<p><strong>ಬ್ಯಾಡಗಿ:</strong> ’ತಾಲ್ಲೂಕಿನ ರೈತರಿಗೆ 2022–23ನೇ ಸಾಲಿನ ಶೇ 75ರಷ್ಟು ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಹಶೀಲ್ದಾರ ಫಿರೋಜ್ಷಾ ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತರ ಹೋರಾಟ ಸಮಿತಿಯ ಗೌರವಾಧ್ಯಕ್ಷ ಮುರಿಗೆಪ್ಪ ಶೆಟ್ಟರ ಮಾತನಾಡಿ, ’ಕಳೆದ ವರ್ಷ ಬೆಳೆ ವಿಮೆ ಕಂತು ತುಂಬಿದ ರೈತರಿಗೆ ಶೇ. 25ರಷ್ಟು ಮಧ್ಯಂತರ ಪರಿಹಾರ ಮಾತ್ರೆ ಬಂದಿದೆ. ಉಳಿದ ಶೇ 75ರಷ್ಟು ಪರಿಹಾರ ವಿತರಿಸದೆ ರೈತರಿಗೆ ಮೋಸ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಹೋರಾಟ ಸಮಿತಿಯ ಅಧ್ಯಕ್ಷ ನಿಂಗಪ್ಪ ಮಾಗೋಡ, ‘ಕೃಷಿ, ತೋಟಗಾರಿಕೆ ಇಲಾಖೆಗಳು ಬೆಳೆ ವಿಮೆ ಕಂತು ತುಂಬಿಸಿಕೊಳ್ಳಲು ರೈತರಿಗೆ ಕೊನೆಯ ಅವಧಿಯ ಗಡುವು ನೀಡುತ್ತಿದೆ. ಆದರೆ, ವಿಮಾ ಪರಿಹಾರ ನೀಡುವಾಗ ಗಡುವು ಯಾಕೆ ನೀಡುವುದಿಲ್ಲ’ ಎಂದು ಪ್ರಶ್ನಿಸಿದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ ಬಿನ್ನಾಳ, ‘ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ಮಳೆಯಾಗದೇ, ಬೀಜ ಗೊಬ್ಬರ ಖರೀದಿಸಲು ರೈತರು ಪರದಾಡುತ್ತಿದ್ದಾರೆ. ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಉಚಿತವಾಗಿ ನೀಡಬೇಕು‘ ಎಂದು ಒತ್ತಾಯಿಸಿದರು.</p>.<p>ಈರಪ್ಪ ಸಂಕಣ್ಣನವರ, ಶಶಿಧರಸ್ವಾಮಿ ಗೊಲ್ಲರಹಳ್ಳಿಮಠ, ಬಿ.ಬಿ. ಬಂಗೇರ, ಮೃತ್ಯುಂಜಯ ಕಡೇಮನಿ, ರಾಮಣ್ಣ ಹಡಗಲಿ, ಗಣೇಶ ಸಂಕಣ್ಣವರ, ಈರಪ್ಪ ಓಲೇಕಾರ, ಪುಟ್ಟಪ್ಪ ಬಾರ್ಕಿ, ಮಲಕಪ್ಪ ಸಂಕಣ್ಣವರ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ’ತಾಲ್ಲೂಕಿನ ರೈತರಿಗೆ 2022–23ನೇ ಸಾಲಿನ ಶೇ 75ರಷ್ಟು ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಹಶೀಲ್ದಾರ ಫಿರೋಜ್ಷಾ ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತರ ಹೋರಾಟ ಸಮಿತಿಯ ಗೌರವಾಧ್ಯಕ್ಷ ಮುರಿಗೆಪ್ಪ ಶೆಟ್ಟರ ಮಾತನಾಡಿ, ’ಕಳೆದ ವರ್ಷ ಬೆಳೆ ವಿಮೆ ಕಂತು ತುಂಬಿದ ರೈತರಿಗೆ ಶೇ. 25ರಷ್ಟು ಮಧ್ಯಂತರ ಪರಿಹಾರ ಮಾತ್ರೆ ಬಂದಿದೆ. ಉಳಿದ ಶೇ 75ರಷ್ಟು ಪರಿಹಾರ ವಿತರಿಸದೆ ರೈತರಿಗೆ ಮೋಸ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಹೋರಾಟ ಸಮಿತಿಯ ಅಧ್ಯಕ್ಷ ನಿಂಗಪ್ಪ ಮಾಗೋಡ, ‘ಕೃಷಿ, ತೋಟಗಾರಿಕೆ ಇಲಾಖೆಗಳು ಬೆಳೆ ವಿಮೆ ಕಂತು ತುಂಬಿಸಿಕೊಳ್ಳಲು ರೈತರಿಗೆ ಕೊನೆಯ ಅವಧಿಯ ಗಡುವು ನೀಡುತ್ತಿದೆ. ಆದರೆ, ವಿಮಾ ಪರಿಹಾರ ನೀಡುವಾಗ ಗಡುವು ಯಾಕೆ ನೀಡುವುದಿಲ್ಲ’ ಎಂದು ಪ್ರಶ್ನಿಸಿದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ ಬಿನ್ನಾಳ, ‘ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ಮಳೆಯಾಗದೇ, ಬೀಜ ಗೊಬ್ಬರ ಖರೀದಿಸಲು ರೈತರು ಪರದಾಡುತ್ತಿದ್ದಾರೆ. ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಉಚಿತವಾಗಿ ನೀಡಬೇಕು‘ ಎಂದು ಒತ್ತಾಯಿಸಿದರು.</p>.<p>ಈರಪ್ಪ ಸಂಕಣ್ಣನವರ, ಶಶಿಧರಸ್ವಾಮಿ ಗೊಲ್ಲರಹಳ್ಳಿಮಠ, ಬಿ.ಬಿ. ಬಂಗೇರ, ಮೃತ್ಯುಂಜಯ ಕಡೇಮನಿ, ರಾಮಣ್ಣ ಹಡಗಲಿ, ಗಣೇಶ ಸಂಕಣ್ಣವರ, ಈರಪ್ಪ ಓಲೇಕಾರ, ಪುಟ್ಟಪ್ಪ ಬಾರ್ಕಿ, ಮಲಕಪ್ಪ ಸಂಕಣ್ಣವರ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>