ಕಣದಲ್ಲಿದ್ದ 14 ಅಭ್ಯರ್ಥಿಗಳಲ್ಲಿ 12 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ವಿಶೇಷವೆಂದರೆ ‘ನೋಟಾ’ ಮತಗಳಷ್ಟೂ ಈ ಅಭ್ಯರ್ಥಿಗಳು ಮತಗಳನ್ನು ಪಡೆದಿಲ್ಲ. </p>.<p>ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ –7,05,538 ಮತ್ತು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ– 6,62,025 ಮತಗಳನ್ನು ಪಡೆದಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳನ್ನು ಹೊರಡುಪಡಿಸಿದರೆ ವಿವಿಧ ಪಕ್ಷಗಳ ಉಮೇದುವಾರರು ಹಾಗೂ ಪಕ್ಷೇತರ ಸ್ಪರ್ಧಾಳುಗಳು ಠೇವಣಿ ಇಟ್ಟ ₹25 ಸಾವಿರ ಮೊತ್ತವನ್ನು ಕಳೆದುಕೊಂಡಿದ್ದಾರೆ. </p>.<p>ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿ ₹25 ಸಾವಿರ ಭದ್ರತಾ ಠೇವಣಿ ಇಡಬೇಕು. ಯೋಗ್ಯ ಅಭ್ಯರ್ಥಿಗಳೇ ಚುನಾವಣಾ ಕಣಕ್ಕಿಳಿಯಬೇಕು. ಯಾರೂ ಪ್ರಚಾರಕ್ಕಾಗಿ, ಬೇಕಾಬಿಟ್ಟಿ ಸ್ಪರ್ಧಿಸಬಾರದೆಂಬ ಉದ್ದೇಶದೊಂದಿಗೆ ಚುನಾವಣಾ ಆಯೋಗ ಅಭ್ಯರ್ಥಿಗಳಿಂದ ಭದ್ರತಾ ಠೇವಣಿ ಪಡೆಯುತ್ತದೆ.</p>.<p>ಅಭ್ಯರ್ಥಿ ತಾನು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಅರ್ಹ ಮತಗಳ 1/6 ಕ್ಕಿಂತ ಹೆಚ್ಚಿಗೆ ಮತ ಗಳಿಸಬೇಕು. ಅಷ್ಟು ಮತಗಳಿಸಿದರೆ ಚುನಾವಣಾಧಿಕಾರಿಗೆ ಪಾವತಿಸಿದ ಠೇವಣಿ ಹಣ ಅಭ್ಯರ್ಥಿಗೆ ಮರಳಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿ 1/6 ಕ್ಕಿಂತ ಕಡಿಮೆ ಮತ ಗಳಿಸಿದರೆ ಆತನ ಠೇವಣಿಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕುತ್ತದೆ. </p>.<p>10,865 ಮತದಾರರಿಂದ ನೋಟಾ!</p>.<p>ಕಣದಲ್ಲಿರುವ ಅಭ್ಯರ್ಥಿಗಳನ್ನು ತಿರಸ್ಕರಿಸುವ ಅಧಿಕಾರ ನೀಡಿದ ‘ನೋಟಾ’ ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಅಸ್ತ್ರವಾಗಿ ಬಳಕೆಯಾಗಿದೆ. ಹಾವೇರಿ ಮತ್ತು ಗದಗ ಜಿಲ್ಲೆಗಳ 8 ವಿಧಾನಸಭಾ ಕ್ಷೇತ್ರಗಳ ಒಟ್ಟು 10,865 ಮತದಾರರು ‘ನೋಟಾ’ ಆಯ್ಕೆ ಮಾಡಿಕೊಂಡು ಗಮನ ಸೆಳೆದಿದ್ದಾರೆ.</p>.<p>ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 17,92,774 ಮತದಾರರಿದ್ದು, ಈ ಪೈಕಿ 13,91,214 ಜನರು ಹಕ್ಕು ಚಲಾಯಿಸಿದ್ದರು. ಇದರಲ್ಲಿ ಶೇ 0.78 ಮತದಾರರು ‘ನೋಟಾ’ ಒತ್ತಿ ಅಭಿಪ್ರಾಯ ಪ್ರಕಟಿಸಿದ್ದಾರೆ.</p>.<p>ಏನಿದು ನೋಟಾ?</p>.<p>‘ನೋಟಾ’ (NOTA) ಎಂದರೆ ‘ಮೇಲಿನ ಯಾರೂ ಅಲ್ಲ’ (None of the above) ಎಂದರ್ಥ. ಚುನಾವಣಾ ಕಣದಲ್ಲಿರುವ ಯಾರೊಬ್ಬರೂ ಮತ ಪಡೆಯಲು ಅರ್ಹರಲ್ಲ ಎಂದೂ ಹೇಳಬಹುದು. ಮತಯಂತ್ರದಲ್ಲಿ ಈ ಆಯ್ಕೆ ಕೊನೆಯಲ್ಲಿ ಇರುತ್ತದೆ. ಪಕ್ಷ, ಪಕ್ಷೇತರ ಅಭ್ಯರ್ಥಿಗಳಲ್ಲಿ ಯಾರೂ ಇಷ್ಟವಿಲ್ಲ ಎಂಬ ಅಭಿಪ್ರಾಯವನ್ನು ಈ ಮೂಲಕ ಮತದಾರರು ದಾಖಲಿಸಿದ್ದಾರೆ.