<p><strong>ಸವಣೂರು</strong>: ‘ರಾಜ್ಯಸಭೆ ಚುನಾವಣೆ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಯ್ಕೆಯಾಗುವ ವಿಶ್ವಾಸವಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಭಾನುವಾರ ಮಾತನಾಡಿದ ಅವರು, ‘ಬಿಜೆಪಿ ಶಾಸಕರ ಸಂಖ್ಯೆ 66 ಇದೆ. ಜೆಡಿಎಸ್ ನಿಂದ 19 ಜನ ಶಾಸಕರ ಸಂಖ್ಯೆ ಇದೆ. ರಾಜ್ಯ ಸಭೆಯ ಒಂದು ಸ್ಥಾನಕ್ಕೆ ಬೇಕಾಗುವ ಶಾಸಕರ ಸಂಖ್ಯೆ ಮೀರಿ 40 ಶಾಸಕರ ಸಂಖ್ಯೆ ಹೆಚ್ಚಿದೆ’ ಎಂದರು.</p>.<p>‘ಆದಾಗ್ಯೂ ಕಾಂಗ್ರೆಸ್ ನವರ ಗುಂಪುಗಾರಿಕೆಯಿಂದ ಕ್ರಾಸ್ ಓಟಿಂಗ್ ಆಗೋ ಭಯದಿಂದ ರೆಸಾರ್ಟ್ ರಾಜಕಾರಣ ಮಾಡ್ತಾ ಇದ್ದಾರೆ. ಡಿಕೆಶಿ ಕೂಡ ಅವರ ಪ್ರಭಾವ ಬೀರುತ್ತಿದ್ದಾರೆ’ ಎಂದು ದೂರಿದರು.</p>.<p>‘ಹಾವೇರಿ - ಗದಗ ಲೋಕಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಬಗ್ಗೆ ನಮ್ಮ ವರಿಷ್ಠರು ತೀರ್ಮಾನ ಮಾಡಲಿದ್ದಾರೆ’ ಎಂದರು.</p>.<p>‘ಸವಣೂರು ತಹಶಿಲ್ದಾರರ ಕಚೇರಿ ಡಿಜಟಲೀಕರಣ ಮಾಡುವುದಾಗಿ ಸರ್ಕಾರ ಹೇಳಿದೆ. ಹಾಗೆ ಮಾಡಿದರೆ ಎಲ್ಲವೂ ಸರಿಯಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು</strong>: ‘ರಾಜ್ಯಸಭೆ ಚುನಾವಣೆ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಯ್ಕೆಯಾಗುವ ವಿಶ್ವಾಸವಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಭಾನುವಾರ ಮಾತನಾಡಿದ ಅವರು, ‘ಬಿಜೆಪಿ ಶಾಸಕರ ಸಂಖ್ಯೆ 66 ಇದೆ. ಜೆಡಿಎಸ್ ನಿಂದ 19 ಜನ ಶಾಸಕರ ಸಂಖ್ಯೆ ಇದೆ. ರಾಜ್ಯ ಸಭೆಯ ಒಂದು ಸ್ಥಾನಕ್ಕೆ ಬೇಕಾಗುವ ಶಾಸಕರ ಸಂಖ್ಯೆ ಮೀರಿ 40 ಶಾಸಕರ ಸಂಖ್ಯೆ ಹೆಚ್ಚಿದೆ’ ಎಂದರು.</p>.<p>‘ಆದಾಗ್ಯೂ ಕಾಂಗ್ರೆಸ್ ನವರ ಗುಂಪುಗಾರಿಕೆಯಿಂದ ಕ್ರಾಸ್ ಓಟಿಂಗ್ ಆಗೋ ಭಯದಿಂದ ರೆಸಾರ್ಟ್ ರಾಜಕಾರಣ ಮಾಡ್ತಾ ಇದ್ದಾರೆ. ಡಿಕೆಶಿ ಕೂಡ ಅವರ ಪ್ರಭಾವ ಬೀರುತ್ತಿದ್ದಾರೆ’ ಎಂದು ದೂರಿದರು.</p>.<p>‘ಹಾವೇರಿ - ಗದಗ ಲೋಕಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಬಗ್ಗೆ ನಮ್ಮ ವರಿಷ್ಠರು ತೀರ್ಮಾನ ಮಾಡಲಿದ್ದಾರೆ’ ಎಂದರು.</p>.<p>‘ಸವಣೂರು ತಹಶಿಲ್ದಾರರ ಕಚೇರಿ ಡಿಜಟಲೀಕರಣ ಮಾಡುವುದಾಗಿ ಸರ್ಕಾರ ಹೇಳಿದೆ. ಹಾಗೆ ಮಾಡಿದರೆ ಎಲ್ಲವೂ ಸರಿಯಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>