<p><strong>ಕುಮಾರಪಟ್ಟಣ</strong>: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮೀಪದ ಚಳಗೇರಿ ಟೋಲ್ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಚುನಾವಣಾ ಸಿಬ್ಬಂದಿ ಸುಡು ಬಿಸಿಲನ್ನು ಲೆಕ್ಕಿಸದೆ ನಿರಂತರವಾಗಿ ವಾಹನಗಳ ತಪಾಸಣೆ ನಡೆಸಿದರು.</p>.<p>ತೋಟಗಾರಿಕೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಜಗದೀಶ್ ಮಾತನಾಡಿ, ಬೆಂಗಳೂರು ಮಾರ್ಗದಿಂದ ರಾಣೆಬೆನ್ನೂರು ನಗರದ ಕಡೆ ಸಂಚರಿಸುವ ಎಟಿಎಂ ಹಣ ಸಾಗಿಸುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ. ಅನುಮತಿ ಇಲ್ಲದ ಕಂಟೈನರ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಸರದಿಯಂತೆ ಮೂರು ತಂಡಗಳು ಕಾರ್ಯ ನಿರ್ವಹಿಸುತ್ತವೆ. ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ತಾಪಕ್ಕೆ ಕಾಂಕ್ರೀಟ್ ರಸ್ತೆ ನಿಲ್ಲುವುದಕ್ಕೆ ಆಗುವುದಿಲ್ಲ. ಟೆಂಟ್ ಮುಂಭಾಗದಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸಿದ್ದರೆ ಸಿಬ್ಬಂದಿಗೆ ಅನುಕೂಲವಾಗುತ್ತಿತ್ತು ಎಂದರು.</p>.<p>ಶಿಕ್ಷಕ ಗಂಗಾಧರ, ಮುದೇನೂರು ಗ್ರಾ.ಪಂ ಕಾರ್ಯದರ್ಶಿ ಹನುಮಂತಪ್ಪ ಹರಿಹರ, ಬೆನಕನಕೊಂಡ ಗ್ರಾ.ಪಂ ಕಾರ್ಯದರ್ಶಿ ಶ್ರೀಧರ್, ಪೊಲೀಸ್ ಕಾನ್ ಸ್ಟೇಬಲ್ ಕರಿಯಪ್ಪ ಗಸ್ತೇರ, ಬಿ.ಎನ್.ಬಾರ್ಕಿ, ಪರಶುರಾಮ ಕೊಡ್ಲೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಾರಪಟ್ಟಣ</strong>: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮೀಪದ ಚಳಗೇರಿ ಟೋಲ್ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಚುನಾವಣಾ ಸಿಬ್ಬಂದಿ ಸುಡು ಬಿಸಿಲನ್ನು ಲೆಕ್ಕಿಸದೆ ನಿರಂತರವಾಗಿ ವಾಹನಗಳ ತಪಾಸಣೆ ನಡೆಸಿದರು.</p>.<p>ತೋಟಗಾರಿಕೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಜಗದೀಶ್ ಮಾತನಾಡಿ, ಬೆಂಗಳೂರು ಮಾರ್ಗದಿಂದ ರಾಣೆಬೆನ್ನೂರು ನಗರದ ಕಡೆ ಸಂಚರಿಸುವ ಎಟಿಎಂ ಹಣ ಸಾಗಿಸುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ. ಅನುಮತಿ ಇಲ್ಲದ ಕಂಟೈನರ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಸರದಿಯಂತೆ ಮೂರು ತಂಡಗಳು ಕಾರ್ಯ ನಿರ್ವಹಿಸುತ್ತವೆ. ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ತಾಪಕ್ಕೆ ಕಾಂಕ್ರೀಟ್ ರಸ್ತೆ ನಿಲ್ಲುವುದಕ್ಕೆ ಆಗುವುದಿಲ್ಲ. ಟೆಂಟ್ ಮುಂಭಾಗದಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸಿದ್ದರೆ ಸಿಬ್ಬಂದಿಗೆ ಅನುಕೂಲವಾಗುತ್ತಿತ್ತು ಎಂದರು.</p>.<p>ಶಿಕ್ಷಕ ಗಂಗಾಧರ, ಮುದೇನೂರು ಗ್ರಾ.ಪಂ ಕಾರ್ಯದರ್ಶಿ ಹನುಮಂತಪ್ಪ ಹರಿಹರ, ಬೆನಕನಕೊಂಡ ಗ್ರಾ.ಪಂ ಕಾರ್ಯದರ್ಶಿ ಶ್ರೀಧರ್, ಪೊಲೀಸ್ ಕಾನ್ ಸ್ಟೇಬಲ್ ಕರಿಯಪ್ಪ ಗಸ್ತೇರ, ಬಿ.ಎನ್.ಬಾರ್ಕಿ, ಪರಶುರಾಮ ಕೊಡ್ಲೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>