</p>.<p>‘ನೋಟಾ’ದ ಮತಗಳಿಗೆ ಸಿಂಧುತ್ವವಿಲ್ಲ. ಒಂದು ವೇಳೆ ಎಲ್ಲ ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತ ಬಿದ್ದರೂ ಉಳಿದ ಅಭ್ಯರ್ಥಿಗಳಲ್ಲಿ ಹೆಚ್ಚು ಮತ ಪಡೆದವರನ್ನು ವಿಜೇತರೆಂದು ಘೋಷಿಸಲಾಗುತ್ತದೆ. ‘ನೋಟಾ’ಗೆ ಪ್ರಾಶಸ್ತ್ಯ ಇಲ್ಲದೇ ಇದ್ದರೂ ಕಣದಲ್ಲಿರುವ ಅಭ್ಯರ್ಥಿಗಳ ವಿರುದ್ಧ ಅಸಮಾಧಾನ ಹೊರಹಾಕಲು ಇದೊಂದು ಪ್ರಬಲ ಅಸ್ತ್ರವಾಗುತ್ತಿದೆ.</p>.<p>2013ರ ಚುನಾವಣೆ ಉತ್ತರ ಭಾರತದಲ್ಲಿ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಮೊದಲ ಬಾರಿಗೆ ಚುನಾವಣಾ ಆಯೋಗ ‘ನೋಟಾ’ ಅವಕಾಶ ಕಲ್ಪಿಸಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ‘ನೋಟಾ’ ಆಯ್ಕೆ ನೀಡಲಾಯಿತು.</p>.<p>ಅಭ್ಯರ್ಥಿಗಳು ಪಡೆದ ಮತಗಳ ವಿವರ</p><p>ಕ್ರ.ಸಂ.;ಅಭ್ಯರ್ಥಿಗಳು;ಪಕ್ಷ;ಪಡೆದ ಮತಗಳು 1;ಬಸವರಾಜ ಬೊಮ್ಮಾಯಿ;ಬಿಜೆಪಿ;7055382;ಆನಂದಸ್ವಾಮಿ ಗಡ್ಡದೇವರಮಠ;ಕಾಂಗ್ರೆಸ್;6620253;ಸುನಂದಾ ಕರಿಯಪ್ಪ ಶಿರಹಟ್ಟಿ;ಪಕ್ಷೇತರ;47074;ಖಾಜಾಮೋಹಿದ್ದೀನ್ ಗುಡಗೇರಿ;ಸೋಷಿಯಲಿಸ್ಟ್ ಪಾರ್ಟಿ(ಇಂಡಿಯಾ);34015;ಗಂಗಾಧರ ಬಡಿಗೇರ;ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್);22706;ರುದ್ರಪ್ಪ ಬಸಪ್ಪ ಕುಂಬಾರ;ಪಕ್ಷೇತರ;13567;ಪ್ರಜಾಕೀಯ ಸಚಿನಕುಮಾರ ಕರ್ಜೆಕಣ್ಣನವರ;ಉತ್ತಮ ಪ್ರಜಾಕೀಯ ಪಾರ್ಟಿ;10728;ಬಸವರಾಜ ಬಿ. ಹಾದಿ;ಪಕ್ಷೇತರ;10719;ಡಾ.ಜಿ.ಎಚ್.ಇಮ್ರಾಪೂರ;ಪಕ್ಷೇತರ;95310;ಜಗದೀಶ ಯಲ್ಲಪ್ಪ ಬಂಕಾಪೂರ;ಪಕ್ಷೇತರ;67411;ತನು ಚಿಕ್ಕಣ್ಣ ಯಾದವ್;ಕರ್ನಾಟಕ ರಾಷ್ಟ್ರ ಸಮಿತಿ;63612;ಎಚ್.ಕೆ.ನರಸಿಂಹಪ್ಪ;ಸಮಾಜವಾದಿ ಜನತಾ ಪಾರ್ಟಿ (ಕರ್ನಾಟಕ);44613;ವಿಶ್ವನಾಥ ಶೀರಿ;ಏಕಂ ಸನಾತನ ಭಾರತ ದಳ;40114;ರಶೀದಾ ಬೇಗಂ;ಇಂಡಿಯನ್ ಮೂವ್ಮೆಂಟ್ ಪಾರ್ಟಿ;397 </p>.<p>686 ಮತಗಳು ತಿರಸ್ಕೃತ</p><p>ಹಾವೇರಿ: 18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಲ್ಲಿ 5985 ಅಂಚೆ ಮತದಾನ ಚಲಾವಣೆಗೊಂಡಿವೆ. ಈ ಪೈಕಿ 686 ಮತಗಳು ತಿರಸ್ಕೃತಗೊಂಡಿವೆ. 5299 ಮತಗಳು ಸ್ವೀಕೃತ ಮತಗಳಾಗಿವೆ. 34 ಮತಗಳು ನೋಟಾಕ್ಕೆ ಚಲಾವಣೆಗೊಂಡಿವೆ. ಆನಂದಸ್ವಾಮಿ ಗಡ್ಡದೇವರಮಠ(ಕಾಂಗ್ರೆಸ್) 1834 ಮತಗಳು ಹಾಗೂ ಬಸವರಾಜ ಬೊಮ್ಮಾಯಿ(ಬಿಜೆಪಿ) 3349 ಅಂಚೆ ಮತಗಳನ್ನು ಪಡೆದಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>