<p><strong>ಶಿಗ್ಗಾವಿ:</strong> ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆ ವ್ಯಾಪ್ತಿಯ ನೆಹರೂ ಗಾರ್ಡನ್ ಆವರಣದಲ್ಲಿ ಸೋಮವಾರ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು. </p>.<p>ಪಟ್ಟಣದ ನಿವಾಸಿಗಳಾದ ಸೋಮಶೇಖರ ಗೌರಿಮಠ, ಗಂಗಾಧರ ಮಾಮ್ಲೆಪಟ್ಟಣಶೆಟ್ಟರ, ಮೋಹನ ಮಿರಜಕರ, ಈರಣ್ಣ ಬಳಿಗಾರ, ಹನಮಂತ ಹೊಸಮನಿ ಅವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಲಾಗಿದೆ.</p>.<p>‘ನೆಹರು ಗಾರ್ಡನ್ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು, ಇದರಿಂದ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿರಲಿಲ್ಲ. ನ್ಯಾಯಾಲಯದಲ್ಲಿನ ವ್ಯಾಜ್ಯ ಇತ್ಯಾರ್ಥವಾಗಿಲ್ಲ. ಅದಕ್ಕೆ ರಾಮನ ಪೂಜೆಗೆ ಅವಕಾಶ ನೀಡಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿ ಎ.ಶಿವಪ್ಪ ತಿಳಿಸಿದರು.</p>.<p>ಮುಖಂಡ ಗಂಗಾಧರ ಮಾಮ್ಲೆಪಟ್ಟಣಶೆಟ್ಟರ ಮಾತನಾಡಿ,‘ನಮಗೆ ಇಲ್ಲಿ ರಾಮನ ಪೂಜೆ ಮಾಡಲು ಅವಕಾಶ ಕೊಡದೆ ಅವಮಾನ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಹೋರಾಟ ಮಾಡುತ್ತೇವೆ’ ಎಂದರು.</p>.<p>‘ಮುಂಜಾಗ್ರತೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಐವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಲಾಗಿದೆ’ ಎಂದು ಬಂಕಾಪುರ ಠಾಣೆಯ ಪಿಎಸ್ಐ ನಿಂಗರಾಜ ಕರಕಣ್ಣನವರ ತಿಳಿಸಿದರು. ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆ ವ್ಯಾಪ್ತಿಯ ನೆಹರೂ ಗಾರ್ಡನ್ ಆವರಣದಲ್ಲಿ ಸೋಮವಾರ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು. </p>.<p>ಪಟ್ಟಣದ ನಿವಾಸಿಗಳಾದ ಸೋಮಶೇಖರ ಗೌರಿಮಠ, ಗಂಗಾಧರ ಮಾಮ್ಲೆಪಟ್ಟಣಶೆಟ್ಟರ, ಮೋಹನ ಮಿರಜಕರ, ಈರಣ್ಣ ಬಳಿಗಾರ, ಹನಮಂತ ಹೊಸಮನಿ ಅವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಲಾಗಿದೆ.</p>.<p>‘ನೆಹರು ಗಾರ್ಡನ್ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು, ಇದರಿಂದ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿರಲಿಲ್ಲ. ನ್ಯಾಯಾಲಯದಲ್ಲಿನ ವ್ಯಾಜ್ಯ ಇತ್ಯಾರ್ಥವಾಗಿಲ್ಲ. ಅದಕ್ಕೆ ರಾಮನ ಪೂಜೆಗೆ ಅವಕಾಶ ನೀಡಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿ ಎ.ಶಿವಪ್ಪ ತಿಳಿಸಿದರು.</p>.<p>ಮುಖಂಡ ಗಂಗಾಧರ ಮಾಮ್ಲೆಪಟ್ಟಣಶೆಟ್ಟರ ಮಾತನಾಡಿ,‘ನಮಗೆ ಇಲ್ಲಿ ರಾಮನ ಪೂಜೆ ಮಾಡಲು ಅವಕಾಶ ಕೊಡದೆ ಅವಮಾನ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಹೋರಾಟ ಮಾಡುತ್ತೇವೆ’ ಎಂದರು.</p>.<p>‘ಮುಂಜಾಗ್ರತೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಐವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಲಾಗಿದೆ’ ಎಂದು ಬಂಕಾಪುರ ಠಾಣೆಯ ಪಿಎಸ್ಐ ನಿಂಗರಾಜ ಕರಕಣ್ಣನವರ ತಿಳಿಸಿದರು. ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>